Homeಕರ್ನಾಟಕಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!

- Advertisement -
- Advertisement -

ಲಾಕ್‌ಡೌನ್‌ ಕಾರಣಕ್ಕೆ ಕೆಲಸ ಕಳೆದುಕೊಂಡ ಬಡ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ವಿತರಿಸಿದ ಕಿಟ್‌ಗಳು ಬಡವರಿಗೆ ತಲುಪೇ ಇಲ್ಲ. ಬದಲಿಗೆ ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ಬಿಜೆಪಿ ಮುಖಂಡರ ಮನೆ ಮತ್ತು ಶಾಲೆಗಳಲ್ಲಿ ನೂರಾರು ಆಹಾರ ಕಿಟ್‌ಗಳು ಶೇಖರಣೆಯಾಗಿದ್ದು, ವಿಷಯದ ರೊಚ್ಚಿಗೆದ್ದು ಜನರು ಅವುಗಳನ್ನು ದೋಚಿದ ಘಟನೆ ಜರುಗಿದೆ.

ಮೇ 24ರಂದು ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳಿರುವುದು ತಿಳಿದುಬಂದಿದ್ದರಿಂದ ಸ್ಥಳೀಯ ತಹಶಿಲ್ದಾರ್‌ ಮತ್ತು ಪೊಲೀಸ್‌ ಇನ್ಸ್‌ಪೆಕ್ಟರ್‌ರವರ ಬಳಿ ಕೆಲವರು ದೂರಿದ್ದಾರೆ. ಆದರೆ ಯಾವುದೇ ಕ್ರಮ ಜರುಗಿಲ್ಲ. ಅದೇ ರೀತಿ ಮೇ 25 ರಂದು ಪುರಸಭೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತ ಅಭ್ಯರ್ಥಿ ಪ್ರಕಾಶ್ ನಂದಿಕೊಪ್ಪರವರ ಮನೆಯಲ್ಲಿಯೂ ಸಹ ನೂರಾರು ಕಿಟ್‌ಗಳು ಪತ್ತೆಯಾಗಿವೆ. ಇದರಿಂದ ರೊಚ್ಚಿಗೆದ್ದ ಕೆಲವರು ಪ್ರತಿಭಟನೆ ನಡೆಸಿದ್ದಾರೆ.

ಬಡವರ ಆಹಾರದ ಕಿಟ್‌ಗಳನ್ನು ನುಂಗಿದ ಹಾನಗಲ್‌ ಬಿಜೆಪಿ ಮುಖಂಡ

ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳನ್ನು ಹಾನಗಲ್‌ನ ಬಿಜೆಪಿ ಮುಖಂಡರು ಹಂಚದೆ ತಮ್ಮ ಮನೆಯಲ್ಲಿಯೇ ಸಂಗ್ರಹಿಸಿಕೊಂಡಿದ್ದಾರೆ. ಬಿಜೆಪಿಯ ಪುರಸಭಾ ಸದಸ್ಯ ಕಲ್ಯಾಣ್ ಕುಮಾರ್‌ರವರ ಮನೆಯಲ್ಲಿ ನೂರಾರು ಕಿಟ್‌ಗಳನ್ನು ಇಟ್ಟುಕೊಂಡಿದ್ದು ತಿಳಿಯುತ್ತಲೇ ಅಲ್ಲಿನ ಜನರು ಮುಗಿಬಿದ್ದ ಸಿಕ್ಕಷ್ಟು ಕಿಟ್‌ಗಳನ್ನು ಎತ್ತಿಕೊಂಡು ಹೋಗಿದ್ದಾರೆ.

Posted by Naanu Gauri on Monday, May 25, 2020

ಬಡಕಾರ್ಮಿಕರಿಗೆ ಸೇರಬೇಕಾಗಿದ್ದ ಕಿಟ್‌ಗಳನ್ನು ಬಿಜೆಪಿ ಮುಖಂಡರು ಸ್ವಂತಕ್ಕೆ ಬಳಸುತ್ತಿದ್ದಾರೆ, ಆ ಮೂಲಕ ಬಡಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ ನಾಯಕರು ಒಂದಷ್ಟು ಕಿಟ್‌ಗಳನ್ನು ರಾತ್ರೋರಾತ್ರಿ ಸಿಕ್ಕ ಸಿಕ್ಕವರಿಗೆಲ್ಲ ಹಂಚಿದ್ದಾರೆ.

ಇನ್ನು ಬಿಜೆಪಿ ಮುಖಂಡರಿಗೆ ಸೇರಿದ ಹಾನಗಲ್ಲದ ಜನತಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದಷ್ಟು ಕಿಟ್‌ಗಳನ್ನು ಸಾಗಿಸಲಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ವಿಕಾಸ್‌ ನಿಂಗೋಜಿಯವರು ಆರೋಪಿಸಿದ್ದಾರೆ.

Posted by Ravindrav Deshapande on Monday, May 25, 2020

ಇನ್ನು ಕೆಲವಷ್ಟು ಕಿಟ್‌ಗಳು ಬಿಜೆಪಿ ಮುಖಂಡರ ಮನೆಯಲ್ಲಿಯೇ ಸಂಗ್ರಹಿಸಿಟ್ಟ ವಿಷಯ ಬಹಿರಂಗವಾಗಿ ಜನರು ಅವರ ಮನೆಯ ಮುಂದೆ ನೆರೆದು ಸಿಕ್ಕಷ್ಟು ಆಹಾರದ ಕಿಟ್‌ಗಳನ್ನು ದೋಚುತ್ತಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Posted by Vikas Ningoji on Friday, May 22, 2020

ಕಾರ್ಮಿಕ ಇಲಾಖೆ ಈ ಕಿಟ್‌ಗಳನ್ನು ಜನರಿಗೆ ಹಂಚಿ ಎಂದು ತಿಂಗಳುಗಳ ಹಿಂದೆಯೇ ಸರಬರಾಜು ಮಾಡಿತ್ತು. ಆದರೆ ಈ ಬಿಜೆಪಿ ಮುಖಂಡರು ಅವುಗಳನ್ನು ಹಂಚದೇ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ವಿಷಯ ತಿಳಿದು ನಾವು ದೂರು ನೀಡಿದಾಗ ಸಿಕ್ಕ ಸಿಕ್ಕ ಬಿಜೆಪಿ ಕಾರ್ಯಕರ್ತರಿಗೆ ಹಂಚಿದ್ದಾರೆ. ಅಲ್ಲದೇ ಇವರ ಅಕ್ರಮಕ್ಕೆ ಶಾಲೆಯನ್ನು ಸಹ ದುರ್ಬಳಕೆ ಮಾಡಿಕೊಂಡಿದ್ದು ಕಿಟ್‌ಗಳನ್ನು ಶಾಲೆಗಳಲ್ಲಿ ಬಚ್ಚಿಟ್ಟಿದ್ದಾರೆ. ಅತ್ತ ಕಾರ್ಮಿಕರು ಹಸಿವಿನಿಂದ ಸಾಯುತ್ತಿದ್ದರೆ ಇತ್ತ ಈ ಬಿಜೆಪಿ ಮುಖಂಡರು ದುರಾಸೆಗೆ ಬಿದ್ದು ಜನರಿಗೆ ಮೋಸ ಮಾಡಿದ್ದಾರೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಕಾಸ್‌ ನಿಂಗೋಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...