Homeಕರ್ನಾಟಕರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ: ಸಿದ್ದರಾಮಯ್ಯ

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ: ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಮಗ ವಿಜಯೇಂದ್ರರನ್ನು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ”ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು” ಎಂದರು.

”ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ
ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದರು.

ಕಾಂಗ್ರೆಸ್‌ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸಿ, ”ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಪೆನ್ ಡ್ರೈವ್‌ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ” ಎಂದು ಹೇಳಿದರು.

”ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ” ಎಂದರು.

ಇದನ್ನೂ ಓದಿ: ಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...