Homeಮುಖಪುಟಬಿಜೆಪಿ ನಾಯಕರ ಅತಿಯಾದ ವಿಶ್ವಾಸದಿಂದ ಬಂಗಾಳದಲ್ಲಿ ಸೋಲು: ಸುವೆಂದು ಅಧಿಕಾರಿ

ಬಿಜೆಪಿ ನಾಯಕರ ಅತಿಯಾದ ವಿಶ್ವಾಸದಿಂದ ಬಂಗಾಳದಲ್ಲಿ ಸೋಲು: ಸುವೆಂದು ಅಧಿಕಾರಿ

- Advertisement -
- Advertisement -

ಪಕ್ಷಕ್ಕೆ ರಾಜ್ಯದಲ್ಲಿ 170 ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಎಂಬ ಕೆಲವು ನಾಯಕರ ಅತಿಯಾದ ಆತ್ಮವಿಶ್ವಾಸದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತಿದೆ ಎಂದು ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.

ಪುರ್ಬಾ ಮದಿನಿಪುರ ಜಿಲ್ಲೆಯ ಚಂಡೀಪುರದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಸುವೆಂದು ಅಧಿಕಾರಿ, ತಾವು ಸ್ಪರ್ಧಿಸುತ್ತಿರುವ ಸ್ಥಳದ ಪರಿಸ್ಥಿತಿಯ ಬಗ್ಗೆ ತಿಳುವಳಿಕೆಯ ಕೊರತೆ ಮತ್ತು ಕೆಲವು ನಾಯಕರ ಅತಿಯಾದ ಆತ್ಮವಿಶ್ವಾಸ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.

“ಚುನಾವಣೆಯಲ್ಲಿ ಎರಡು ಹಂತದ ಮತದಾನವಾಗುತ್ತಿದ್ದಂತೆಯೇ ನಮ್ಮಲ್ಲಿನ ಹಲವು ನಾಯಕರು ತೃಪ್ತಿ ಹೊಂದಿದವರಂತೆ ನಡೆದುಕೊಂಡರು. ಚುನಾವಣೆ ಗೆಲುವಿನ ಬಗ್ಗೆ ಅತೀಯಾದ ಆತ್ಮ ವಿಶ್ವಾಸ ಹೊಂದಿದ್ದರು.  . ಚುನಾವಣೆಯಲ್ಲಿ ಬಿಜೆಪಿ 170 ರಿಂದ 180 ಸ್ಥಾನಗಳನ್ನು ಗಳಿಸಲಿದೆ ಎಂದು ನಂಬಲು ಪ್ರಾರಂಭಿಸಿದರು, ಆದರೆ ಅವರ್‍ಯಾರು ಗ್ರೌಂಡ್‌ ವರ್ಕ್ ಮಾಡಲಿಲ್ಲ. ಇದು ಚುನಾವಣೆ ಫಲಿತಾಂಶದಲ್ಲಿ ನಮಗೆ ದೊಡ್ಡ ಹೊಡೆತ ನೀಡಿತು” ಎಂದು ಮಾಜಿ ಟಿಎಂಸಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ಗುರಿಗಳನ್ನು ನಿಗದಿಪಡಿಸುವಂತೆ ಗ್ರೌಂಡ್‌ ವರ್ಕ್ ಮಾಡುವುದು ತುಂಬಾ ಮುಖ್ಯ. ಅದು ವಾಸ್ತವಿಕವಾದರೂ ಕಠಿಣ ಪರಿಶ್ರಮದ ಅಗತ್ಯವಿದೆ ಎಂದು ಸುವೆಂದು ಹೇಳಿದ್ದಾರೆ.

ಅಧಿಕಾರಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ವಕ್ತಾರ ಕುನಾಲ್ ಘೋಷ್, “ಸುವೆಂದು ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಮತ್ತು ಅವರ ಅಭಿವೃದ್ಧಿಯ ಕೆಲಸಗಳನ್ನು ಬೇಕು ಎಂದೇ ಮರೆತಿದ್ದಾರೆ” ಎಂದು ಹೇಳಿದ್ದಾರೆ.

“ಬಂಗಾಳ ಚುನಾವಣೆಯಲ್ಲಿ 200 ಸ್ಥಾನಗಳನ್ನು ದಾಟಲಿದೆ ಎಂದು ಅವರ ಅನೇಕ ನಾಯಕರು ಊಹಿಸಿದ್ದರಿಂದ ಬಿಜೆಪಿ ಮೂರ್ಖರ ಸ್ವರ್ಗದಲ್ಲಿತ್ತು. ಈಗ ಸುವೆಂದು ಇತರ ಮೇಲೆ ಏಕೆ ಗೂಬೆ ಕೂರಿಸುತ್ತಿದ್ದಾರೆ..? ತಮ್ಮ ಪಕ್ಷಕ್ಕೆ ಕನಿಷ್ಠ 180 ಸ್ಥಾನಗಳು ಸಿಗುತ್ತವೆ ಎಂದು ಹೇಳಿಕೊಂಡು ಸುವೇಂದು ಪದೇ ಪದೇ ಹೆಮ್ಮೆ ಪಡಲಿಲ್ಲವೇ? ಅವರಿಗೆ ಬಂಗಾಳದ ನಾಡಿಮಿಡಿತ ತಿಳಿದಿಲ್ಲ, ಆದರೆ, ತೃಣಮೂಲ ಕಾಂಗ್ರೆಸ್‌ಗೆ ತಿಳಿದಿದೆ” ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್‌ ಘೋಷ್ ಹೇಳಿದ್ದಾರೆ.

ನಂದಿಗ್ರಾಮದ ಶಾಸಕ ಬಿಜೆಪಿಯ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಫಲಿತಾಂಶದ ವಿರುದ್ಧದ ಅರ್ಜಿ ವಿಚಾರಣೆಯನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...