Homeಕರ್ನಾಟಕBJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

BJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಿರಾತಂಕವಾಗಿ ಮುಂದುವರೆದಿದ್ದು, ಬೆಂಗಳೂರಿನ ಘಟನೆಯ ಸಂದರ್ಭದಲ್ಲಿ ‘ಅನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ’ ಎಂದು ಅಬ್ಬರಿಸಿ ಬೊಬ್ಬಿರಿದಿದ್ದ ಸಿಎಂ ಹಾಗೂ ಗೃಹಚಿವರು ಈಗ ಮೌನಕ್ಕೆ ಜಾರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ನಿಮ್ಮ ಶಾಸಕ ಉಮಾನಾಥ್ ಕೋಟ್ಯಾನ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ಹಿಂದೂ ಮಹಿಳೆಯರಿಬ್ಬರು ಪ್ರಯಾಣಿಸುತ್ತಿದ್ದರು ಎಂಬ ಕಾರಣಕ್ಕೆ ಬಜರಂಗದಳದ ದುಷ್ಕರ್ಮಿಗಳು ಅವರನ್ನು ತಡೆದು ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸಮಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಇದೀಗ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರ ಜೊತೆಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇರುವ ಚಿತ್ರ ವೈರಲ್ ಆಗಿದೆ. ಈ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಅದನ್ನು ಪ್ರಶ್ನಿಸಿದೆ.

 

“ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ರಾತ್ರೋರಾತ್ರಿ ಠಾಣೆ ನುಗ್ಗಿ ಮೂಡುಬಿದಿರೆ ಅನೈತಿಕ ಪೊಲೀಸ್‌ಗಿರಿ ಘಟನೆಯ ಆರೋಪಿಗಳನ್ನು ಕರೆತಂದಿದ್ದೇಕೆ? ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು, ಎಸಗಿದವರ ರಕ್ಷಣೆಗೆ ನಿಲ್ಲುವ ಬಿಜೆಪಿಯ ಹಳೆಯ ಚಾಳಿ. ಕಾನೂನು ಸುವ್ಯವಸ್ಥೆಯ ಕುಸಿತಕ್ಕೆ ಹಾಗೂ ಬಿಜೆಪಿ ಶಾಸಕರ ಈ ವರ್ತನೆಗೆ ಬೊಮ್ಮಾಯಿ ಅವರು ಉತ್ತರಿಸಬೇಕು” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ರಾಜ್ಯದಲ್ಲಿ ಜಾತಿ, ಧರ್ಮಗಳ ಹೆಸರಲ್ಲಿ ಒಡಕು ಮೂಡಿಸುವ, ವಿಭಜಿಸಿ ಆಳುವ ಕೆಲಸ ಮಾಡುತ್ತಿದೆ ಬಿಜೆಪಿ. ಈ ವಿಭಜನಾ ಮನಸ್ಥಿತಿಯ ಬಿಜೆಪಿಯೇ ನಿಜವಾದ ‘ತುಕಡೆ ಗ್ಯಾಂಗ್’. ಅನೈತಿಕ ಪೊಲೀಸ್‌ಗಿರಿ ನಡೆಸುವವರ ಸಹಕಾರಕ್ಕೆ ನಿಂತು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ ಸರ್ಕಾರ. ಬೊಮ್ಮಾಯಿ ಅವರೇ, ನಿಮ್ಮ ‘ಕಠಿಣ ಕ್ರಮ’ ಎಲ್ಲಿ ಹೋಯ್ತು!?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸುಮಾರು ಆರರಿಂದ ಎಂಟು ಜನ ಬಜರಂಗದಳದ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಸಂತ್ರಸ್ತರನ್ನು ಹಿಂಬಾಲಿಸಿ ಕಾರನ್ನು ತಡೆದಿದ್ದಾರೆ. ಹಿಂದೂ ಮಹಿಳೆಯರನ್ನು ಕಾರಿನಿಂದ ಇಳಿಯುವಂತೆ ಕೈಹಿಡಿದು ಹೊರಗೆ ಎಳೆದಿದ್ದು, ಮುಸ್ಲಿಮರ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿತ್ತು.

ಜೊತೆಗೆ ಹಿಂದೂ ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಕೊಂಡುಹೋದ ಮುಸ್ಲಿಂ ದಂಪತಿಗಳಿಗೂ ದುಷ್ಕರ್ಮಿಗಳು ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಪತ್ರಿಕೆ ವರದಿ ಹೇಳಿದೆ. ಘಟನೆಯ ಬಗ್ಗೆ ಮೂಡುಬಿದ್ರಿ ಪೊಲೀಸರು ಐಪಿಸಿ ಸೆಕ್ಷನ್ 354, 153 (ಎ), 504 ಮತ್ತು 506 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ತಾವು ಓದುಗರ ಪತ್ರ / ಹೊಗಳಿಕೆ ತೆಗಳಿಕೆ ವಿಭಾಗ ಸಂಪೂರ್ಣ ಬಂದ್ ಮಾಡಿರುವುದು ಖೇದಕರ.
    ತಮ್ಮ ಪತ್ರಿಕೆಯ ಓದುಗರು ಯಾರೂ ಈಗ ತಮಗೆ ಪತ್ರ /ಲೇಖನ ಬರೆಯುತ್ತಿಲ್ಲವೇ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...