Homeಮುಖಪುಟಪ್ರತಿಭಟನಾ ನಿರತ ರೈತರ ವಿರುದ್ಧ 'ರಾಷ್ಟ್ರೀಯ ಭದ್ರತಾ ಕಾಯ್ದೆ' ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

ಪ್ರತಿಭಟನಾ ನಿರತ ರೈತರ ವಿರುದ್ಧ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ನಡೆಸುತ್ತಿರುವ ರೈತರ ವಿರುದ್ದ ಹರಿಯಾಣದ ಬಿಜೆಪಿ ಸರ್ಕಾರವು ‘ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ)ಯನ್ನು ಜಾರಿಗೊಳಿಸಿದೆ. ಈ ಕಾಯ್ದೆಯು ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಪರಿಗಣಿಸಲ್ಪಡುವ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಅವಕಾಶ ನೀಡುತ್ತದೆ.

ಪ್ರಸ್ತುತ, ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ಉಂಟಾಗಿರುವ ಆಸ್ತಿ ನಷ್ಟದ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತರ ಆಸ್ತಿ ಜಪ್ತಿ ಮಾಡುವ ಮೂಲಕ ನಷ್ಟ ಭರಿಸಲು ಮುಂದಾಗಿದ್ದಾರೆ.

“ಫೆ.13ರಿಂದ ‘ದೆಹಲಿ ಚಲೋ’ ಆರಂಭಿಸಿರುವ ರೈತರು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ದಾಟಿ ಬರುವ ಪ್ರಯತ್ನ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ. ಸರ್ಕಾರಿ ಆಸ್ತಿ-ಪಾಸ್ತಿಗೆ ಹಾನಿ ಮಾಡಿದ್ದಾರೆ. ಈ ಬಗ್ಗೆ ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದು ಅಂಬಾಲಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಭಾವ್ಯ ಹಾನಿಯ ನಿರೀಕ್ಷೆಯಲ್ಲಿ, ಪ್ರತಿಭಟನಾಕಾರರಿಂದ ಉಂಟಾದ ನಷ್ಟಗಳಿಗೆ ಪರಿಹಾರವಾಗಿ ಅವರ ಆಸ್ತಿ ಮತ್ತು ಬ್ಯಾಂಕ್ ಖಾತೆಯನ್ನು ವಶಪಡಿಸಿಕೊಳ್ಳುವ ಬಗ್ಗೆ ಆಡಳಿತವು ಹಿಂದೆ ಎಚ್ಚರಿಕೆ ನೀಡಿತ್ತು. ಪ್ರತಿಭಟನೆಯ ಸಮಯದಲ್ಲಿ ಆಸ್ತಿ ಹಾನಿಯಾಗಿರುವ ವ್ಯಕ್ತಿಗಳು ತಮ್ಮ ನಷ್ಟದ ಕುರಿತು ಮುಂದಿನ ಕ್ರಮಕ್ಕಾಗಿ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.13ರಂದು ಪಂಜಾಬ್‌ನಿಂದ ದೆಹಲಿ ಚಲೋ ಮೆರವಣಿಗೆಯಲ್ಲಿ ಆಗಮಿಸಿದ ರೈತರು, ಪಂಜಾಬ್-ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಇದ್ದಾರೆ. ಇಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಆದೇಶದ ಮೇರೆಗೆ ಪೊಲೀಸರು ಬ್ಯಾರಿಕೇಡ್, ಸಿಮೆಂಟ್ ಸ್ಲ್ಯಾಬ್, ಮುಳ್ಳಿನ ತಂತಿ, ಮೊಳೆ ಅಳವಡಿಸಿದ್ದು, ರೈತರು ಹರಿಯಾಣ ಪ್ರವೇಶಿದಂತೆ ಸರ್ಪಗಾವಲು ಹಾಕಿದ್ದಾರೆ.

ಭದ್ರಕೋಟೆಯನ್ನು ಬೇಧಿಸಿ ಒಳ ನುಗ್ಗಲು ಯತ್ನಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು, ರಬ್ಬರ್ ಬುಲೆಟ್, ಜಲಫಿರಂಗಿ ಪ್ರಯೋಗಿಸಿದ್ದಾರೆ. ಇದರಿಂದ ಓರ್ವ ಯುವ ರೈತ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ನಾವು ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿಯುವುದಿಲ್ಲ. ಶಾಂತಿಯುತವಾಗಿ ದೆಹಲಿ ಹೋಗಲು ನಮಗೆ ಅವಕಾಶ ಕೊಡಿ ಎಂದು ರೈತರು ಮನವಿ ಮಾಡಿದ್ದಾರೆ. ಹರಿಯಾಣ ಪೊಲೀಸರು ಇದಕ್ಕೆ ಅವಕಾಶ ನೀಡಿಲ್ಲ. ಗಡಿಯ ದಾಟಲು ಪ್ರಯತ್ನಿಸಿದ ರೈತರ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ, ಇದೀಗ ಎನ್‌ಎಸ್‌ಎ ಕಾಯ್ದೆ ಜಾರಿಗೊಳಿಸಿದ್ದಾರೆ. ರೈತರು ಮಾತ್ರ ನಾವು ದೆಹಲಿ ಚಲೋ ನಡೆಸಿಯೇ ತೀರುತ್ತೇವೆ ಎಂದು ಶಪಥ ಮಾಡಿದ್ದಾರೆ.

ಇದನ್ನೂ ಓದಿ : ಪಂಜಾಬ್‌ನೊಳಗೆ ನುಗ್ಗಿ ಹರಿಯಾಣ ಪೊಲೀಸರಿಂದ ಅಶ್ರುವಾಯು ಶೆಲ್ ದಾಳಿ: ರೈತರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...