Homeಕರ್ನಾಟಕBJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

BJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಿರಾತಂಕವಾಗಿ ಮುಂದುವರೆದಿದ್ದು, ಬೆಂಗಳೂರಿನ ಘಟನೆಯ ಸಂದರ್ಭದಲ್ಲಿ ‘ಅನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ’ ಎಂದು ಅಬ್ಬರಿಸಿ ಬೊಬ್ಬಿರಿದಿದ್ದ ಸಿಎಂ ಹಾಗೂ ಗೃಹಚಿವರು ಈಗ ಮೌನಕ್ಕೆ ಜಾರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ನಿಮ್ಮ ಶಾಸಕ ಉಮಾನಾಥ್ ಕೋಟ್ಯಾನ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ಹಿಂದೂ ಮಹಿಳೆಯರಿಬ್ಬರು ಪ್ರಯಾಣಿಸುತ್ತಿದ್ದರು ಎಂಬ ಕಾರಣಕ್ಕೆ ಬಜರಂಗದಳದ ದುಷ್ಕರ್ಮಿಗಳು ಅವರನ್ನು ತಡೆದು ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸಮಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಇದೀಗ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರ ಜೊತೆಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇರುವ ಚಿತ್ರ ವೈರಲ್ ಆಗಿದೆ. ಈ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಅದನ್ನು ಪ್ರಶ್ನಿಸಿದೆ.

 

“ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ರಾತ್ರೋರಾತ್ರಿ ಠಾಣೆ ನುಗ್ಗಿ ಮೂಡುಬಿದಿರೆ ಅನೈತಿಕ ಪೊಲೀಸ್‌ಗಿರಿ ಘಟನೆಯ ಆರೋಪಿಗಳನ್ನು ಕರೆತಂದಿದ್ದೇಕೆ? ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು, ಎಸಗಿದವರ ರಕ್ಷಣೆಗೆ ನಿಲ್ಲುವ ಬಿಜೆಪಿಯ ಹಳೆಯ ಚಾಳಿ. ಕಾನೂನು ಸುವ್ಯವಸ್ಥೆಯ ಕುಸಿತಕ್ಕೆ ಹಾಗೂ ಬಿಜೆಪಿ ಶಾಸಕರ ಈ ವರ್ತನೆಗೆ ಬೊಮ್ಮಾಯಿ ಅವರು ಉತ್ತರಿಸಬೇಕು” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ರಾಜ್ಯದಲ್ಲಿ ಜಾತಿ, ಧರ್ಮಗಳ ಹೆಸರಲ್ಲಿ ಒಡಕು ಮೂಡಿಸುವ, ವಿಭಜಿಸಿ ಆಳುವ ಕೆಲಸ ಮಾಡುತ್ತಿದೆ ಬಿಜೆಪಿ. ಈ ವಿಭಜನಾ ಮನಸ್ಥಿತಿಯ ಬಿಜೆಪಿಯೇ ನಿಜವಾದ ‘ತುಕಡೆ ಗ್ಯಾಂಗ್’. ಅನೈತಿಕ ಪೊಲೀಸ್‌ಗಿರಿ ನಡೆಸುವವರ ಸಹಕಾರಕ್ಕೆ ನಿಂತು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ ಸರ್ಕಾರ. ಬೊಮ್ಮಾಯಿ ಅವರೇ, ನಿಮ್ಮ ‘ಕಠಿಣ ಕ್ರಮ’ ಎಲ್ಲಿ ಹೋಯ್ತು!?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸುಮಾರು ಆರರಿಂದ ಎಂಟು ಜನ ಬಜರಂಗದಳದ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಸಂತ್ರಸ್ತರನ್ನು ಹಿಂಬಾಲಿಸಿ ಕಾರನ್ನು ತಡೆದಿದ್ದಾರೆ. ಹಿಂದೂ ಮಹಿಳೆಯರನ್ನು ಕಾರಿನಿಂದ ಇಳಿಯುವಂತೆ ಕೈಹಿಡಿದು ಹೊರಗೆ ಎಳೆದಿದ್ದು, ಮುಸ್ಲಿಮರ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿತ್ತು.

ಜೊತೆಗೆ ಹಿಂದೂ ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಕೊಂಡುಹೋದ ಮುಸ್ಲಿಂ ದಂಪತಿಗಳಿಗೂ ದುಷ್ಕರ್ಮಿಗಳು ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಪತ್ರಿಕೆ ವರದಿ ಹೇಳಿದೆ. ಘಟನೆಯ ಬಗ್ಗೆ ಮೂಡುಬಿದ್ರಿ ಪೊಲೀಸರು ಐಪಿಸಿ ಸೆಕ್ಷನ್ 354, 153 (ಎ), 504 ಮತ್ತು 506 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ತಾವು ಓದುಗರ ಪತ್ರ / ಹೊಗಳಿಕೆ ತೆಗಳಿಕೆ ವಿಭಾಗ ಸಂಪೂರ್ಣ ಬಂದ್ ಮಾಡಿರುವುದು ಖೇದಕರ.
    ತಮ್ಮ ಪತ್ರಿಕೆಯ ಓದುಗರು ಯಾರೂ ಈಗ ತಮಗೆ ಪತ್ರ /ಲೇಖನ ಬರೆಯುತ್ತಿಲ್ಲವೇ?

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...