Homeಕರ್ನಾಟಕಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಬಡ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ವಿತರಿಸಿದ ಕಿಟ್‌ಗಳು ಬಡವರಿಗೆ ತಲುಪೇ ಇಲ್ಲ. ಬದಲಿಗೆ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಬಿಜೆಪಿ ಮುಖಂಡರ ಮನೆ ಮತ್ತು ಶಾಲೆಗಳಲ್ಲಿ ನೂರಾರು ಆಹಾರ ಕಿಟ್‌ಗಳು ಶೇಖರಣೆಯಾಗಿದ್ದು, ವಿಷಯದ ರೊಚ್ಚಿಗೆದ್ದು ಜನರು ಅವುಗಳನ್ನು ದೋಚಿದ ಘಟನೆ ಜರುಗಿದೆ.

ಮೇ 24ರಂದು ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳಿರುವುದು ತಿಳಿದುಬಂದಿದ್ದರಿಂದ ಸ್ಥಳೀಯ ತಹಶಿಲ್ದಾರ್‌ ಮತ್ತು ಪೊಲೀಸ್‌ ಇನ್ಸ್‌ಪೆಕ್ಟರ್‌ರವರ ಬಳಿ ಕೆಲವರು ದೂರಿದ್ದಾರೆ. ಆದರೆ ಯಾವುದೇ ಕ್ರಮ ಜರುಗಿಲ್ಲ. ಅದೇ ರೀತಿ ಮೇ 25 ರಂದು ಪುರಸಭೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತ ಅಭ್ಯರ್ಥಿ ಪ್ರಕಾಶ್ ನಂದಿಕೊಪ್ಪರವರ ಮನೆಯಲ್ಲಿಯೂ ಸಹ ನೂರಾರು ಕಿಟ್‌ಗಳು ಪತ್ತೆಯಾಗಿವೆ. ಇದರಿಂದ ರೊಚ್ಚಿಗೆದ್ದ ಕೆಲವರು ಪ್ರತಿಭಟನೆ ನಡೆಸಿದ್ದಾರೆ.

ಬಡವರ ಆಹಾರದ ಕಿಟ್‌ಗಳನ್ನು ನುಂಗಿದ ಹಾನಗಲ್‌ ಬಿಜೆಪಿ ಮುಖಂಡ

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳನ್ನು ಹಾನಗಲ್‌ನ ಬಿಜೆಪಿ ಮುಖಂಡರು ಹಂಚದೆ ತಮ್ಮ ಮನೆಯಲ್ಲಿಯೇ ಸಂಗ್ರಹಿಸಿಕೊಂಡಿದ್ದಾರೆ. ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳನ್ನು ಇಟ್ಟುಕೊಂಡಿದ್ದು ತಿಳಿಯುತ್ತಲೇ ಅಲ್ಲಿನ ಜನರು ಮುಗಿಬಿದ್ದ ಸಿಕ್ಕಷ್ಟು ಕಿಟ್‌ಗಳನ್ನು ಎತ್ತಿಕೊಂಡು ಹೋಗಿದ್ದಾರೆ.

Posted by Naanu Gauri on Monday, May 25, 2020

ಬಡಕಾರ್ಮಿಕರಿಗೆ ಸೇರಬೇಕಾಗಿದ್ದ ಕಿಟ್‌ಗಳನ್ನು ಬಿಜೆಪಿ ಮುಖಂಡರು ಸ್ವಂತಕ್ಕೆ ಬಳಸುತ್ತಿದ್ದಾರೆ, ಆ ಮೂಲಕ ಬಡಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು ಒಂದಷ್ಟು ಕಿಟ್‌ಗಳನ್ನು ರಾತ್ರೋರಾತ್ರಿ ಸಿಕ್ಕ ಸಿಕ್ಕವರಿಗೆಲ್ಲ ಹಂಚಿದ್ದಾರೆ.

ಇನ್ನು ಬಿಜೆಪಿ ಮುಖಂಡರಿಗೆ ಸೇರಿದ ಹಾನಗಲ್ಲದ ಜನತಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದಷ್ಟು ಕಿಟ್‌ಗಳನ್ನು ಸಾಗಿಸಲಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ವಿಕಾಸ್‌ ನಿಂಗೋಜಿಯವರು ಆರೋಪಿಸಿದ್ದಾರೆ.

Posted by Ravindrav Deshapande on Monday, May 25, 2020

ಇನ್ನು ಕೆಲವಷ್ಟು ಕಿಟ್‌ಗಳು ಬಿಜೆಪಿ ಮುಖಂಡರ ಮನೆಯಲ್ಲಿಯೇ ಸಂಗ್ರಹಿಸಿಟ್ಟ ವಿಷಯ ಬಹಿರಂಗವಾಗಿ ಜನರು ಅವರ ಮನೆಯ ಮುಂದೆ ನೆರೆದು ಸಿಕ್ಕಷ್ಟು ಆಹಾರದ ಕಿಟ್‌ಗಳನ್ನು ದೋಚುತ್ತಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Posted by Vikas Ningoji on Friday, May 22, 2020

ಕಾರ್ಮಿಕ ಇಲಾಖೆ ಈ ಕಿಟ್‌ಗಳನ್ನು ಜನರಿಗೆ ಹಂಚಿ ಎಂದು ತಿಂಗಳುಗಳ ಹಿಂದೆಯೇ ಸರಬರಾಜು ಮಾಡಿತ್ತು. ಆದರೆ ಈ ಬಿಜೆಪಿ ಮುಖಂಡರು ಅವುಗಳನ್ನು ಹಂಚದೇ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ವಿಷಯ ತಿಳಿದು ನಾವು ದೂರು ನೀಡಿದಾಗ ಸಿಕ್ಕ ಸಿಕ್ಕ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ. ಅಲ್ಲದೇ ಇವರ ಅಕ್ರಮಕ್ಕೆ ಶಾಲೆಯನ್ನು ಸಹ ದುರ್ಬಳಕೆ ಮಾಡಿಕೊಂಡಿದ್ದು ಕಿಟ್‌ಗಳನ್ನು ಶಾಲೆಗಳಲ್ಲಿ ಬಚ್ಚಿಟ್ಟಿದ್ದಾರೆ. ಅತ್ತ ಕಾರ್ಮಿಕರು ಹಸಿವಿನಿಂದ ಸಾಯುತ್ತಿದ್ದರೆ ಇತ್ತ ಈ ಬಿಜೆಪಿ ಮುಖಂಡರು ದುರಾಸೆಗೆ ಬಿದ್ದು ಜನರಿಗೆ ಮೋಸ ಮಾಡಿದ್ದಾರೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಕಾಸ್‌ ನಿಂಗೋಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...