Homeಮುಖಪುಟಬಿಜೆಪಿಗೆ ತಾಕತ್ತಿದ್ದರೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ: ಉಗ್ರಪ್ಪ ಸವಾಲು

ಬಿಜೆಪಿಗೆ ತಾಕತ್ತಿದ್ದರೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ: ಉಗ್ರಪ್ಪ ಸವಾಲು

- Advertisement -
- Advertisement -

ಮಾಂಸಹಾರಿಗಳನ್ನು ತುಚ್ಛವಾಗಿ ಕಾಣುವ ಬಿಜೆಪಿ ಪಕ್ಷವು ತಾಕತ್ತಿದ್ದರೆ ನಮಗೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪನವರು ಸವಾಲು ಹಾಕಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ನವರು ಮಾಂಸಾಹಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಧಮ್ ಇದ್ದರೆ ಮಾಂಸಾಹಾರಿಗಳು ನಮ್ಮ ಶಾಖೆಗಳಿಗೆ ಬರುವುದು ಬೇಡ, ಬಿಜೆಪಿ ಕಾರ್ಯಕ್ರಮಗಳಿಗೆ ಬರುವುದು ಬೇಡ ಎಂದು ಘೋಷಿಸಬೇಕು” ಎಂದು ಒತ್ತಾಯಿಸಿದರು.

ಮಾಂಸಾಹಾರವು ಭಕ್ತರ ದೇವರೆಡೆಗಿನ ಭಕ್ತಿಯನ್ನು ಹಾಳು ಮಾಡುವುದಿಲ್ಲ. ಆದರೆ ಮಾಂಸಹಾರಿಗಳನ್ನು ದ್ವೇ‍ಷಿಸುವವರು ನಿಜವಾಗಿ ದೇವರನ್ನು ಪ್ರೀತಿಸಲಾರರು ಎಂದು ಉಗ್ರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಮಿತಿ ಮೀರಿದ ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ಕೋಮು ಪ್ರಚೋದನೆಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪ್ರವಾಹದಿಂದ 74 ಜನ ಸತ್ತಿರುವುದಾಗಿ ಕಂದಾಯ ಸಚಿವರು ಹೇಳಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಸರ್ಕಾರ ವಿಫಲವಾಗಿರುವ ಸಮಯದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಜನರ ಸಮಸ್ಯೆ ಆಲಿಸುತ್ತಿರುವಾ ಜನರ ದಾರಿ ತಪ್ಪಿಸಲು, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿಯವರು ಅಸಂಬದ್ಧ ವಿಚಾರಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಶಿವನಿಗೆ ಬೇಡರ ಕಣ್ಣಪ್ಪ ಮಾಂಸಾಹಾರವನ್ನು ನೈವೇಧ್ಯವಾಗಿ ನೀಡಿದ ಉಲ್ಲೇಖವಿದೆ. ರಾಮಾಯಣದಲ್ಲಿ ಸೀತೆ, ರಾಮ ಸೇರಿದಂತೆ ಹಲವರು ಮಾಂಸಾಹಾರದ ಪೂಜೆ ಮಾಡುವ ಹರಕೆ ಹೊರುವ ಪ್ರಸಂಗಗಳಿವೆ. ಇಂದು ಬಹುತೇಕ ಜನರು ಮಾಂಸಾಹಾರವನ್ನು ಎಡೆ ಇಟ್ಟು ಪೂಜೆ ಮಾಡುತ್ತಾರೆ. ಇವರನ್ನೆಲ್ಲ ಹಂಗಿಸಲು ಬಿಜೆಪಿ ಹೊರಟಿರುವುದು ಸರಿಯಲ್ಲ ಎಂದರು.

ದೇಶದ ಶೇ.79 ರಷ್ಟು ಜನ ಮಾಂಸಾಹಾರಿಗಳು. ಅವರನ್ನು ಅವಹೇಳನ ಮಾಡುವುದು ಯಾವ ಕಾರಣಕ್ಕೂ ಸರಿಯಲ್ಲ. ಆಹಾರ ಅವರವರ ಇಚ್ಛೆ. ಇದನ್ನು ಬಿಜೆಪಿ ಅರ್ಥ ಮಾಡಿಕೊಳ್ಳದಿದ್ದರೆ ಜನರೆ ಪಾಠ ಕಲಿಸುತ್ತಾರೆ ಎಂದರು.

ಇದನ್ನೂ ಓದಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಗ್ರೆಸ್ ನವರು ಅದೇ ರೀತಿ ಹಿಂದೂಗಳ ಮತ ಬೇಡ ನಮಗೆ ಅಂತ ಹೇಳಲಿ ,ಈ ರೀತಿಯಾಗಿ ಹಿಂದೂ ವಿರೋಧಿ ಹೇಳಿಕೆ ಕೊಡುವ ಬದಲು ನಾನು ಗೌರಿ ಪತ್ರಿಕೆಯ ಸಂಪಾದಕರೇ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...