Homeಮುಖಪುಟಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇಂದು ರಾತ್ರಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ನೂತನ ಸಿಎಂ ಘೋಷಣೆ ಸಾಧ್ಯತೆ

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ ಎಂದು ಹಲವರು ಆರೋಪಿಸಿದ್ದಾರೆ.

- Advertisement -
- Advertisement -

ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ನೂತನ ಸಿಎಂ ಅನ್ನು ಘೋಷಿಸಲಾಗುತ್ತದೆ ಎನ್ನಲಾಗಿದೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿಯವರು ವೀಕ್ಷಕರಾಗಿ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದು ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಈಗಾಗಲೇ ಸಿಎಂ ಯಾರಾಗಬೇಕು ಎನ್ನುವುದನ್ನು ನಿರ್ಧರಿಸಿದೆ. ಸುಮ್ಮನೆ ನೆಪ ಮಾತ್ರಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದು ಎಲ್ಲಾ ಶಾಸಕರ ಅಭಿಪ್ರಾಯ ಪಡೆಯುವ ಕಸರತ್ತು ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.

ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ಒಂದು ದಿನವಾಯಿತು. ತಮ್ಮ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಶಾಸಕರು blank ಆಗಿದ್ದಾರೆ. ಸ್ವತಃ ಶಾಸಕರಿಗೇ ಮುಂದಿನ ಮುಖ್ಯಮಂತ್ರಿ ಯಾರೆಂಬುದು ಗೊತ್ತಿಲ್ಲ, ಅಭ್ಯರ್ಥಿಗಳು ಮೊದಲೇ ಗೊತ್ತಿಲ್ಲ. ಒಂದು ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವನೂ ಸೇರಿದಂತೆ ಕನಿಷ್ಠ ಐವತ್ತು ಮಂದಿಯ ಹೆಸರು ಓಡುತ್ತಿವೆ. ಕೊನೆಯಲ್ಲಿ ಶಾಸಕಾಂಗ ಸಭೆಯಲ್ಲಿ ಶಾಸಕರೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದರೂ ಚೀಟಿಯಲ್ಲಿ ಬರೋ ಹೆಸರಿಗೇ ಅವರು ಮುದ್ರೆ ಒತ್ತಬೇಕು. ನಮ್ಮ ಸಂಸದೀಯ ಪ್ರಜಾಸತ್ತೆಯ ದೊಡ್ಡ ತಮಾಶೆ ಇದು. ಕರ್ನಾಟಕದ ಮುಖ್ಯಮಂತ್ರಿ ಸ್ಥಾನವೆಂಬುದು ವಾಟ್ಸಾಪ್ ಫಾರ್ವಾರ್ಡ್ ಜೋಕ್ ಆಗಿ ಹೋಗಿದ್ದು ನಮ್ಮ ಕಾಲದ ದುರಂತ. ಪ್ರಜಾಪ್ರಭುತ್ವವನ್ನು ಹೇಗೆಲ್ಲ ಚುಚ್ಚಿ ಕೊಲ್ಲಲಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪತ್ರಕರ್ತರಾದ ದಿನೇಶ್ ಕುಮಾರ್ ದಿನೂ ಬೇಸರ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆ ಬಹುಶಃ ಎರಡ್ಮೂರು ವಾರಗಳ ಹಿಂದೆ ಕೇಂದ್ರ ಸಂಪುಟ ಪುನರ್ ರಚನೆಯ ಸಂಧರ್ಭದಲ್ಲೇ ಆಗಿದೆ. ಹಾಗಾಗಿಯೇ ಶೋಭಾ ಕರಂದ್ಲಾಜೆ ಕೇಂದ್ರ ಮಂತ್ರಿಯಾಗಿದ್ದಾರೆ. ಇನ್ನು ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗೋದು ಏನೂ ಇಲ್ಲ. ಹೆಚ್ಚೆಂದರೆ ಈಗಾಗಲೇ ಮಾರಗುಡಿ ಬ್ರದರ್ಸ್ ಆಯ್ಕೆ ಮಾಡಿರುವ ಯೆಸ್ ಮ್ಯಾನ್ ಹೆಸರನ್ನು ಶಾಸಕಾಂಗ ಸಭೆಯಲ್ಲಿ ತೇಲಿಬಿಟ್ಟು, ಬಹುಮತದಿಂದ ಅದನ್ನು ಅಂಗೀಕಾರವಾಗುವಂತೆ ನೋಡಿ, ರಾಜ್ಯದ ಮುಖ್ಯಮಂತ್ರಿಯನ್ನು ಶಾಸಕರು ಆರಿಸಿದ್ದು ಎಂದು ತೋರಿಸುವ ನಾಟಕ ನಡೆಯಬಹುದು. ಅದಕ್ಕೆ ನಮ್ಮ ಶಾಸಕರು ‘ಸಂತೋಷ’ದಿಂದ ಅಸ್ತು ಎನ್ನುವುದೂ ಗ್ಯಾರಂಟಿ ಎಂದು ಪತ್ರಕರ್ತರಾದ ಅಲ್ಮೇಡ ಗ್ಲಾಡ್‌ಸನ್‌ ವ್ಯಂಗ್ಯವಾಡಿದ್ದಾರೆ.

ಬಹುಶಃ ಕಾಂಗ್ರೆಸ್ಸಿನ ಹೈಕಮಾಂಡ್‌ ಸಂಸ್ಕೃತಿಯನ್ನು ಬಿಜೆಪಿ (ಜನಸಂಘ) ಹಾಸ್ಯ ಮಾಡಿದಷ್ಟು ಬೇರಾರೂ ಮಾಡಿರಲಾರರು. ಡಾ. ಮನಮೋಹನ್‌ ಸಿಂಗರು ಪ್ರಧಾನಿಗಳಾಗಿದ್ದಾಗ, ಅವರು ಕಾಂಗ್ರೆಸ್ಸಿನ ಅಧ್ಯಕ್ಷೆ ಶ್ರೀಮತಿ ಸೋನಿಯಾ ಅವರನ್ನು ಭೇಟಿ ಮಾಡಿ ಸಲಹೆ ಕೇಳುತ್ತಿದ್ದುದೂ ಬಿಜೆಪಿಯ ನಿರಂತರ ಅಪಹಾಸ್ಯಕ್ಕೆ ಒಳಗಾಗಿದ್ದುದು ದೂರದ ಮಾತೇನಲ್ಲ. ಅಂತ ಬಿಜೆಪಿಯು ಕ್ಷಿಪ್ರ ವೇಗದಲ್ಲಿ ಈಗ ತಲುಪಿದ ಅವಸ್ಥೆ ನೋಡಿ! ಹೈಕಮಾಂಡ್‌ ನ ಅನುಮತಿ ಇಲ್ಲದೆ ಹುಲ್ಲುಕಡ್ಡಿಯೂ ಅಲುಗಾಡಲಾಗದ ಸ್ಥಿತಿಯನ್ನು ಅದು ನಿರ್ಮಾಣಮಾಡಿಕೊಂಡಿದೆ. ಅದರ ಬಗ್ಗೆ ಗುಟ್ಟಿನಲ್ಲಿಯೂ ಮಾತಾಡಿಕೊಳ್ಳಲಾಗದ ಭಯ ಅದರ ಚುನಾಯಿತ ಪ್ರತಿನಿಧಿಗಳನ್ನೂ ಆವರಿಸಿದೆ. ಏನಿಲ್ಲವೆಂದರೂ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜನರಿಂದ ಚುನಾಯಿತರಾಗಿದ್ದರು ಮತ್ತು ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಿಜೆಪಿಯವರಿಗೆ ಮಾರ್ಗದರ್ಶನ ಮಾಡುವ ಆರ್‌ ಎಸ್‌ ಎಸ್‌ ಚುನಾವಣೆಯಲ್ಲಿ ಗೆದ್ದಿದೆಯಾ? ಅಥವಾ ಜನರು ಅದಕ್ಕೆ ಓಟ್‌ ಹಾಕಿದ್ದಾರಾ? ಪ್ರಜಾಪ್ರಭುತ್ವ ನಾಶವಾಗುವುದೆಂದರೆ ಹೀಗೆ.. ಎಂದು ಖ್ಯಾತ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆಯವರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರ ಪೆಟ್ಟು ಕೊಟ್ಟಿದ್ದು ಯಡಿಯೂರಪ್ಪನವರಿಗೆ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...