Homeಕರ್ನಾಟಕBJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

BJP ಶಾಸಕ ಉಮಾನಾಥ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ?: ಸಿಎಂಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ನಿರಾತಂಕವಾಗಿ ಮುಂದುವರೆದಿದ್ದು, ಬೆಂಗಳೂರಿನ ಘಟನೆಯ ಸಂದರ್ಭದಲ್ಲಿ ‘ಅನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ’ ಎಂದು ಅಬ್ಬರಿಸಿ ಬೊಬ್ಬಿರಿದಿದ್ದ ಸಿಎಂ ಹಾಗೂ ಗೃಹಚಿವರು ಈಗ ಮೌನಕ್ಕೆ ಜಾರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ನಿಮ್ಮ ಶಾಸಕ ಉಮಾನಾಥ್ ಕೋಟ್ಯಾನ್ ಆರೋಪಿಗಳ ಬೆಂಬಲಕ್ಕೆ ನಿಂತಿದ್ದಾರೆ, ಈಗೇನಂತೀರಿ? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮುಸ್ಲಿಂ ವ್ಯಕ್ತಿಯ ಕಾರಿನಲ್ಲಿ ಹಿಂದೂ ಮಹಿಳೆಯರಿಬ್ಬರು ಪ್ರಯಾಣಿಸುತ್ತಿದ್ದರು ಎಂಬ ಕಾರಣಕ್ಕೆ ಬಜರಂಗದಳದ ದುಷ್ಕರ್ಮಿಗಳು ಅವರನ್ನು ತಡೆದು ಹಲ್ಲೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಸಮಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮತ್ತೊಂದು ಅನೈತಿಕ ಪೊಲೀಸ್‌ಗಿರಿ; ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಇದೀಗ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರ ಜೊತೆಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇರುವ ಚಿತ್ರ ವೈರಲ್ ಆಗಿದೆ. ಈ ಚಿತ್ರವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಅದನ್ನು ಪ್ರಶ್ನಿಸಿದೆ.

 

“ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ರಾತ್ರೋರಾತ್ರಿ ಠಾಣೆ ನುಗ್ಗಿ ಮೂಡುಬಿದಿರೆ ಅನೈತಿಕ ಪೊಲೀಸ್‌ಗಿರಿ ಘಟನೆಯ ಆರೋಪಿಗಳನ್ನು ಕರೆತಂದಿದ್ದೇಕೆ? ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು, ಎಸಗಿದವರ ರಕ್ಷಣೆಗೆ ನಿಲ್ಲುವ ಬಿಜೆಪಿಯ ಹಳೆಯ ಚಾಳಿ. ಕಾನೂನು ಸುವ್ಯವಸ್ಥೆಯ ಕುಸಿತಕ್ಕೆ ಹಾಗೂ ಬಿಜೆಪಿ ಶಾಸಕರ ಈ ವರ್ತನೆಗೆ ಬೊಮ್ಮಾಯಿ ಅವರು ಉತ್ತರಿಸಬೇಕು” ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಪುತ್ತೂರು-ಸುಳ್ಯದಲ್ಲಿ ಅನೈತಿಕ ಪೊಲೀಸ್‌ಗಿರಿ ಉಪದ್ರವ; ಜಿ.ಪಂ-ತಾ.ಪಂ ಚುನಾಚಣೆಗಾಗಿ ಈ ಆಟ?

“ರಾಜ್ಯದಲ್ಲಿ ಜಾತಿ, ಧರ್ಮಗಳ ಹೆಸರಲ್ಲಿ ಒಡಕು ಮೂಡಿಸುವ, ವಿಭಜಿಸಿ ಆಳುವ ಕೆಲಸ ಮಾಡುತ್ತಿದೆ ಬಿಜೆಪಿ. ಈ ವಿಭಜನಾ ಮನಸ್ಥಿತಿಯ ಬಿಜೆಪಿಯೇ ನಿಜವಾದ ‘ತುಕಡೆ ಗ್ಯಾಂಗ್’. ಅನೈತಿಕ ಪೊಲೀಸ್‌ಗಿರಿ ನಡೆಸುವವರ ಸಹಕಾರಕ್ಕೆ ನಿಂತು ರಾಜ್ಯದಲ್ಲಿ ತಾಲಿಬಾನ್ ಸಂಸ್ಕೃತಿ ಸ್ಥಾಪಿಸುತ್ತಿದೆ ಸರ್ಕಾರ. ಬೊಮ್ಮಾಯಿ ಅವರೇ, ನಿಮ್ಮ ‘ಕಠಿಣ ಕ್ರಮ’ ಎಲ್ಲಿ ಹೋಯ್ತು!?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸುಮಾರು ಆರರಿಂದ ಎಂಟು ಜನ ಬಜರಂಗದಳದ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಸಂತ್ರಸ್ತರನ್ನು ಹಿಂಬಾಲಿಸಿ ಕಾರನ್ನು ತಡೆದಿದ್ದಾರೆ. ಹಿಂದೂ ಮಹಿಳೆಯರನ್ನು ಕಾರಿನಿಂದ ಇಳಿಯುವಂತೆ ಕೈಹಿಡಿದು ಹೊರಗೆ ಎಳೆದಿದ್ದು, ಮುಸ್ಲಿಮರ ಕಾರಿನಲ್ಲಿ ಪ್ರಯಾಣಿಸಿದ್ದಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಮಹಿಳೆಯರು ದೂರಿದ್ದಾರೆ ಎಂದು ವಾರ್ತಾಭಾರತಿ ಪತ್ರಿಕೆ ವರದಿ ಮಾಡಿತ್ತು.

ಜೊತೆಗೆ ಹಿಂದೂ ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಕೊಂಡುಹೋದ ಮುಸ್ಲಿಂ ದಂಪತಿಗಳಿಗೂ ದುಷ್ಕರ್ಮಿಗಳು ನಿಂದಿಸಿ, ಹಲ್ಲೆಗೈದಿದ್ದಾರೆ ಎಂದು ಪತ್ರಿಕೆ ವರದಿ ಹೇಳಿದೆ. ಘಟನೆಯ ಬಗ್ಗೆ ಮೂಡುಬಿದ್ರಿ ಪೊಲೀಸರು ಐಪಿಸಿ ಸೆಕ್ಷನ್ 354, 153 (ಎ), 504 ಮತ್ತು 506 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ತಾವು ಓದುಗರ ಪತ್ರ / ಹೊಗಳಿಕೆ ತೆಗಳಿಕೆ ವಿಭಾಗ ಸಂಪೂರ್ಣ ಬಂದ್ ಮಾಡಿರುವುದು ಖೇದಕರ.
    ತಮ್ಮ ಪತ್ರಿಕೆಯ ಓದುಗರು ಯಾರೂ ಈಗ ತಮಗೆ ಪತ್ರ /ಲೇಖನ ಬರೆಯುತ್ತಿಲ್ಲವೇ?

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...