Homeಮುಖಪುಟಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ ಎಂದು ಹಲವರು ಆರೋಪಿಸಿದ್ದಾರೆ.

- Advertisement -
- Advertisement -

ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಘೋಷಿಸಲಾಗುತ್ತದೆ ಎನ್ನಲಾಗಿದೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿಯವರು ವೀಕ್ಷಕರಾಗಿ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದು ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ಸುಮ್ಮನೆ ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದು ಎಲ್ಲಾ ಶಾಸಕರ ಅಭಿಪ್ರಾಯ ಪಡೆಯುವ ಕಸರತ್ತು ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.

ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ಒಂದು ದಿನವಾಯಿತು. ತಮ್ಮ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಶಾಸಕರು blank ಆಗಿದ್ದಾರೆ. ಸ್ವತಃ ಶಾಸಕರಿಗೇ ಮುಂದಿನ ಮುಖ್ಯಮಂತ್ರಿ ಯಾರೆಂಬುದು ಗೊತ್ತಿಲ್ಲ, ಅಭ್ಯರ್ಥಿಗಳು ಮೊದಲೇ ಗೊತ್ತಿಲ್ಲ. ಒಂದು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವನೂ ಸೇರಿದಂತೆ ಕನಿಷ್ಠ ಐವತ್ತು ಮಂದಿಯ ಹೆಸರು ಓಡುತ್ತಿವೆ. ಕೊನೆಯಲ್ಲಿ ಶಾಸಕಾಂಗ ಸಭೆಯಲ್ಲಿ ಶಾಸಕರೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದರೂ ಚೀಟಿಯಲ್ಲಿ ಬರೋ ಹೆಸರಿಗೇ ಅವರು ಮುದ್ರೆ ಒತ್ತಬೇಕು. ನಮ್ಮ ಸಂಸದೀಯ ಪ್ರಜಾಸತ್ತೆಯ ದೊಡ್ಡ ತಮಾಶೆ ಇದು. ಕರ್ನಾಟಕದ ಮುಖ್ಯಮಂತ್ರಿ ಸ್ಥಾನವೆಂಬುದು ವಾಟ್ಸಾಪ್ ಫಾರ್ವಾರ್ಡ್ ಜೋಕ್ ಆಗಿ ಹೋಗಿದ್ದು ನಮ್ಮ ಕಾಲದ ದುರಂತ. ಪ್ರಜಾಪ್ರಭುತ್ವವನ್ನು ಹೇಗೆಲ್ಲ ಚುಚ್ಚಿ ಕೊಲ್ಲಲಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ದಿನೂ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ಬಹುಶಃ ಎರಡ್ಮೂರು ವಾರಗಳ ಹಿಂದೆ ಕೇಂದ್ರ ಸಂಪುಟ ಪುನರ್ ರಚನೆಯ ಸಂಧರ್ಭದಲ್ಲೇ ಆಗಿದೆ. ಹಾಗಾಗಿಯೇ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿಯಾಗಿದ್ದಾರೆ. ಇನ್ನು ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗೋದು ಏನೂ ಇಲ್ಲ. ಹೆಚ್ಚೆಂದರೆ ಈಗಾಗಲೇ ಮಾರಗುಡಿ ಬ್ರದರ್ಸ್ ಆಯ್ಕೆ ಮಾಡಿರುವ ಯೆಸ್ ಮ್ಯಾನ್ ಹೆಸರನ್ನು ಶಾಸಕಾಂಗ ಸಭೆಯಲ್ಲಿ ತೇಲಿಬಿಟ್ಟು, ಬಹುಮತದಿಂದ ಅದನ್ನು ಅಂಗೀಕಾರವಾಗುವಂತೆ ನೋಡಿ, ರಾಜ್ಯದ ಮುಖ್ಯಮಂತ್ರಿಯನ್ನು ಶಾಸಕರು ಆರಿಸಿದ್ದು ಎಂದು ತೋರಿಸುವ ನಾಟಕ ನಡೆಯಬಹುದು. ಅದಕ್ಕೆ ನಮ್ಮ ಶಾಸಕರು ‘ಸಂತೋಷ’ದಿಂದ ಅಸ್ತು ಎನ್ನುವುದೂ ಗ್ಯಾರಂಟಿ ಎಂದು ಪತ್ರಕರ್ತರಾದ ಅಲ್ಮೇಡ ಗ್ಲಾಡ್‌ಸನ್‌ ವ್ಯಂಗ್ಯವಾಡಿದ್ದಾರೆ.

ಬಹುಶಃ ಕಾಂಗ್ರೆಸ್ಸಿನ ಹೈಕಮಾಂಡ್‌ ಸಂಸ್ಕೃತಿಯನ್ನು ಬಿಜೆಪಿ (ಜನಸಂಘ) ಹಾಸ್ಯ ಮಾಡಿದಷ್ಟು ಬೇರಾರೂ ಮಾಡಿರಲಾರರು. ಡಾ. ಮನಮೋಹನ್‌ ಸಿಂಗರು ಪ್ರಧಾನಿಗಳಾಗಿದ್ದಾಗ, ಅವರು ಕಾಂಗ್ರೆಸ್ಸಿನ ಅಧ್ಯಕ್ಷೆ ಶ್ರೀಮತಿ ಸೋನಿಯಾ ಅವರನ್ನು ಭೇಟಿ ಮಾಡಿ ಸಲಹೆ ಕೇಳುತ್ತಿದ್ದುದೂ ಬಿಜೆಪಿಯ ನಿರಂತರ ಅಪಹಾಸ್ಯಕ್ಕೆ ಒಳಗಾಗಿದ್ದುದು ದೂರದ ಮಾತೇನಲ್ಲ. ಅಂತ ಬಿಜೆಪಿಯು ಕ್ಷಿಪ್ರ ವೇಗದಲ್ಲಿ ಈಗ ತಲುಪಿದ ಅವಸ್ಥೆ ನೋಡಿ! ಹೈಕಮಾಂಡ್‌ ನ ಅನುಮತಿ ಇಲ್ಲದೆ ಹುಲ್ಲುಕಡ್ಡಿಯೂ ಅಲುಗಾಡಲಾಗದ ಸ್ಥಿತಿಯನ್ನು ಅದು ನಿರ್ಮಾಣಮಾಡಿಕೊಂಡಿದೆ. ಅದರ ಬಗ್ಗೆ ಗುಟ್ಟಿನಲ್ಲಿಯೂ ಮಾತಾಡಿಕೊಳ್ಳಲಾಗದ ಭಯ ಅದರ ಚುನಾಯಿತ ಪ್ರತಿನಿಧಿಗಳನ್ನೂ ಆವರಿಸಿದೆ. ಏನಿಲ್ಲವೆಂದರೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜನರಿಂದ ಚುನಾಯಿತರಾಗಿದ್ದರು ಮತ್ತು ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಿಜೆಪಿಯವರಿಗೆ ಮಾರ್ಗದರ್ಶನ ಮಾಡುವ ಆರ್‌ ಎಸ್‌ ಎಸ್‌ ಚುನಾವಣೆಯಲ್ಲಿ ಗೆದ್ದಿದೆಯಾ? ಅಥವಾ ಜನರು ಅದಕ್ಕೆ ಓಟ್‌ ಹಾಕಿದ್ದಾರಾ? ಪ್ರಜಾಪ್ರಭುತ್ವ ನಾಶವಾಗುವುದೆಂದರೆ ಹೀಗೆ.. ಎಂದು ಖ್ಯಾತ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆಯವರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...