Homeಮುಖಪುಟಪ್ರತಿಭಟನಾ ನಿರತ ರೈತರ ವಿರುದ್ಧ 'ರಾಷ್ಟ್ರೀಯ ಭದ್ರತಾ ಕಾಯ್ದೆ' ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

ಪ್ರತಿಭಟನಾ ನಿರತ ರೈತರ ವಿರುದ್ಧ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ನಡೆಸುತ್ತಿರುವ ರೈತರ ವಿರುದ್ದ ಹರಿಯಾಣದ ಬಿಜೆಪಿ ಸರ್ಕಾರವು ‘ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ)ಯನ್ನು ಜಾರಿಗೊಳಿಸಿದೆ. ಈ ಕಾಯ್ದೆಯು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಪರಿಗಣಿಸಲ್ಪಡುವ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಅವಕಾಶ ನೀಡುತ್ತದೆ.

ಪ್ರಸ್ತುತ, ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಉಂಟಾಗಿರುವ ಆಸ್ತಿ ನಷ್ಟದ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತರ ಆಸ್ತಿ ಜಪ್ತಿ ಮಾಡುವ ಮೂಲಕ ನಷ್ಟ ಭರಿಸಲು ಮುಂದಾಗಿದ್ದಾರೆ.

“ಫೆ.13ರಿಂದ ‘ದೆಹಲಿ ಚಲೋ’ ಆರಂಭಿಸಿರುವ ರೈತರು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ದಾಟಿ ಬರುವ ಪ್ರಯತ್ನ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ. ಸರ್ಕಾರಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಾರೆ. ಈ ಬಗ್ಗೆ ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ಅಂಬಾಲಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಭಾವ್ಯ ಹಾನಿಯ ನಿರೀಕ್ಷೆಯಲ್ಲಿ, ಪ್ರತಿಭಟನಾಕಾರರಿಂದ ಉಂಟಾದ ನಷ್ಟಗಳಿಗೆ ಪರಿಹಾರವಾಗಿ ಅವರ ಆಸ್ತಿ ಮತ್ತು ಬ್ಯಾಂಕ್ ಖಾತೆಯನ್ನು ವಶಪಡಿಸಿಕೊಳ್ಳುವ ಬಗ್ಗೆ ಆಡಳಿತವು ಹಿಂದೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಸಮಯದಲ್ಲಿ ಆಸ್ತಿ ಹಾನಿಯಾಗಿರುವ ವ್ಯಕ್ತಿಗಳು ತಮ್ಮ ನಷ್ಟದ ಕುರಿತು ಮುಂದಿನ ಕ್ರಮಕ್ಕಾಗಿ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.13ರಂದು ಪಂಜಾಬ್‌ನಿಂದ ದೆಹಲಿ ಚಲೋ ಮೆರವಣಿಗೆಯಲ್ಲಿ ಆಗಮಿಸಿದ ರೈತರು, ಪಂಜಾಬ್-ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಇದ್ದಾರೆ. ಇಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಆದೇಶದ ಮೇರೆಗೆ ಪೊಲೀಸರು ಬ್ಯಾರಿಕೇಡ್, ಸಿಮೆಂಟ್ ಸ್ಲ್ಯಾಬ್, ಮುಳ್ಳಿನ ತಂತಿ, ಮೊಳೆ ಅಳವಡಿಸಿದ್ದು, ರೈತರು ಹರಿಯಾಣ ಪ್ರವೇಶಿದಂತೆ ಸರ್ಪಗಾವಲು ಹಾಕಿದ್ದಾರೆ.

ಭದ್ರಕೋಟೆಯನ್ನು ಬೇಧಿಸಿ ಒಳ ನುಗ್ಗಲು ಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು, ರಬ್ಬರ್ ಬುಲೆಟ್, ಜಲಫಿರಂಗಿ ಪ್ರಯೋಗಿಸಿದ್ದಾರೆ. ಇದರಿಂದ ಓರ್ವ ಯುವ ರೈತ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ನಾವು ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯುವುದಿಲ್ಲ. ಶಾಂತಿಯುತವಾಗಿ ದೆಹಲಿ ಹೋಗಲು ನಮಗೆ ಅವಕಾಶ ಕೊಡಿ ಎಂದು ರೈತರು ಮನವಿ ಮಾಡಿದ್ದಾರೆ. ಹರಿಯಾಣ ಪೊಲೀಸರು ಇದಕ್ಕೆ ಅವಕಾಶ ನೀಡಿಲ್ಲ. ಗಡಿಯ ದಾಟಲು ಪ್ರಯತ್ನಿಸಿದ ರೈತರ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ, ಇದೀಗ ಎನ್‌ಎಸ್‌ಎ ಕಾಯ್ದೆ ಜಾರಿಗೊಳಿಸಿದ್ದಾರೆ. ರೈತರು ಮಾತ್ರ ನಾವು ದೆಹಲಿ ಚಲೋ ನಡೆಸಿಯೇ ತೀರುತ್ತೇವೆ ಎಂದು ಶಪಥ ಮಾಡಿದ್ದಾರೆ.

ಇದನ್ನೂ ಓದಿ : ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...