Homeಮುಖಪುಟಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸುತ್ತವೆ. ಸಮುದಾಯವನ್ನು ಮುಖ್ಯವಾಹಿನಿಯಿಂದ ಬೇರ್ಪಡಿಸುತ್ತವೆ ಎಂದು ಆರೋಪಿಸಿದ್ದಾರೆ.

ಜನವರಿ 1 ರಂದು ಕಾಸರಗೋಡಿನಲ್ಲಿ ಪ್ರಾರಂಭವಾಗಿ ರಾಜ್ಯಾದ್ಯಂತ ಸಂಚರಿಸಿ ತಿರುವನಂತಪುರಂನಲ್ಲಿ ಮುಕ್ತಾಯಗೊಂಡ ಕೇರಳ ಮುಸ್ಲಿಂ ಜಮಾತ್ ಆಯೋಜಿಸಿದ್ದ ‘ಕೇರಳ ಯಾತ್ರೆ’ಯ ಸಮಾರೋಪ ಅಧಿವೇಶನದಲ್ಲಿ ಮಾತನಾಡಿದ ವಿಜಯನ್, ಬಿಜೆಪಿ ಆಡಳಿತದ ವಿರುದ್ಧ ಈ ಆರೋಪಗಳನ್ನು ಮಾಡಿದ್ದಾರೆ.

“ಯಾವುದೇ ರೀತಿಯ ಕೋಮುವಾದದ ಬಗ್ಗೆ ಮೃದು ನಿಲುವು ಹೊಂದಿರುವುದು ಅಥವಾ ಸಮಾಧಾನ ತಂತ್ರ ಅಳವಡಿಸಿಕೊಳ್ಳುವುದು ಅಪಾಯಕಾರಿ. ಕೇರಳವು ಹಿಂದೆ ರಾಜ್ಯದಲ್ಲಿ ಹಲವಾರು ಕ್ರೂರ ಕೋಮು ಸಂಘರ್ಷಗಳು ಮತ್ತು ಗಲಭೆಗಳನ್ನು ಕಂಡಿದೆ. ಆದರೆ, ಯಾವುದೇ ರೀತಿಯ ಕೋಮುವಾದದ ವಿರುದ್ಧ ಎಲ್‌ಡಿಎಫ್ ಅಳವಡಿಸಿಕೊಂಡ ಬಲವಾದ, ರಾಜಿಯಾಗದ ನಿಲುವಿನಿಂದಾಗಿ ಇದೆಲ್ಲವೂ ಕೊನೆಗೊಂಡಿದೆ” ಎಂದು ಅವರು ಹೇಳಿದರು.

ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳು, ಅವರ ಪೂಜಾ ಸ್ಥಳಗಳ ಮೇಲೆ ದೇಶಾದ್ಯಂತ ದಾಳಿ ನಡೆಯುತ್ತಿರುವುದರಿಂದ ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳು ಅಪಾಯದಲ್ಲಿವೆ ಎಂದು ಹೇಳಿದರು.

ಅಂತಹ ಪರಿಸ್ಥಿತಿಯಲ್ಲಿ, ಬಹುಸಂಖ್ಯಾತ ಕೋಮುವಾದವನ್ನು ಅಲ್ಪಸಂಖ್ಯಾತ ಕೋಮುವಾದದೊಂದಿಗೆ ಹೋರಾಡಲು ಸಾಧ್ಯವಿಲ್ಲ. ಏಕೆಂದರೆ, ಎರಡೂ ಶಕ್ತಿಗಳು ಪರಸ್ಪರ ಪೂರಕವಾಗಿರುತ್ತವೆ ಬದಲಾಗಿ, ಜಾತ್ಯತೀತತೆಯನ್ನು ಬಲಪಡಿಸುವ ಮೂಲಕ ಅವುಗಳನ್ನು ಎದುರಿಸಬೇಕಾಗಿದೆ” ಎಂದು ಅವರು ವಾದಿಸಿದರು.

ಧರ್ಮ, ಜನಾಂಗ, ಜಾತಿ ಅಥವಾ ಭಾಷೆಯ ಮೂಲಕ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅವರು ಕರೆ ನೀಡಿದರು. ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ‘ಕೇರಳ ಯಾತ್ರೆ’ಯನ್ನು ಶ್ಲಾಘಿಸಿದರು, ಇದು ಸರಿಯಾದ ದಿಕ್ಕಿನಲ್ಲಿ ಇಟ್ಟ ಹೆಜ್ಜೆ ಎಂದು ಹೇಳಿದರು.

“ಧರ್ಮ ಅಥವಾ ಜನಾಂಗದ ಹೆಸರಿನಲ್ಲಿ ಜನರನ್ನು ಬೇರ್ಪಡಿಸಲು ಪ್ರಜ್ಞಾಪೂರ್ವಕ ಪ್ರಯತ್ನಗಳು ನಡೆಯುತ್ತಿರುವ ಈ ಯುಗದಲ್ಲಿ, ಅಂತಹ ನಡೆಗಳು ಅದರ ವಿರುದ್ಧ ಉತ್ತಮ ರಕ್ಷಣೆಯಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....