Homeಮುಖಪುಟಆರೋಪಿ ಬ್ರಿಜ್ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು, ಬಿಜೆಪಿ ನಾಯಕರು; ಪೋಕ್ಸೋ ವಿರುದ್ಧ ವಾಗ್ದಾಳಿ

ಆರೋಪಿ ಬ್ರಿಜ್ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು, ಬಿಜೆಪಿ ನಾಯಕರು; ಪೋಕ್ಸೋ ವಿರುದ್ಧ ವಾಗ್ದಾಳಿ

- Advertisement -
- Advertisement -

ಭಾರತದಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಬೆಂಬಲಿಸುತ್ತಿದ್ದರೆ, ಮತ್ತೊಂದೆಡೆ ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ಬಿಜೆಪಿ ನಾಯಕರು ನಿಂತಿದ್ದಾರೆ.

ಆರೋಪಿಯನ್ನು ಬಂಧಿಸಬೇಕು ಎಂಬ ಆಗ್ರಹ ತೀವ್ರವಾಗುತ್ತಿದ್ದರೂ ಸಂತ್ರಸ್ತರ ಪರವಾಗಿ ನಿಲ್ಲದ ಬಿಜೆಪಿ ನಾಯಕರು ಬ್ರಿಜ್‌ಭೂಷಣ್ ಪರ ಅಖಾಡಕ್ಕೆ ಇಳಿದಿದ್ದಾರೆ.

ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ವ್ಯಾಪಕವಾದ ರಾಜಕೀಯ ಪ್ರಭಾವವನ್ನು ಹೊಂದಿರುವ ದೇವಿಪಟನ್ ಪ್ರದೇಶದ ಹಲವಾರು ಬಿಜೆಪಿ ಶಾಸಕರು ಆರೋಪಿಯ ಬೆಂಬಲಕ್ಕೆ ಬಂದಿದ್ದಾರೆ. ಅಯೋಧ್ಯೆಯಲ್ಲಿ ಆರೋಪಿ ಬ್ರಿಜ್‌ ಆರೋಜಿಸಿರುವ ರ್‍ಯಾಲಿಯಲ್ಲಿ ಶಕ್ತಿ ಪ್ರದರ್ಶನವಾಗಲಿದೆ.

ಜೂನ್ 5ರಂದು ಅಯೋಧ್ಯೆಯಲ್ಲಿ ‘ಜನ್ ಚೇತನ ಮಹಾ ರ್‍ಯಾಲಿ’ಯನ್ನು ಆಯೋಜಿಸುವುದಾಗಿ ಬ್ರಿಜ್ ಭೂಷಣ್ ಹೇಳಿದ್ದಾರೆ. ನವದೆಹಲಿಯಲ್ಲಿ ಆರೋಪಿಯ ವಿರುದ್ಧ ನಡೆಯುತ್ತಿರುವ ಮಹಿಳಾ ಕುಸ್ತಿಪಟುಗಳ ವಿರುದ್ಧ ಹಿಂದೂ ಧಾರ್ಮಿಕ ಮುಖಂಡರ ಬೆಂಬಲವನ್ನು ಪಡೆಯುವ ಪ್ರಯತ್ನವೆಂದೇ ಈ ರ್‍ಯಾಲಿಯನ್ನು ಪರಿಗಣಿಸಲಾಗಿದೆ.

ಅಯೋಧ್ಯೆಯ ಪ್ರಮುಖ ಸ್ವಾಮೀಜಿಗಳು ಕೂಡ ಸಿಂಗ್‌ ಬೆಂಬಲಕ್ಕೆ ನಿಂತಿದ್ದಾರೆ ಎಂದು ವರದಿಯಾಗಿದೆ.

ಅಯೋಧ್ಯೆಯಲ್ಲಿನ ಸ್ವಾಮೀಜಿಗಳು ಬ್ರಿಜ್‌ನನ್ನು ಬೆಂಬಲಿಸಿ ಅಯೋಧ್ಯೆಯಲ್ಲಿ ರ್‍ಯಾಲಿಯನ್ನು ಆಯೋಜಿಸುವವರೆಗೂ ಹೋಗಿದ್ದಾರೆ. “ಪೋಕ್ಸೋ ಕಾಯಿದೆಯು ಅನೇಕ ಲೋಪದೋಷಗಳು ಮತ್ತು ದೋಷಪೂರಿತ ಷರತ್ತುಗಳನ್ನು ಹೊಂದಿದೆ” ಎಂದು ಕಾಯ್ದೆಯ ವಿರುದ್ಧವೂ ಪ್ರತಿಭಟಿಸಲಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

“ನಾವು ಅಯೋಧ್ಯೆಯ ಧರ್ಮಗುರುಗಳು ಮತ್ತು ದೇಶದ ಇತರ ಧಾರ್ಮಿಕ ಸ್ಥಳಗಳಿಂದ ಬಂದವರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಪರವಾಗಿ ರ್‍ಯಾಲಿಯನ್ನು ನಡೆಸುತ್ತೇವೆ” ಎಂದು ಮಹಂತ್ ಸತ್ಯೇಂದ್ರ ದಾಸ್ ಪ್ರತಿಕ್ರಿಯಿಸಿದ್ದಾರೆ.

“ಪೋಕ್ಸೊ ಕಾಯಿದೆಯಲ್ಲಿ ಹಲವು ಲೋಪದೋಷಗಳು ಮತ್ತು ದೋಷಪೂರಿತ ಷರತ್ತುಗಳಿರುವುದರಿಂದ ನಾವು ಅದನ್ನು ವಿರೋಧಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆ: ಇಂದು ರೈತ ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ‘ಮಹಾಪಂಚಾಯತ್’

ಜೂನ್ 5ರಂದು ರ್‍ಯಾಲಿ ನಡೆಸುವುದಾಗಿ ಸಿಂಗ್ ಈ ಹಿಂದೆ ಘೋಷಿಸಿದ್ದರು. ಸ್ವಾಮೀಜಿಗಳು ಹೇಳುತ್ತಿರುವುದು ಅದೇ ರ್‍ಯಾಲಿಯೆಂದು ತೋರುತ್ತಿದೆ.

ಸಿಂಗ್ ವಿರುದ್ಧದ ಎರಡು ಎಫ್‌ಐಆರ್‌ಗಳಲ್ಲಿ ಒಂದು ಪೋಕ್ಸೊ ಕಾಯ್ದೆಯಡಿಯಲ್ಲಿದ್ದರೂ, ಪೊಲೀಸರು ಮತ್ತು ಬಿಜೆಪಿ ಸರ್ಕಾರವು ಆರೋಪಿಯ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಈ ಕಾನೂನಿನ ಪ್ರಕಾರ ಸಾಮಾನ್ಯವಾಗಿ ತ್ವರಿತ ಮತ್ತು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೂತನ ಸಂಸತ್ ಭವನದ ಉದ್ಘಾಟನೆ ಭಾನುವಾರ ನಡೆಯಿತು. ಸಮಾರಂಭದಲ್ಲಿ ಬ್ರಿಜ್‌ ಭೂಷಣ್‌ ಭಾಗಹಿಸಿದ್ದರು. ಈ ಮೂಲಕ ಬಿಜೆಪಿ ತನ್ನ ಪರ ಇದೆ ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...