Homeಮುಖಪುಟರಾಜ್ಯಸಭೆಯಲ್ಲಿ ಬಹುಮತ ಪಡೆಯುವಲ್ಲಿ ಬಿಜೆಪಿ ನೇತೃತ್ವದ NDA ವಿಫಲ

ರಾಜ್ಯಸಭೆಯಲ್ಲಿ ಬಹುಮತ ಪಡೆಯುವಲ್ಲಿ ಬಿಜೆಪಿ ನೇತೃತ್ವದ NDA ವಿಫಲ

- Advertisement -
- Advertisement -

240 ಸದಸ್ಯ ಬಲದ ರಾಜ್ಯಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಒಕ್ಕೂಟವು ಬಹುಮತದ 121 ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದು, ಬಹುಮತಕ್ಕೆ ಎನ್‌ಡಿಎಗೆ ಇನ್ನೂ ನಾಲ್ಕು ಸ್ಥಾನಗಳ ಅಗತ್ಯವಿದೆ.

ಮಂಗಳವಾರ ಬಿಜೆಪಿ 10 ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಮೊದಲು 20 ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿತ್ತು. 30 ಸ್ಥಾನಗಳ ಗೆಲುವಿನೊಂದಿಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಸದರ ಸಂಖ್ಯೆ 97ಕ್ಕೆ ಮತ್ತು ಎನ್‌ಡಿಎ ಬಲ 117ಕ್ಕೆ ಏರಿಕೆಯಾಗಿದೆ.

ಐವರು ನಾಮನಿರ್ದೇಶಿತ ಸಂಸದರು ಸೇರಿದಂತೆ 97 ಸದಸ್ಯರೊಂದಿಗೆ ಬಿಜೆಪಿ ರಾಜ್ಯಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಉಳಿದಿದೆ, ಕಾಂಗ್ರೆಸ್ 29 ಸದಸ್ಯರನ್ನು ಹೊಂದಿದೆ. ಮೂರು ರಾಜ್ಯಗಳಲ್ಲಿ 15 ಸ್ಥಾನಗಳಿಗೆ ನಡೆದ ರಾಜ್ಯಸಭಾ ಚುನಾವಣೆಯು ಅಡ್ಡ ಮತದಾನ ಕೂಡ ನಡೆದಿದೆ. ಬಿಜೆಪಿ 10 ಸ್ಥಾನಗಳನ್ನು, ಕಾಂಗ್ರೆಸ್ ಮೂರು ಮತ್ತು ಸಮಾಜವಾದಿ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿದೆ. ಉತ್ತರಪ್ರದೇಶದಲ್ಲಿ ಮತ್ತು ಹಿಮಾಚಲ ಪ್ರದೇಶದಲ್ಲಿ ಹೆಚ್ಚುವರಿ ಗೆಲುವು ಬಿಜೆಪಿಗೆ ಪ್ರಮುಖ ಲಾಭದಾಯಕವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋತಿದ್ದರು. ಬಿಜೆಪಿಯ ಹರ್ಷವರ್ಧನ್ ಜಯಗಳಿಸಿದ್ದರು. ಈ ಫಲಿತಾಂಶವು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಕಳೆದುಕೊಂಡಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಎಂಟು ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಮೂರು ಅಭ್ಯರ್ಥಿಗಳನ್ನು ಹಾಕಿದ್ದ ಸಮಾಜವಾದಿ ಪಕ್ಷವು ಕೇವಲ ಎರಡು ಸ್ಥಾನಗಳನ್ನು  ಗೆದ್ದುಕೊಂಡಿದೆ. ಉತ್ತರ ಪ್ರದೇಶದಲ್ಲಿ ಮಾಜಿ ಕೇಂದ್ರ ಸಚಿವ ಆರ್‌ಪಿಎನ್‌ ಸಿಂಗ್‌, ಮಾಜಿ ಸಂಸದ ಚೌಧರಿ ತೇಜ್‌ವೀರ್‌ ಸಿಂಗ್‌, ಅಮರ್‌ಪಾಲ್‌ ಮೌರ್ಯ, ಸಂಗೀತಾ ಬಲ್ವಂತ್‌, ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಮಾಜಿ ಶಾಸಕ ಸಾಧನಾ ಸಿಂಗ್‌, ನವೀನ್‌ ಜೈನ್‌ ಮತ್ತು ಸಂಜಯ್‌ ಸೇಠ್‌ ಗೆದ್ದ 8 ಬಿಜೆಪಿ ಅಭ್ಯರ್ಥಿಗಳು. ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಮತ್ತು ರಾಮ್‌ಜಿ ಲಾಲ್ ಸುಮನ್ ಕೂಡ ಗೆದ್ದಿದ್ದಾರೆ. ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದ ಮೂರನೇ ಅಭ್ಯರ್ಥಿ ಅಲೋಕ್ ರಂಜನ್ ಸೋಲು ಅನುಭವಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಮತ್ತು ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದಲ್ಲಿ, ರಾಜ್ಯದಿಂದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ಆರು ಶಾಸಕರು ಸೇರಿದಂತೆ ಒಂಬತ್ತು ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಆಡಳಿತಾರೂಢ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿತ್ತು.

ಇದನ್ನು ಓದಿ: ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...