Homeಕರ್ನಾಟಕ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

- Advertisement -
- Advertisement -

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಬಿಜೆಪಿ ಜಾಹೀರಾತು ನೀಡಿದೆ.

ರಾಜಕೀಯ ಸೌಜನ್ಯವನ್ನು ಮೀರಿ ಅತಿರೇಕದ ಜಾಹೀರಾತನ್ನು ನೀಡಿರುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ಪತ್ರಕರ್ತರಾದ ಸತನ್‌ ಕುಮಾರ್‌ ಬೆಳಗಲಿಯವರು, “ರಾಹುಲ್‌ ಗಾಂಧಿಯವರ ಭಾರತ ಜೋಡಿಸುವ ಯಾತ್ರೆಯಿಂದ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದಕ್ಕೆ ಈ ಜಾಹೀರಾತು ಉದಾಹರಣೆ. ಸ್ವಾತಂತ್ರ್ಯ ಹೋರಾಟದ ನೇತಾರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ತೇಜೋವಧೆಗೆ ಈ ನಿರ್ಲಜ್ಜ ಕೋಮುವಾದಿ ಪಕ್ಷ ಮುಂದಾಗಿದೆ” ಎಂದು ಟೀಕಿಸಿದ್ದಾರೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತ ಪ್ರಾಧ್ಯಾಪಕರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ʼಸಂಸ್ಕೃತಿ ರಕ್ಷಕʼರೆಂದು ತಾವೇ ಘೋಷಿಸಿಕೊಂಡವರ ಅಸಂಸ್ಕೃತ ಭಾಷೆ ಗಮನಿಸಿ. ಇದನ್ನು ಬರೆದವನು ಮೊದಲು ವಿದ್ಯಾಧಿದೇವತೆಯಾದ ಸರಸ್ವತಿಯನ್ನು ಪೂಜಿಸಿ (ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣೀ, ವಿದ್ಯಾರಂಭಂ ಕರಿಷ್ಯಾಮೀ ಸಿದ್ದಿರ್ಭವತು ಮೇ ಸದಾ) ಶಾಲೆಗೆ ಸೇರಬೇಕು. ವಯಸ್ಕರ ಶಿಕ್ಷಣಕ್ಕೂ ಆದೀತು. ಅಂದ ಹಾಗೆ ಕರ್ನಾಟಕದಲ್ಲಿ ಬಿಜೆಪಿಯ ಸ್ಥಿತಿ ಇಷ್ಟೊಂದು ಕರುಣಾಜನಕವಾಗಿದೆಯೇ? ಜಾಹೀರಾತು ನೋಡಿದರೆ 40-50 ಸೀಟು ಕೂಡಾ ಗ್ಯಾರಂಟಿ ಇದ್ದಂಗಿಲ್ಲ” ಎಂದಿದ್ದಾರೆ.

ಕೊಪ್ಪಳದ ನಿವಾಸಿ ಚಾಮರಾಜ ಸವಡಿ ಪ್ರತಿಕ್ರಿಯಿಸಿ, “ಇಂದಿನ (1-10-2022) ಕನ್ನಡಪ್ರಭ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ ಈ ಜಾಹೀರಾತು ದ್ವೇಷ ರಾಜಕಾರಣದ ಪ್ರತೀಕ. ಪ್ರಜಾಸತ್ತಾತ್ಮಕ ವಿಧಾನದಲ್ಲಿ ತಮ್ಮ ಚಟುವಟಿಕೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ರಾಜಕೀಯ ಪಕ್ಷಗಳೂ ಅದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್‌ ಪಕ್ಷದ ಈ ಕಾರ್ಯಕ್ರಮಕ್ಕೆ ಬಿಜೆಪಿ ಸೈದ್ಧಾಂತಿಕವಾಗಿ ಪ್ರತಿಕ್ರಿಯಿಸಬಹುದಿತ್ತು. ಅದು ಬಿಟ್ಟು ಈ ರೀತಿಯ ದ್ವೇಷ ಪ್ರಚಾರ ನಡೆಸುವುದು ಬಿಜೆಪಿಗಷ್ಟೇ ಅಲ್ಲ, ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವ ಸಂಗತಿಯಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ತಾನು ತಳಮಳಗೊಂಡಿರುವುದನ್ನು ಬಿಜೆಪಿಯ ಈ ಜಾಹೀರಾತು ಬಿಂಬಿಸಿದೆ’’ ಎಂದು ತಿಳಿಸಿದ್ದಾರೆ.

ಚಿಂತಕ ಸುದರ್ಶನ್ ಜಯರಾಮು ಟ್ವೀಟ್ ಮಾಡಿ, “ಬಿಜೆಪಿ ಪಕ್ಷವೂ ಕೂಡ ಇದೀಗ #BharatJodoYatra ಗೆ ತನ್ನ ಬೆಂಬಲವನ್ನು ಕೊಡುತ್ತಿದೆ. ಈ ಮುಖಪುಟದ ಜಾಹೀರಾತು ಹಾಕಲು ಕನಿಷ್ಠ ಪಕ್ಷ 10 ಲಕ್ಷವಾದರೂ ಖರ್ಚಾಗುತ್ತದೆ” ಎಂದಿದ್ದಾರೆ. ಜೊತೆಗೆ ಗಾಂಧಿಯವರ ಮಾತನ್ನು ಉಲ್ಲೇಖಿಸಿದ್ದಾರೆ.

“ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂದು ಗಾಂಧೀಜಿ ಹೇಳಿದ್ದನ್ನು ಸ್ಮರಿಸಿದ್ದಾರೆ.

“ಕೇಂದ್ರ , ರಾಜ್ಯ ಎರಡರಲ್ಲೂ ಅಧಿಕಾರದಲ್ಲಿರುವ ಪಕ್ಷವೊಂದು ವಿರೋಧ ಪಕ್ಷದ ಜಾಥಾವೊಂದರ ವಿರುದ್ಧ‘ ಇಷ್ಟು ಕೊಳಕಾಗಿ ಪೂರ್ತಿ ಪುಟದ ಜಾಹೀರಾತು ನೀಡಬೇಕಾದರೆ ಅದು ಯಾವ ಮಟ್ಟಿನ ಹತಾಶ ಸ್ಥಿತಿ ತಲುಪಿರಬೇಕು? ಕರ್ನಾಟಕದ ಮಟ್ಟಿಗೆ ಬಿಜೆಪಿ ಸೋಲನ್ನು ಈಗಾಗಲೇ ಅರ್ಧ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಾಣುತ್ತಿದೆ” ಎಂದು ರಾಧಾ ಅವಿನಾಶ್ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನಡೆ ಸಾದಿಸುತ್ತಿರುವುದರಿಂದ, ಮನುವಾದಿಗಳು ಕಂಗೆಟ್ಟಿದ್ದಾರೆ. ಅದಕ್ಕೆ ಇಂತಹ ನೀಚತನದ ಜಾಹೀರಾತು ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕಾದ್ರಿ ಶಾಮಣ್ಣನಂತವರು ಸಂಪಾದಕರಾಗಿದ್ದ ಕನ್ನಡ ಪ್ರಬ, ಇಂದು ಇಂತಹ ಹೀನಾಯ ಸ್ತಿತಿಗೆ ಬಂದಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...