Homeಮುಖಪುಟಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ - ಸಾಮ್ನಾ

- Advertisement -
- Advertisement -

ಅಮೆರಿಕಾದಲ್ಲಿ ಟ್ರಂಪ್ ಸೋತು ಅಧಿಕಾರ ಬದಲಾವಣೆಯಾದಂತೆ ಬಿಹಾರದಲ್ಲಿಯೂ ಸಹ ಅದು ಮರುಕಳಿಸಲಿದ್ದು ಬಿಜೆಪಿ ಸೋಲಲಿದೆ ಎಂದು ಶಿವಸೇನೆ ಭವಿಷ್ಯ ನುಡಿದಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ, ಕೊರೊನಾ ಸಾಂಕ್ರಾಮಿಕದ ನಡುವೆಯೂ ಕೋಟ್ಯಂತರ ಹಣ ಖರ್ಚು ಮಾಡಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಆಯೋಜಿಸಿ ಡೊನಾಲ್ಡ್ ಟ್ರಂಪ್ ಕರೆಸಿದ್ದನ್ನು ತೀವ್ರವಾಗಿ ಟೀಕಿಸಿದೆ.

“ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ” ಎಂದು ಸಾಮ್ನಾ ಹೇಳಿದೆ.

ಅಮೆರಿಕಾದಲ್ಲಿ ರಾಜಕೀಯಾಧಿಕಾರ ಬದಲಾಗಿದೆ. ಎಷ್ಟು ಬಾರಿ ಟ್ರಂಪ್ ಟ್ರಂಪ್ ಎಂದು ಕೂಗಾಡಿದರು ಅಲ್ಲಿ ಜೋ ಬೈಡನ್ ಗೆದ್ದಿದ್ದಾರೆ. ಅಮೆರಿಕದ ಜನರು ಒಮ್ಮೆ ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಬಿಹಾರದಲ್ಲಿ ಸ್ಪಷ್ಟವಾಗಿ ಸೋಲಲಿದೆ. ನಾವು ಭಾರತದಲ್ಲಿ ನಮಸ್ತೆ ಟ್ರಂಪ್ ಎಂದರೆ ಅಮೆರಿಕನ್ನರು ವಿದಾಯಗಳು ಟ್ರಂಪ್ ಎಂದರು ಎಂದು ಶಿವಸೇನೆ ಹೇಳಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಡೊನಾಲ್ಡ್ ಟ್ರಂಪ್‌ರನ್ನು ಕರೆಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದನ್ನು, ಅದರಿಂದ ಕೊರೊನಾ ಸೋಂಕು ಹರಡಿದ್ದನ್ನು ಯಾರು ಅಲ್ಲಗೆಲೆಯಲು ಸಾಧ್ಯವಿಲ್ಲ. ಈಗ ಅಮೆರಿಕದ ಜನತೆ ಟ್ರಂಪ್ ಎಂಬ ವೈರಸ್‌ ಅನ್ನು ಎದೆಂದಿಗೂ ತೊಡೆದುಹಾಕಿದೆ ಎಂದು ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಸೇರಿದಂತೆ ಹಲವು ಎನ್‌ಡಿಎ ನಾಯಕರಿಗೆ ಯುವನಾಯಕ ತೇಜಶ್ವಿ ಯಾದವ್ ಮುಂದೆ ನಿಲ್ಲಲು ಸಾಧ್ಯವಿಲ್ಲ. ಬಿಹಾರದ ಜನರು ಮೋದಿ ಮತ್ತು ನಿತೀಶ್ ಕುಮಾರ್ ಮುಂದೆ ಮಂಡಿಯೂರದೆ, ಚುನಾವಣೆಯನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಹಾರದ ಜಂಗಲ್ ರಾಜ್ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿವಸೇನೆ, ‘ಬಿಹಾರದ ಜನರು ಮೊದಲು ನೀವು ಹೋಗಿ, ಜಂಗಲ್ ರಾಜ್ ಬಂದರೂ ಅದನ್ನು ನಾವು ನಿಭಾಯಿಸುತ್ತೇವೆ’ ಎನ್ನುತ್ತಿದ್ದಾರೆ ಎಂದಿದೆ.

ನಾಳೆ ಮಂಗಳವಾರ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಎಲ್ಲಾ ಚುನಾವಣಾತ್ತೋರ ಸಮೀಕ್ಷೆಗಳು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.


ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...