Homeಮುಖಪುಟಶಹೀನ್ ಬಾಗ್ ಇರುವ ಓಕ್ಲಾ ಕ್ಷೇತ್ರದಲ್ಲಿ ಹೀನಾಯವಾಗಿ ಸೋತ ಬಿಜೆಪಿ...!! ದಾಖಲೆಯ ಜಯ ಕಂಡ ಆಪ್‌

ಶಹೀನ್ ಬಾಗ್ ಇರುವ ಓಕ್ಲಾ ಕ್ಷೇತ್ರದಲ್ಲಿ ಹೀನಾಯವಾಗಿ ಸೋತ ಬಿಜೆಪಿ…!! ದಾಖಲೆಯ ಜಯ ಕಂಡ ಆಪ್‌

ಎಎಪಿ ನಾಯಕ ಅಮಾನತುಲ್ಲಾ ಖಾನ್ 91,000 ಮತಗಳ ಭಾರೀ ಅಂತರದಿಂದ ಜಯ

- Advertisement -
- Advertisement -

ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರು ಓಖ್ಲಾ ಕ್ಷೇತ್ರದಿಂದ ಬರೋಬ್ಬರಿ  91,000 ಮತಗಳ ಅಂತರದಿಂದ ಗೆದ್ದಿದ್ದಾರೆ. ಆರಂಭಿಕ ಕೆಲವು ಸುತ್ತುಗಳ ಎಣಿಕೆಯಲ್ಲಿ ಹಿನ್ನಡೆಯಾದರೂ ಬಿಜೆಪಿಯ ಬ್ರಾಹಮ್ ಸಿಂಗ್ ಮತ್ತು ಕಾಂಗ್ರೆಸ್ ನ ಪರ್ವೇಜ್ ಹಶ್ಮಿ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಮಾನತುಲ್ಲಾ ಖಾನ್, ತಮ್ಮ ವಿಜಯವನ್ನು ಬಿಜೆಪಿಯ ವಿಭಜಕ ರಾಜಕಾರಣದ ವಿರುದ್ಧ ಆಮ್ ಆದ್ಮಿ ಪಕ್ಷದ ‘ಕೆಲಸ’ ಮಾಡಿದ ವಿಜಯ ಎಂದು ಬಣ್ಣಿಸಿದರು. “ದೆಹಲಿಯ ಜನರು ಇವತ್ತು ಬಿಜೆಪಿ ಮತ್ತು ಅಮಿತ್ ಷಾ ಅವರಿಗೆ ವಿದ್ಯುತ್ ಶಾಕ್ ಕೊಡುವ ಕೆಲಸ ಮಾಡಿದ್ದಾರೆ. ಇದು ಕೆಲಸದ ವಿಜಯ ಮತ್ತು ದ್ವೇಷದ ಸೋಲು” ಎಂದಿದ್ದಾರೆ.

ಈ ಮೊದಲು ಗೃಹ ಸಚಿವ ಅಮಿತ್‌ ಶಾ “ನೀವು ಹೇಗೆ ಇವಿಯಂನಲ್ಲಿ ಓಟು ಒತ್ತಬೇಕೆಂದರೆ ಶಾಹೀನ್‌ ಬಾಗ್‌ಗೆ ವಿದ್ಯುತ್‌ ಶಾಕ್‌ ಹೊಡೆಯಬೇಕು” ಎಂಬ ಹೇಳಿಕೆ ನೀಡಿದ್ದರು. ಅದಕ್ಕೆ ಖಾನ್‌ ಇಂದು ತಿರುಗೇಟು ನೀಡಿದ್ದಾರೆ.

ಅತಿಹೆಚ್ಚು ಅಂತರದಿಂದ ಈ ಕ್ಷೇತ್ರದಲ್ಲಿ ಆಪ್‌ನ ಅಮಾನತುಲ್ಲಾ ಖಾನ್ ವಿಜಯ ಸಾಧಿಸುವ ಮೂಲಕ ಬಿಜೆಪಿ ಮುಖಭಂಗ ಉಂಟು ಮಾಡಿದ್ದಾರೆ.

ಎಕ್ಸಿಟ್ ಪೋಲ್‌ ಸಮೀಕ್ಷೆಗಳು ಖಾನ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆ ಎಂದು ಹೇಳಿದ್ದವು. ಓಖ್ಲಾ ಮುಸ್ಲಿಂ ಪ್ರಾಬಲ್ಯದ ಕ್ಷೇತ್ರವಾಗಿದ್ದು, ಸಮುದಾಯವು 40% ಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಯ ಕೇಂದ್ರವೆಂದು ಬಿಂಬಿತವಾಗಿರುವ ಶಹೀನ್ ಬಾಗ್ ಕೂಡಾ ಇದೇ ಕ್ಷೇತ್ರಕ್ಕೆ ಸೇರುತ್ತದೆ.

ಚುನಾವಣೆಗೆ ಮುಂಚಿತವಾಗಿ ಖಾನ್ ಡಿಸೆಂಬರ್ 15 ರಂದು ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಮೊದಲು ಭಾಷಣ ಮಾಡಿದ್ದರು. ಹಿಂಸಾಚಾರದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ್ದಾಗಿ ಹೇಳಿ ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...