Homeಮುಖಪುಟಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ - ಸಾಮ್ನಾ

- Advertisement -
- Advertisement -

ಅಮೆರಿಕಾದಲ್ಲಿ ಟ್ರಂಪ್ ಸೋತು ಅಧಿಕಾರ ಬದಲಾವಣೆಯಾದಂತೆ ಬಿಹಾರದಲ್ಲಿಯೂ ಸಹ ಅದು ಮರುಕಳಿಸಲಿದ್ದು ಬಿಜೆಪಿ ಸೋಲಲಿದೆ ಎಂದು ಶಿವಸೇನೆ ಭವಿಷ್ಯ ನುಡಿದಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ, ಕೊರೊನಾ ಸಾಂಕ್ರಾಮಿಕದ ನಡುವೆಯೂ ಕೋಟ್ಯಂತರ ಹಣ ಖರ್ಚು ಮಾಡಿ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ಆಯೋಜಿಸಿ ಡೊನಾಲ್ಡ್ ಟ್ರಂಪ್ ಕರೆಸಿದ್ದನ್ನು ತೀವ್ರವಾಗಿ ಟೀಕಿಸಿದೆ.

“ನಮ್ಮನ್ನು ಹೊರತುಪಡಿಸಿ ದೇಶ ಮತ್ತು ರಾಜ್ಯದಲ್ಲಿ ಬೇರೆ ಪರ್ಯಾಯಗಳಿಲ್ಲ ಎಂಬ ಭ್ರಮೆಯನ್ನು ಜನರು ಕೆಲವೊಮ್ಮೆ ತೆಗೆದುಹಾಕಬೇಕಾಗುತ್ತದೆ. ಈ ಬಾರಿ ಬಿಹಾರದಲ್ಲಿ ಎನ್‌ಡಿಎ ಸ್ಪಷ್ಟವಾಗಿ ಸೋಲಲಿದೆ” ಎಂದು ಸಾಮ್ನಾ ಹೇಳಿದೆ.

ಅಮೆರಿಕಾದಲ್ಲಿ ರಾಜಕೀಯಾಧಿಕಾರ ಬದಲಾಗಿದೆ. ಎಷ್ಟು ಬಾರಿ ಟ್ರಂಪ್ ಟ್ರಂಪ್ ಎಂದು ಕೂಗಾಡಿದರು ಅಲ್ಲಿ ಜೋ ಬೈಡನ್ ಗೆದ್ದಿದ್ದಾರೆ. ಅಮೆರಿಕದ ಜನರು ಒಮ್ಮೆ ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅದೇ ರೀತಿಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಬಿಹಾರದಲ್ಲಿ ಸ್ಪಷ್ಟವಾಗಿ ಸೋಲಲಿದೆ. ನಾವು ಭಾರತದಲ್ಲಿ ನಮಸ್ತೆ ಟ್ರಂಪ್ ಎಂದರೆ ಅಮೆರಿಕನ್ನರು ವಿದಾಯಗಳು ಟ್ರಂಪ್ ಎಂದರು ಎಂದು ಶಿವಸೇನೆ ಹೇಳಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಡೊನಾಲ್ಡ್ ಟ್ರಂಪ್‌ರನ್ನು ಕರೆಸಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಮಾಡಿದ್ದನ್ನು, ಅದರಿಂದ ಕೊರೊನಾ ಸೋಂಕು ಹರಡಿದ್ದನ್ನು ಯಾರು ಅಲ್ಲಗೆಲೆಯಲು ಸಾಧ್ಯವಿಲ್ಲ. ಈಗ ಅಮೆರಿಕದ ಜನತೆ ಟ್ರಂಪ್ ಎಂಬ ವೈರಸ್‌ ಅನ್ನು ಎದೆಂದಿಗೂ ತೊಡೆದುಹಾಕಿದೆ ಎಂದು ಸಾಮ್ನಾದಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಸೇರಿದಂತೆ ಹಲವು ಎನ್‌ಡಿಎ ನಾಯಕರಿಗೆ ಯುವನಾಯಕ ತೇಜಶ್ವಿ ಯಾದವ್ ಮುಂದೆ ನಿಲ್ಲಲು ಸಾಧ್ಯವಿಲ್ಲ. ಬಿಹಾರದ ಜನರು ಮೋದಿ ಮತ್ತು ನಿತೀಶ್ ಕುಮಾರ್ ಮುಂದೆ ಮಂಡಿಯೂರದೆ, ಚುನಾವಣೆಯನ್ನು ತಮ್ಮ ಕೈಗೆ ತೆಗೆದುಕೊಂಡಿದ್ದಾರೆ ಎಂದು ಶಿವಸೇನೆ ಹೇಳಿದೆ.

ಬಿಹಾರದ ಜಂಗಲ್ ರಾಜ್ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿವಸೇನೆ, ‘ಬಿಹಾರದ ಜನರು ಮೊದಲು ನೀವು ಹೋಗಿ, ಜಂಗಲ್ ರಾಜ್ ಬಂದರೂ ಅದನ್ನು ನಾವು ನಿಭಾಯಿಸುತ್ತೇವೆ’ ಎನ್ನುತ್ತಿದ್ದಾರೆ ಎಂದಿದೆ.

ನಾಳೆ ಮಂಗಳವಾರ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಎಲ್ಲಾ ಚುನಾವಣಾತ್ತೋರ ಸಮೀಕ್ಷೆಗಳು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.


ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...