Homeಕರ್ನಾಟಕ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

- Advertisement -
- Advertisement -

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಬಿಜೆಪಿ ಜಾಹೀರಾತು ನೀಡಿದೆ.

ರಾಜಕೀಯ ಸೌಜನ್ಯವನ್ನು ಮೀರಿ ಅತಿರೇಕದ ಜಾಹೀರಾತನ್ನು ನೀಡಿರುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ಪತ್ರಕರ್ತರಾದ ಸತನ್‌ ಕುಮಾರ್‌ ಬೆಳಗಲಿಯವರು, “ರಾಹುಲ್‌ ಗಾಂಧಿಯವರ ಭಾರತ ಜೋಡಿಸುವ ಯಾತ್ರೆಯಿಂದ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದಕ್ಕೆ ಈ ಜಾಹೀರಾತು ಉದಾಹರಣೆ. ಸ್ವಾತಂತ್ರ್ಯ ಹೋರಾಟದ ನೇತಾರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ತೇಜೋವಧೆಗೆ ಈ ನಿರ್ಲಜ್ಜ ಕೋಮುವಾದಿ ಪಕ್ಷ ಮುಂದಾಗಿದೆ” ಎಂದು ಟೀಕಿಸಿದ್ದಾರೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತ ಪ್ರಾಧ್ಯಾಪಕರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ʼಸಂಸ್ಕೃತಿ ರಕ್ಷಕʼರೆಂದು ತಾವೇ ಘೋಷಿಸಿಕೊಂಡವರ ಅಸಂಸ್ಕೃತ ಭಾಷೆ ಗಮನಿಸಿ. ಇದನ್ನು ಬರೆದವನು ಮೊದಲು ವಿದ್ಯಾಧಿದೇವತೆಯಾದ ಸರಸ್ವತಿಯನ್ನು ಪೂಜಿಸಿ (ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣೀ, ವಿದ್ಯಾರಂಭಂ ಕರಿಷ್ಯಾಮೀ ಸಿದ್ದಿರ್ಭವತು ಮೇ ಸದಾ) ಶಾಲೆಗೆ ಸೇರಬೇಕು. ವಯಸ್ಕರ ಶಿಕ್ಷಣಕ್ಕೂ ಆದೀತು. ಅಂದ ಹಾಗೆ ಕರ್ನಾಟಕದಲ್ಲಿ ಬಿಜೆಪಿಯ ಸ್ಥಿತಿ ಇಷ್ಟೊಂದು ಕರುಣಾಜನಕವಾಗಿದೆಯೇ? ಜಾಹೀರಾತು ನೋಡಿದರೆ 40-50 ಸೀಟು ಕೂಡಾ ಗ್ಯಾರಂಟಿ ಇದ್ದಂಗಿಲ್ಲ” ಎಂದಿದ್ದಾರೆ.

ಕೊಪ್ಪಳದ ನಿವಾಸಿ ಚಾಮರಾಜ ಸವಡಿ ಪ್ರತಿಕ್ರಿಯಿಸಿ, “ಇಂದಿನ (1-10-2022) ಕನ್ನಡಪ್ರಭ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ ಈ ಜಾಹೀರಾತು ದ್ವೇಷ ರಾಜಕಾರಣದ ಪ್ರತೀಕ. ಪ್ರಜಾಸತ್ತಾತ್ಮಕ ವಿಧಾನದಲ್ಲಿ ತಮ್ಮ ಚಟುವಟಿಕೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ರಾಜಕೀಯ ಪಕ್ಷಗಳೂ ಅದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್‌ ಪಕ್ಷದ ಈ ಕಾರ್ಯಕ್ರಮಕ್ಕೆ ಬಿಜೆಪಿ ಸೈದ್ಧಾಂತಿಕವಾಗಿ ಪ್ರತಿಕ್ರಿಯಿಸಬಹುದಿತ್ತು. ಅದು ಬಿಟ್ಟು ಈ ರೀತಿಯ ದ್ವೇಷ ಪ್ರಚಾರ ನಡೆಸುವುದು ಬಿಜೆಪಿಗಷ್ಟೇ ಅಲ್ಲ, ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವ ಸಂಗತಿಯಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ತಾನು ತಳಮಳಗೊಂಡಿರುವುದನ್ನು ಬಿಜೆಪಿಯ ಈ ಜಾಹೀರಾತು ಬಿಂಬಿಸಿದೆ’’ ಎಂದು ತಿಳಿಸಿದ್ದಾರೆ.

ಚಿಂತಕ ಸುದರ್ಶನ್ ಜಯರಾಮು ಟ್ವೀಟ್ ಮಾಡಿ, “ಬಿಜೆಪಿ ಪಕ್ಷವೂ ಕೂಡ ಇದೀಗ #BharatJodoYatra ಗೆ ತನ್ನ ಬೆಂಬಲವನ್ನು ಕೊಡುತ್ತಿದೆ. ಈ ಮುಖಪುಟದ ಜಾಹೀರಾತು ಹಾಕಲು ಕನಿಷ್ಠ ಪಕ್ಷ 10 ಲಕ್ಷವಾದರೂ ಖರ್ಚಾಗುತ್ತದೆ” ಎಂದಿದ್ದಾರೆ. ಜೊತೆಗೆ ಗಾಂಧಿಯವರ ಮಾತನ್ನು ಉಲ್ಲೇಖಿಸಿದ್ದಾರೆ.

“ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂದು ಗಾಂಧೀಜಿ ಹೇಳಿದ್ದನ್ನು ಸ್ಮರಿಸಿದ್ದಾರೆ.

“ಕೇಂದ್ರ , ರಾಜ್ಯ ಎರಡರಲ್ಲೂ ಅಧಿಕಾರದಲ್ಲಿರುವ ಪಕ್ಷವೊಂದು ವಿರೋಧ ಪಕ್ಷದ ಜಾಥಾವೊಂದರ ವಿರುದ್ಧ‘ ಇಷ್ಟು ಕೊಳಕಾಗಿ ಪೂರ್ತಿ ಪುಟದ ಜಾಹೀರಾತು ನೀಡಬೇಕಾದರೆ ಅದು ಯಾವ ಮಟ್ಟಿನ ಹತಾಶ ಸ್ಥಿತಿ ತಲುಪಿರಬೇಕು? ಕರ್ನಾಟಕದ ಮಟ್ಟಿಗೆ ಬಿಜೆಪಿ ಸೋಲನ್ನು ಈಗಾಗಲೇ ಅರ್ಧ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಾಣುತ್ತಿದೆ” ಎಂದು ರಾಧಾ ಅವಿನಾಶ್ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನಡೆ ಸಾದಿಸುತ್ತಿರುವುದರಿಂದ, ಮನುವಾದಿಗಳು ಕಂಗೆಟ್ಟಿದ್ದಾರೆ. ಅದಕ್ಕೆ ಇಂತಹ ನೀಚತನದ ಜಾಹೀರಾತು ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕಾದ್ರಿ ಶಾಮಣ್ಣನಂತವರು ಸಂಪಾದಕರಾಗಿದ್ದ ಕನ್ನಡ ಪ್ರಬ, ಇಂದು ಇಂತಹ ಹೀನಾಯ ಸ್ತಿತಿಗೆ ಬಂದಿದೆ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...