Homeಕರ್ನಾಟಕಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

ಪುರಸಭೆ ಸದಸ್ಯೆಯನ್ನು ಎಳೆದಾಡಿದ್ದ ಬಿಜೆಪಿ ಶಾಸಕ ಸಿದ್ದು ಸವದಿ: 31 ಜನರ ವಿರುದ್ಧ FIR

- Advertisement -
- Advertisement -

ಬಾಗಲಕೋಟೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರನ್ನು ಪೊಲೀಸರ ಸಮ್ಮುಖದಲ್ಲೇ ಎಳೆದಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶಾಸಕ ಸಿದ್ದು ಸವದಿ ಸೇರಿ 31 ಜನರ ವಿರುದ್ಧ ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ 2020 ರ ನವೆಂಬರ್ 09 ರಂದು ಈ ಘಟನೆ ನಡೆದಿತ್ತು. ಅಂದು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಮತ ಹಾಕಲು ಬಂದ ಪುರಸಭೆ ಸದಸ್ಯೆ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ, ಗೋದಾವರಿ ಬಾಟ್​ ಅವರನ್ನು ಎಳೆದಾಡಲಾಗಿತ್ತು. ಪುರಸಭೆಯ ಒಳಗೆ ಬಾರದಂತೆ ತಡೆಯಲು ಗಲಾಟೆ ನಡೆದಿತ್ತು. ಘಟನೆ ಬಳಿಕ ಚಾಂದಿನಿ ನಾಯಕ್ ಅವರು ದೂರು ದಾಖಲಿಸಿದ್ದರು. ಇಷ್ಟೇ ಅಲ್ಲದೇ, ತಳ್ಳಾಟದ ಬಳಿಕ ಮೂರು ತಿಂಗಳ ಗರ್ಭಿಣಿ ಚಾಂದಿನಿ ನಾಯಕ್​ಗೆ ಗರ್ಭಪಾತವಾಗಿದೆ ಎಂಬ ಆರೋಪವೂ ಸಹ ಕೇಳಿ ಬಂದಿದೆ.

ಇದನ್ನೂ ಓದಿ: ಪುರಸಭಾ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ ಸಿದ್ದು ಸವದಿ

ಸವಿತಾ ಹುರಕಡ್ಲಿ ಅವರನ್ನು ಎಳೆದಾಡುತ್ತಿರುವ ವೀಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ.


ಇದಕ್ಕೆ ಸಂಬಂಧಿಸಿದಂತೆ ಶಾಸಕ ಸಿದ್ದು ಸವದಿ, ಬೆಂಬಲಿಗರಾದ ರವಿ ಜವಳಗಿ, ಪ್ರಹ್ಲಾದ್ ಸಣ್ಣಕ್ಕಿ, ರಾಜು ಚಮಕೇರ, ಸ್ನೇಹಲ್ ಅಂಗಡಿ ಸೇರಿದಂತೆ 31 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೌರವಕ್ಕೆ ಧಕ್ಕೆ, ಅಪಹರಣ, ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 120/a, 141, 143, 147, 148, 319, 321, 323 ಸೇರಿದಂತೆ 19 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಕೋರ್ಟ್ ನಿರ್ದೇಶನದ ಮೇರೆಗೆ ಮಹಾಲಿಂಗಪುರ ಠಾಣೆಯಲ್ಲಿ ಡಿಸೆಂಬರ್ 31 ರಂದು ಎಫ್‌ಐಆರ್ ದಾಖಲಾಗಿದೆ. ಜಮಖಂಡಿ ಪೊಲೀಸ್ ಉಪವಿಭಾಗದಿಂದ ಚಾಂದಿನಿ ನಾಯಕ್​ಗೆ ನೊಟೀಸ್ ನೀಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಜರು ಮಾಡಲು ಸ್ಥಳಕ್ಕೆ ಬಂದ ಸಿಬ್ಬಂದಿಗೆ ಸಹಕರಿಸುವಂತೆ ಕೋರಲಾಗಿದೆ.

ಘಟನೆಯಲ್ಲಿ ತಮ್ಮ ವಿರುದ್ದ ಮಾಡುತ್ತಿರುವ ಆರೋಪವನ್ನು ಸಿದ್ದು ಸವದಿ ತಳ್ಳಿಹಾಕಿದ್ದು, “ನಮ್ಮ ಪಕ್ಷದ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಕಾಂಗ್ರೆಸ್ನವರು ಅಪಹರಿಸಿದ್ದರು. ನಾನು ಅವರ ರಕ್ಷಣೆ ಮಾಡಲು ಪ್ರಯತ್ನಿಸಿದ್ದೆ. ಕಾಂಗ್ರೆಸ್‌‌ನವರೇ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...