Homeಮುಖಪುಟಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ ಎಂದು ಹಲವರು ಆರೋಪಿಸಿದ್ದಾರೆ.

- Advertisement -
- Advertisement -

ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಘೋಷಿಸಲಾಗುತ್ತದೆ ಎನ್ನಲಾಗಿದೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿಯವರು ವೀಕ್ಷಕರಾಗಿ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದು ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ಸುಮ್ಮನೆ ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದು ಎಲ್ಲಾ ಶಾಸಕರ ಅಭಿಪ್ರಾಯ ಪಡೆಯುವ ಕಸರತ್ತು ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.

ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ಒಂದು ದಿನವಾಯಿತು. ತಮ್ಮ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಶಾಸಕರು blank ಆಗಿದ್ದಾರೆ. ಸ್ವತಃ ಶಾಸಕರಿಗೇ ಮುಂದಿನ ಮುಖ್ಯಮಂತ್ರಿ ಯಾರೆಂಬುದು ಗೊತ್ತಿಲ್ಲ, ಅಭ್ಯರ್ಥಿಗಳು ಮೊದಲೇ ಗೊತ್ತಿಲ್ಲ. ಒಂದು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವನೂ ಸೇರಿದಂತೆ ಕನಿಷ್ಠ ಐವತ್ತು ಮಂದಿಯ ಹೆಸರು ಓಡುತ್ತಿವೆ. ಕೊನೆಯಲ್ಲಿ ಶಾಸಕಾಂಗ ಸಭೆಯಲ್ಲಿ ಶಾಸಕರೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದರೂ ಚೀಟಿಯಲ್ಲಿ ಬರೋ ಹೆಸರಿಗೇ ಅವರು ಮುದ್ರೆ ಒತ್ತಬೇಕು. ನಮ್ಮ ಸಂಸದೀಯ ಪ್ರಜಾಸತ್ತೆಯ ದೊಡ್ಡ ತಮಾಶೆ ಇದು. ಕರ್ನಾಟಕದ ಮುಖ್ಯಮಂತ್ರಿ ಸ್ಥಾನವೆಂಬುದು ವಾಟ್ಸಾಪ್ ಫಾರ್ವಾರ್ಡ್ ಜೋಕ್ ಆಗಿ ಹೋಗಿದ್ದು ನಮ್ಮ ಕಾಲದ ದುರಂತ. ಪ್ರಜಾಪ್ರಭುತ್ವವನ್ನು ಹೇಗೆಲ್ಲ ಚುಚ್ಚಿ ಕೊಲ್ಲಲಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ದಿನೂ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ಬಹುಶಃ ಎರಡ್ಮೂರು ವಾರಗಳ ಹಿಂದೆ ಕೇಂದ್ರ ಸಂಪುಟ ಪುನರ್ ರಚನೆಯ ಸಂಧರ್ಭದಲ್ಲೇ ಆಗಿದೆ. ಹಾಗಾಗಿಯೇ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿಯಾಗಿದ್ದಾರೆ. ಇನ್ನು ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗೋದು ಏನೂ ಇಲ್ಲ. ಹೆಚ್ಚೆಂದರೆ ಈಗಾಗಲೇ ಮಾರಗುಡಿ ಬ್ರದರ್ಸ್ ಆಯ್ಕೆ ಮಾಡಿರುವ ಯೆಸ್ ಮ್ಯಾನ್ ಹೆಸರನ್ನು ಶಾಸಕಾಂಗ ಸಭೆಯಲ್ಲಿ ತೇಲಿಬಿಟ್ಟು, ಬಹುಮತದಿಂದ ಅದನ್ನು ಅಂಗೀಕಾರವಾಗುವಂತೆ ನೋಡಿ, ರಾಜ್ಯದ ಮುಖ್ಯಮಂತ್ರಿಯನ್ನು ಶಾಸಕರು ಆರಿಸಿದ್ದು ಎಂದು ತೋರಿಸುವ ನಾಟಕ ನಡೆಯಬಹುದು. ಅದಕ್ಕೆ ನಮ್ಮ ಶಾಸಕರು ‘ಸಂತೋಷ’ದಿಂದ ಅಸ್ತು ಎನ್ನುವುದೂ ಗ್ಯಾರಂಟಿ ಎಂದು ಪತ್ರಕರ್ತರಾದ ಅಲ್ಮೇಡ ಗ್ಲಾಡ್‌ಸನ್‌ ವ್ಯಂಗ್ಯವಾಡಿದ್ದಾರೆ.

ಬಹುಶಃ ಕಾಂಗ್ರೆಸ್ಸಿನ ಹೈಕಮಾಂಡ್‌ ಸಂಸ್ಕೃತಿಯನ್ನು ಬಿಜೆಪಿ (ಜನಸಂಘ) ಹಾಸ್ಯ ಮಾಡಿದಷ್ಟು ಬೇರಾರೂ ಮಾಡಿರಲಾರರು. ಡಾ. ಮನಮೋಹನ್‌ ಸಿಂಗರು ಪ್ರಧಾನಿಗಳಾಗಿದ್ದಾಗ, ಅವರು ಕಾಂಗ್ರೆಸ್ಸಿನ ಅಧ್ಯಕ್ಷೆ ಶ್ರೀಮತಿ ಸೋನಿಯಾ ಅವರನ್ನು ಭೇಟಿ ಮಾಡಿ ಸಲಹೆ ಕೇಳುತ್ತಿದ್ದುದೂ ಬಿಜೆಪಿಯ ನಿರಂತರ ಅಪಹಾಸ್ಯಕ್ಕೆ ಒಳಗಾಗಿದ್ದುದು ದೂರದ ಮಾತೇನಲ್ಲ. ಅಂತ ಬಿಜೆಪಿಯು ಕ್ಷಿಪ್ರ ವೇಗದಲ್ಲಿ ಈಗ ತಲುಪಿದ ಅವಸ್ಥೆ ನೋಡಿ! ಹೈಕಮಾಂಡ್‌ ನ ಅನುಮತಿ ಇಲ್ಲದೆ ಹುಲ್ಲುಕಡ್ಡಿಯೂ ಅಲುಗಾಡಲಾಗದ ಸ್ಥಿತಿಯನ್ನು ಅದು ನಿರ್ಮಾಣಮಾಡಿಕೊಂಡಿದೆ. ಅದರ ಬಗ್ಗೆ ಗುಟ್ಟಿನಲ್ಲಿಯೂ ಮಾತಾಡಿಕೊಳ್ಳಲಾಗದ ಭಯ ಅದರ ಚುನಾಯಿತ ಪ್ರತಿನಿಧಿಗಳನ್ನೂ ಆವರಿಸಿದೆ. ಏನಿಲ್ಲವೆಂದರೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜನರಿಂದ ಚುನಾಯಿತರಾಗಿದ್ದರು ಮತ್ತು ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಿಜೆಪಿಯವರಿಗೆ ಮಾರ್ಗದರ್ಶನ ಮಾಡುವ ಆರ್‌ ಎಸ್‌ ಎಸ್‌ ಚುನಾವಣೆಯಲ್ಲಿ ಗೆದ್ದಿದೆಯಾ? ಅಥವಾ ಜನರು ಅದಕ್ಕೆ ಓಟ್‌ ಹಾಕಿದ್ದಾರಾ? ಪ್ರಜಾಪ್ರಭುತ್ವ ನಾಶವಾಗುವುದೆಂದರೆ ಹೀಗೆ.. ಎಂದು ಖ್ಯಾತ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆಯವರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...