Homeಕರ್ನಾಟಕಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಬಿಜೆಪಿ ನಾಯಕರು ಚುನಾವಣೆ ಬಗ್ಗೆ ಮಾತ್ರ ಚಿಂತಿತರಾಗಿದ್ದಾರೆ, ಆಡಳಿತದ ಬಗ್ಗೆ ಅಲ್ಲ: ಸಿದ್ದರಾಮಯ್ಯ ಆಕ್ರೋಶ

ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಮಾರ್ಗಸೂಚಿಗಳನ್ನು ಬಿಜೆಪಿ ನಾಯಕರು ಯಾಕೆ ಅನುಸರಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅಡಿಯಲ್ಲಿನ ದುರ್ಬಲವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕೊರೊನಾ 2 ನೇ ಅಲೆಯ ಬಿಕ್ಕಟ್ಟು ಬಹಿರಂಗಪಡಿಸಿದೆ. ಕೊರೊನಾಗೆ ಯಾವುದೇ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಜನರು ಅಸಹಾಯಕರಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅವರು ಸರಣಿ ಟ್ವೀಟ್ ಮಾಡಿದ್ದು, “ಕೊರೊನಾ 1 ನೇ ಅಲೆಯಲ್ಲಿ ಭಾರತಕ್ಕೆ ಗಂಭೀರ ಪರಣಾಮ ಬೀರಿದೆ. ಆದರೂ ಸರ್ಕಾರ ಯಾವುದೇ ಪಾಠ ಕಲಿತಿಲ್ಲ. ಕೊರೊನಾ ಚಿಕಿತ್ಸೆಗೆ ವ್ಯಾಪಕವಾಗಿ ಬಳಸಲಾಗುವ ರೆಮ್‌ಡೆಸಿವಿರ್ ಲಭ್ಯವಿಲ್ಲ. ಸರ್ಕಾರವು ಔಷಧಿಗಳೊಂದಿಗೆ ಯಾಕೆ ಸಿದ್ಧವಾಗಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ

“ಕೊರೊನಾ ರೋಗಿಗಳಿಗೆ ಸಾಮಾನ್ಯ ಮತ್ತು ಐಸಿಯು ಹಾಸಿಗೆಗಳ ಕೊರತೆಯೂ ಇದೆ. ಆಮ್ಲಜನಕ ಮತ್ತು ಇತರ ಬೆಂಬಲ ವ್ಯವಸ್ಥೆಗಳಿಲ್ಲದೆ ಜನರು ಬಳಲುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸುವ ಬದಲು ಆಂತರಿಕ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಸರ್ಕಾರ ನಿರತವಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಿ ಆಸ್ಪತ್ರೆಗಳು ತುಂಬಿರುವುದರಿಂದ, ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಸಾಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ಶುಲ್ಕವನ್ನು ಭರಿಸಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಎಲ್ಲಾ ರೋಗಿಗಳಿಗೆ ಕೊರೊನಾ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಉಚಿತವಾಗಿ ನೀಡಿ” ಎಂದು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರನ್ನು ಅವರು ಕೋರಿದ್ದಾರೆ.

“ಬಿಜೆಪಿ ನಾಯಕರು ಚುನಾವಣೆಯ ಬಗ್ಗೆ ಮಾತ್ರ ಚಿಂತಿತರಾಗಿದ್ದು, ಆಡಳಿತದ ಬಗ್ಗೆ ಚಿಂತಿತರಾಗಿಲ್ಲ ಎಂಬುದು ನಿಜಕ್ಕೂ ದುರದೃಷ್ಟಕರ. ಬಿಜೆಪಿ ನಾಯಕರು ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಮಾರ್ಗಸೂಚಿಗಳನ್ನು ಯಾಕೆ ಅನುಸರಿಸುತ್ತಿಲ್ಲ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ವಿಡಿಯೋ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...