Homeಕರ್ನಾಟಕBJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

BJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಿರಾತಂಕವಾಗಿ ಮುಂದುವರೆದಿದ್ದು, ಬೆಂಗಳೂರಿನ ಘಟನೆಯ ಸಂದರ್ಭದಲ್ಲಿ ‘ಅನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ’ ಎಂದು ಅಬ್ಬರಿಸಿ ಬೊಬ್ಬಿರಿದಿದ್ದ ಸಿಎಂ ಹಾಗೂ ಗೃಹಚಿವರು ಈಗ ಮೌನಕ್ಕೆ ಜಾರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ನಿಮ್ಮ ಶಾಸಕ ಉಮಾನಾಥ್ ಕೋಟ್ಯಾನ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ಹಿಂದೂ ಮಹಿಳೆಯರಿಬ್ಬರು ಪ್ರಯಾಣಿಸುತ್ತಿದ್ದರು ಎಂಬ ಕಾರಣಕ್ಕೆ ಬಜರಂಗದಳದ ದುಷ್ಕರ್ಮಿಗಳು ಅವರನ್ನು ತಡೆದು ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸಮಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಇದೀಗ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರ ಜೊತೆಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇರುವ ಚಿತ್ರ ವೈರಲ್ ಆಗಿದೆ. ಈ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಅದನ್ನು ಪ್ರಶ್ನಿಸಿದೆ.

 

“ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ರಾತ್ರೋರಾತ್ರಿ ಠಾಣೆ ನುಗ್ಗಿ ಮೂಡುಬಿದಿರೆ ಅನೈತಿಕ ಪೊಲೀಸ್‌ಗಿರಿ ಘಟನೆಯ ಆರೋಪಿಗಳನ್ನು ಕರೆತಂದಿದ್ದೇಕೆ? ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು, ಎಸಗಿದವರ ರಕ್ಷಣೆಗೆ ನಿಲ್ಲುವ ಬಿಜೆಪಿಯ ಹಳೆಯ ಚಾಳಿ. ಕಾನೂನು ಸುವ್ಯವಸ್ಥೆಯ ಕುಸಿತಕ್ಕೆ ಹಾಗೂ ಬಿಜೆಪಿ ಶಾಸಕರ ಈ ವರ್ತನೆಗೆ ಬೊಮ್ಮಾಯಿ ಅವರು ಉತ್ತರಿಸಬೇಕು” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ರಾಜ್ಯದಲ್ಲಿ ಜಾತಿ, ಧರ್ಮಗಳ ಹೆಸರಲ್ಲಿ ಒಡಕು ಮೂಡಿಸುವ, ವಿಭಜಿಸಿ ಆಳುವ ಕೆಲಸ ಮಾಡುತ್ತಿದೆ ಬಿಜೆಪಿ. ಈ ವಿಭಜನಾ ಮನಸ್ಥಿತಿಯ ಬಿಜೆಪಿಯೇ ನಿಜವಾದ ‘ತುಕಡೆ ಗ್ಯಾಂಗ್’. ಅನೈತಿಕ ಪೊಲೀಸ್‌ಗಿರಿ ನಡೆಸುವವರ ಸಹಕಾರಕ್ಕೆ ನಿಂತು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ ಸರ್ಕಾರ. ಬೊಮ್ಮಾಯಿ ಅವರೇ, ನಿಮ್ಮ ‘ಕಠಿಣ ಕ್ರಮ’ ಎಲ್ಲಿ ಹೋಯ್ತು!?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸುಮಾರು ಆರರಿಂದ ಎಂಟು ಜನ ಬಜರಂಗದಳದ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಸಂತ್ರಸ್ತರನ್ನು ಹಿಂಬಾಲಿಸಿ ಕಾರನ್ನು ತಡೆದಿದ್ದಾರೆ. ಹಿಂದೂ ಮಹಿಳೆಯರನ್ನು ಕಾರಿನಿಂದ ಇಳಿಯುವಂತೆ ಕೈಹಿಡಿದು ಹೊರಗೆ ಎಳೆದಿದ್ದು, ಮುಸ್ಲಿಮರ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿತ್ತು.

ಜೊತೆಗೆ ಹಿಂದೂ ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಕೊಂಡುಹೋದ ಮುಸ್ಲಿಂ ದಂಪತಿಗಳಿಗೂ ದುಷ್ಕರ್ಮಿಗಳು ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಪತ್ರಿಕೆ ವರದಿ ಹೇಳಿದೆ. ಘಟನೆಯ ಬಗ್ಗೆ ಮೂಡುಬಿದ್ರಿ ಪೊಲೀಸರು ಐಪಿಸಿ ಸೆಕ್ಷನ್ 354, 153 (ಎ), 504 ಮತ್ತು 506 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ತಾವು ಓದುಗರ ಪತ್ರ / ಹೊಗಳಿಕೆ ತೆಗಳಿಕೆ ವಿಭಾಗ ಸಂಪೂರ್ಣ ಬಂದ್ ಮಾಡಿರುವುದು ಖೇದಕರ.
    ತಮ್ಮ ಪತ್ರಿಕೆಯ ಓದುಗರು ಯಾರೂ ಈಗ ತಮಗೆ ಪತ್ರ /ಲೇಖನ ಬರೆಯುತ್ತಿಲ್ಲವೇ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...