Homeಕರ್ನಾಟಕರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ: ಸಿದ್ದರಾಮಯ್ಯ

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ: ಸಿದ್ದರಾಮಯ್ಯ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಮಗ ವಿಜಯೇಂದ್ರರನ್ನು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ”ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು” ಎಂದರು.

”ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ
ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ”ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದರು.

ಕಾಂಗ್ರೆಸ್‌ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸಿ, ”ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಪೆನ್ ಡ್ರೈವ್‌ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ” ಎಂದು ಹೇಳಿದರು.

”ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ” ಎಂದರು.

ಇದನ್ನೂ ಓದಿ: ಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...