Homeಮುಖಪುಟಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ - ಸಾಮ್ನಾ

- Advertisement -
- Advertisement -

ಅಮೆರಿಕಾದಲ್ಲಿ ಟ್ರಂಪ್ ಸೋತು ಅಧಿಕಾರ ಬದಲಾವಣೆಯಾದಂತೆ ಬಿಹಾರದಲ್ಲಿಯೂ ಸಹ ಅದು ಮರುಕಳಿಸಲಿದ್ದು ಬಿಜೆಪಿ ಸೋಲಲಿದೆ ಎಂದು ಶಿವಸೇನೆ ಭವಿಷ್ಯ ನುಡಿದಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ, ಕೊರೊನಾ ಸಾಂಕ್ರಾಮಿಕದ ನಡುವೆಯೂ ಕೋಟ್ಯಂತರ ಹಣ ಖರ್ಚು ಮಾಡಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಆಯೋಜಿಸಿ ಡೊನಾಲ್ಡ್ ಟ್ರಂಪ್ ಕರೆಸಿದ್ದನ್ನು ತೀವ್ರವಾಗಿ ಟೀಕಿಸಿದೆ.

“ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ” ಎಂದು ಸಾಮ್ನಾ ಹೇಳಿದೆ.

ಅಮೆರಿಕಾದಲ್ಲಿ ರಾಜಕೀಯಾಧಿಕಾರ ಬದಲಾಗಿದೆ. ಎಷ್ಟು ಬಾರಿ ಟ್ರಂಪ್ ಟ್ರಂಪ್ ಎಂದು ಕೂಗಾಡಿದರು ಅಲ್ಲಿ ಜೋ ಬೈಡನ್ ಗೆದ್ದಿದ್ದಾರೆ. ಅಮೆರಿಕದ ಜನರು ಒಮ್ಮೆ ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಬಿಹಾರದಲ್ಲಿ ಸ್ಪಷ್ಟವಾಗಿ ಸೋಲಲಿದೆ. ನಾವು ಭಾರತದಲ್ಲಿ ನಮಸ್ತೆ ಟ್ರಂಪ್ ಎಂದರೆ ಅಮೆರಿಕನ್ನರು ವಿದಾಯಗಳು ಟ್ರಂಪ್ ಎಂದರು ಎಂದು ಶಿವಸೇನೆ ಹೇಳಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಡೊನಾಲ್ಡ್ ಟ್ರಂಪ್‌ರನ್ನು ಕರೆಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದನ್ನು, ಅದರಿಂದ ಕೊರೊನಾ ಸೋಂಕು ಹರಡಿದ್ದನ್ನು ಯಾರು ಅಲ್ಲಗೆಲೆಯಲು ಸಾಧ್ಯವಿಲ್ಲ. ಈಗ ಅಮೆರಿಕದ ಜನತೆ ಟ್ರಂಪ್ ಎಂಬ ವೈರಸ್‌ ಅನ್ನು ಎದೆಂದಿಗೂ ತೊಡೆದುಹಾಕಿದೆ ಎಂದು ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಸೇರಿದಂತೆ ಹಲವು ಎನ್‌ಡಿಎ ನಾಯಕರಿಗೆ ಯುವನಾಯಕ ತೇಜಶ್ವಿ ಯಾದವ್ ಮುಂದೆ ನಿಲ್ಲಲು ಸಾಧ್ಯವಿಲ್ಲ. ಬಿಹಾರದ ಜನರು ಮೋದಿ ಮತ್ತು ನಿತೀಶ್ ಕುಮಾರ್ ಮುಂದೆ ಮಂಡಿಯೂರದೆ, ಚುನಾವಣೆಯನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಹಾರದ ಜಂಗಲ್ ರಾಜ್ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿವಸೇನೆ, ‘ಬಿಹಾರದ ಜನರು ಮೊದಲು ನೀವು ಹೋಗಿ, ಜಂಗಲ್ ರಾಜ್ ಬಂದರೂ ಅದನ್ನು ನಾವು ನಿಭಾಯಿಸುತ್ತೇವೆ’ ಎನ್ನುತ್ತಿದ್ದಾರೆ ಎಂದಿದೆ.

ನಾಳೆ ಮಂಗಳವಾರ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಎಲ್ಲಾ ಚುನಾವಣಾತ್ತೋರ ಸಮೀಕ್ಷೆಗಳು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.


ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...