Homeಮುಖಪುಟಬಿಜೆಪಿಗೆ ತಾಕತ್ತಿದ್ದರೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ: ಉಗ್ರಪ್ಪ ಸವಾಲು

ಬಿಜೆಪಿಗೆ ತಾಕತ್ತಿದ್ದರೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ: ಉಗ್ರಪ್ಪ ಸವಾಲು

- Advertisement -
- Advertisement -

ಮಾಂಸಹಾರಿಗಳನ್ನು ತುಚ್ಛವಾಗಿ ಕಾಣುವ ಬಿಜೆಪಿ ಪಕ್ಷವು ತಾಕತ್ತಿದ್ದರೆ ನಮಗೆ ಮಾಂಸಾಹಾರಿಗಳ ವೋಟ್ ಬೇಕಿಲ್ಲವೆಂದು ಘೋಷಿಸಲಿ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪನವರು ಸವಾಲು ಹಾಕಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಆರ್‌ಎಸ್‌ಎಸ್‌ನವರು ಮಾಂಸಾಹಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ಧಮ್ ಇದ್ದರೆ ಮಾಂಸಾಹಾರಿಗಳು ನಮ್ಮ ಶಾಖೆಗಳಿಗೆ ಬರುವುದು ಬೇಡ, ಬಿಜೆಪಿ ಕಾರ್ಯಕ್ರಮಗಳಿಗೆ ಬರುವುದು ಬೇಡ ಎಂದು ಘೋಷಿಸಬೇಕು” ಎಂದು ಒತ್ತಾಯಿಸಿದರು.

ಮಾಂಸಾಹಾರವು ಭಕ್ತರ ದೇವರೆಡೆಗಿನ ಭಕ್ತಿಯನ್ನು ಹಾಳು ಮಾಡುವುದಿಲ್ಲ. ಆದರೆ ಮಾಂಸಹಾರಿಗಳನ್ನು ದ್ವೇ‍ಷಿಸುವವರು ನಿಜವಾಗಿ ದೇವರನ್ನು ಪ್ರೀತಿಸಲಾರರು ಎಂದು ಉಗ್ರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಮಿತಿ ಮೀರಿದ ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ಕೋಮು ಪ್ರಚೋದನೆಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪ್ರವಾಹದಿಂದ 74 ಜನ ಸತ್ತಿರುವುದಾಗಿ ಕಂದಾಯ ಸಚಿವರು ಹೇಳಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಸರ್ಕಾರ ವಿಫಲವಾಗಿರುವ ಸಮಯದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಜನರ ಸಮಸ್ಯೆ ಆಲಿಸುತ್ತಿರುವಾ ಜನರ ದಾರಿ ತಪ್ಪಿಸಲು, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿಯವರು ಅಸಂಬದ್ಧ ವಿಚಾರಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಶಿವನಿಗೆ ಬೇಡರ ಕಣ್ಣಪ್ಪ ಮಾಂಸಾಹಾರವನ್ನು ನೈವೇಧ್ಯವಾಗಿ ನೀಡಿದ ಉಲ್ಲೇಖವಿದೆ. ರಾಮಾಯಣದಲ್ಲಿ ಸೀತೆ, ರಾಮ ಸೇರಿದಂತೆ ಹಲವರು ಮಾಂಸಾಹಾರದ ಪೂಜೆ ಮಾಡುವ ಹರಕೆ ಹೊರುವ ಪ್ರಸಂಗಗಳಿವೆ. ಇಂದು ಬಹುತೇಕ ಜನರು ಮಾಂಸಾಹಾರವನ್ನು ಎಡೆ ಇಟ್ಟು ಪೂಜೆ ಮಾಡುತ್ತಾರೆ. ಇವರನ್ನೆಲ್ಲ ಹಂಗಿಸಲು ಬಿಜೆಪಿ ಹೊರಟಿರುವುದು ಸರಿಯಲ್ಲ ಎಂದರು.

ದೇಶದ ಶೇ.79 ರಷ್ಟು ಜನ ಮಾಂಸಾಹಾರಿಗಳು. ಅವರನ್ನು ಅವಹೇಳನ ಮಾಡುವುದು ಯಾವ ಕಾರಣಕ್ಕೂ ಸರಿಯಲ್ಲ. ಆಹಾರ ಅವರವರ ಇಚ್ಛೆ. ಇದನ್ನು ಬಿಜೆಪಿ ಅರ್ಥ ಮಾಡಿಕೊಳ್ಳದಿದ್ದರೆ ಜನರೆ ಪಾಠ ಕಲಿಸುತ್ತಾರೆ ಎಂದರು.

ಇದನ್ನೂ ಓದಿ: ಆಹಾರದ ಹಕ್ಕು ಎತ್ತಿ ಹಿಡಿದ ಸಿದ್ದರಾಮಯ್ಯ: ಸೋಷಿಯಲ್‌ ಮೀಡಿಯಾ ತುಂಬಾ ಈಗ ಬಾಡಿನ ಘಮಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಗ್ರೆಸ್ ನವರು ಅದೇ ರೀತಿ ಹಿಂದೂಗಳ ಮತ ಬೇಡ ನಮಗೆ ಅಂತ ಹೇಳಲಿ ,ಈ ರೀತಿಯಾಗಿ ಹಿಂದೂ ವಿರೋಧಿ ಹೇಳಿಕೆ ಕೊಡುವ ಬದಲು ನಾನು ಗೌರಿ ಪತ್ರಿಕೆಯ ಸಂಪಾದಕರೇ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....