Homeಕರ್ನಾಟಕ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

- Advertisement -
- Advertisement -

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಬಿಜೆಪಿ ಜಾಹೀರಾತು ನೀಡಿದೆ.

ರಾಜಕೀಯ ಸೌಜನ್ಯವನ್ನು ಮೀರಿ ಅತಿರೇಕದ ಜಾಹೀರಾತನ್ನು ನೀಡಿರುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ಪತ್ರಕರ್ತರಾದ ಸತನ್‌ ಕುಮಾರ್‌ ಬೆಳಗಲಿಯವರು, “ರಾಹುಲ್‌ ಗಾಂಧಿಯವರ ಭಾರತ ಜೋಡಿಸುವ ಯಾತ್ರೆಯಿಂದ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದಕ್ಕೆ ಈ ಜಾಹೀರಾತು ಉದಾಹರಣೆ. ಸ್ವಾತಂತ್ರ್ಯ ಹೋರಾಟದ ನೇತಾರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ತೇಜೋವಧೆಗೆ ಈ ನಿರ್ಲಜ್ಜ ಕೋಮುವಾದಿ ಪಕ್ಷ ಮುಂದಾಗಿದೆ” ಎಂದು ಟೀಕಿಸಿದ್ದಾರೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತ ಪ್ರಾಧ್ಯಾಪಕರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ʼಸಂಸ್ಕೃತಿ ರಕ್ಷಕʼರೆಂದು ತಾವೇ ಘೋಷಿಸಿಕೊಂಡವರ ಅಸಂಸ್ಕೃತ ಭಾಷೆ ಗಮನಿಸಿ. ಇದನ್ನು ಬರೆದವನು ಮೊದಲು ವಿದ್ಯಾಧಿದೇವತೆಯಾದ ಸರಸ್ವತಿಯನ್ನು ಪೂಜಿಸಿ (ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣೀ, ವಿದ್ಯಾರಂಭಂ ಕರಿಷ್ಯಾಮೀ ಸಿದ್ದಿರ್ಭವತು ಮೇ ಸದಾ) ಶಾಲೆಗೆ ಸೇರಬೇಕು. ವಯಸ್ಕರ ಶಿಕ್ಷಣಕ್ಕೂ ಆದೀತು. ಅಂದ ಹಾಗೆ ಕರ್ನಾಟಕದಲ್ಲಿ ಬಿಜೆಪಿಯ ಸ್ಥಿತಿ ಇಷ್ಟೊಂದು ಕರುಣಾಜನಕವಾಗಿದೆಯೇ? ಜಾಹೀರಾತು ನೋಡಿದರೆ 40-50 ಸೀಟು ಕೂಡಾ ಗ್ಯಾರಂಟಿ ಇದ್ದಂಗಿಲ್ಲ” ಎಂದಿದ್ದಾರೆ.

ಕೊಪ್ಪಳದ ನಿವಾಸಿ ಚಾಮರಾಜ ಸವಡಿ ಪ್ರತಿಕ್ರಿಯಿಸಿ, “ಇಂದಿನ (1-10-2022) ಕನ್ನಡಪ್ರಭ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ ಈ ಜಾಹೀರಾತು ದ್ವೇಷ ರಾಜಕಾರಣದ ಪ್ರತೀಕ. ಪ್ರಜಾಸತ್ತಾತ್ಮಕ ವಿಧಾನದಲ್ಲಿ ತಮ್ಮ ಚಟುವಟಿಕೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ರಾಜಕೀಯ ಪಕ್ಷಗಳೂ ಅದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್‌ ಪಕ್ಷದ ಈ ಕಾರ್ಯಕ್ರಮಕ್ಕೆ ಬಿಜೆಪಿ ಸೈದ್ಧಾಂತಿಕವಾಗಿ ಪ್ರತಿಕ್ರಿಯಿಸಬಹುದಿತ್ತು. ಅದು ಬಿಟ್ಟು ಈ ರೀತಿಯ ದ್ವೇಷ ಪ್ರಚಾರ ನಡೆಸುವುದು ಬಿಜೆಪಿಗಷ್ಟೇ ಅಲ್ಲ, ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವ ಸಂಗತಿಯಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ತಾನು ತಳಮಳಗೊಂಡಿರುವುದನ್ನು ಬಿಜೆಪಿಯ ಈ ಜಾಹೀರಾತು ಬಿಂಬಿಸಿದೆ’’ ಎಂದು ತಿಳಿಸಿದ್ದಾರೆ.

ಚಿಂತಕ ಸುದರ್ಶನ್ ಜಯರಾಮು ಟ್ವೀಟ್ ಮಾಡಿ, “ಬಿಜೆಪಿ ಪಕ್ಷವೂ ಕೂಡ ಇದೀಗ #BharatJodoYatra ಗೆ ತನ್ನ ಬೆಂಬಲವನ್ನು ಕೊಡುತ್ತಿದೆ. ಈ ಮುಖಪುಟದ ಜಾಹೀರಾತು ಹಾಕಲು ಕನಿಷ್ಠ ಪಕ್ಷ 10 ಲಕ್ಷವಾದರೂ ಖರ್ಚಾಗುತ್ತದೆ” ಎಂದಿದ್ದಾರೆ. ಜೊತೆಗೆ ಗಾಂಧಿಯವರ ಮಾತನ್ನು ಉಲ್ಲೇಖಿಸಿದ್ದಾರೆ.

“ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂದು ಗಾಂಧೀಜಿ ಹೇಳಿದ್ದನ್ನು ಸ್ಮರಿಸಿದ್ದಾರೆ.

“ಕೇಂದ್ರ , ರಾಜ್ಯ ಎರಡರಲ್ಲೂ ಅಧಿಕಾರದಲ್ಲಿರುವ ಪಕ್ಷವೊಂದು ವಿರೋಧ ಪಕ್ಷದ ಜಾಥಾವೊಂದರ ವಿರುದ್ಧ‘ ಇಷ್ಟು ಕೊಳಕಾಗಿ ಪೂರ್ತಿ ಪುಟದ ಜಾಹೀರಾತು ನೀಡಬೇಕಾದರೆ ಅದು ಯಾವ ಮಟ್ಟಿನ ಹತಾಶ ಸ್ಥಿತಿ ತಲುಪಿರಬೇಕು? ಕರ್ನಾಟಕದ ಮಟ್ಟಿಗೆ ಬಿಜೆಪಿ ಸೋಲನ್ನು ಈಗಾಗಲೇ ಅರ್ಧ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಾಣುತ್ತಿದೆ” ಎಂದು ರಾಧಾ ಅವಿನಾಶ್ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನಡೆ ಸಾದಿಸುತ್ತಿರುವುದರಿಂದ, ಮನುವಾದಿಗಳು ಕಂಗೆಟ್ಟಿದ್ದಾರೆ. ಅದಕ್ಕೆ ಇಂತಹ ನೀಚತನದ ಜಾಹೀರಾತು ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕಾದ್ರಿ ಶಾಮಣ್ಣನಂತವರು ಸಂಪಾದಕರಾಗಿದ್ದ ಕನ್ನಡ ಪ್ರಬ, ಇಂದು ಇಂತಹ ಹೀನಾಯ ಸ್ತಿತಿಗೆ ಬಂದಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...