Homeಕರ್ನಾಟಕ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

- Advertisement -
- Advertisement -

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಬಿಜೆಪಿ ಜಾಹೀರಾತು ನೀಡಿದೆ.

ರಾಜಕೀಯ ಸೌಜನ್ಯವನ್ನು ಮೀರಿ ಅತಿರೇಕದ ಜಾಹೀರಾತನ್ನು ನೀಡಿರುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ಪತ್ರಕರ್ತರಾದ ಸತನ್‌ ಕುಮಾರ್‌ ಬೆಳಗಲಿಯವರು, “ರಾಹುಲ್‌ ಗಾಂಧಿಯವರ ಭಾರತ ಜೋಡಿಸುವ ಯಾತ್ರೆಯಿಂದ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದಕ್ಕೆ ಈ ಜಾಹೀರಾತು ಉದಾಹರಣೆ. ಸ್ವಾತಂತ್ರ್ಯ ಹೋರಾಟದ ನೇತಾರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ತೇಜೋವಧೆಗೆ ಈ ನಿರ್ಲಜ್ಜ ಕೋಮುವಾದಿ ಪಕ್ಷ ಮುಂದಾಗಿದೆ” ಎಂದು ಟೀಕಿಸಿದ್ದಾರೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತ ಪ್ರಾಧ್ಯಾಪಕರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ʼಸಂಸ್ಕೃತಿ ರಕ್ಷಕʼರೆಂದು ತಾವೇ ಘೋಷಿಸಿಕೊಂಡವರ ಅಸಂಸ್ಕೃತ ಭಾಷೆ ಗಮನಿಸಿ. ಇದನ್ನು ಬರೆದವನು ಮೊದಲು ವಿದ್ಯಾಧಿದೇವತೆಯಾದ ಸರಸ್ವತಿಯನ್ನು ಪೂಜಿಸಿ (ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣೀ, ವಿದ್ಯಾರಂಭಂ ಕರಿಷ್ಯಾಮೀ ಸಿದ್ದಿರ್ಭವತು ಮೇ ಸದಾ) ಶಾಲೆಗೆ ಸೇರಬೇಕು. ವಯಸ್ಕರ ಶಿಕ್ಷಣಕ್ಕೂ ಆದೀತು. ಅಂದ ಹಾಗೆ ಕರ್ನಾಟಕದಲ್ಲಿ ಬಿಜೆಪಿಯ ಸ್ಥಿತಿ ಇಷ್ಟೊಂದು ಕರುಣಾಜನಕವಾಗಿದೆಯೇ? ಜಾಹೀರಾತು ನೋಡಿದರೆ 40-50 ಸೀಟು ಕೂಡಾ ಗ್ಯಾರಂಟಿ ಇದ್ದಂಗಿಲ್ಲ” ಎಂದಿದ್ದಾರೆ.

ಕೊಪ್ಪಳದ ನಿವಾಸಿ ಚಾಮರಾಜ ಸವಡಿ ಪ್ರತಿಕ್ರಿಯಿಸಿ, “ಇಂದಿನ (1-10-2022) ಕನ್ನಡಪ್ರಭ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ ಈ ಜಾಹೀರಾತು ದ್ವೇಷ ರಾಜಕಾರಣದ ಪ್ರತೀಕ. ಪ್ರಜಾಸತ್ತಾತ್ಮಕ ವಿಧಾನದಲ್ಲಿ ತಮ್ಮ ಚಟುವಟಿಕೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ರಾಜಕೀಯ ಪಕ್ಷಗಳೂ ಅದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್‌ ಪಕ್ಷದ ಈ ಕಾರ್ಯಕ್ರಮಕ್ಕೆ ಬಿಜೆಪಿ ಸೈದ್ಧಾಂತಿಕವಾಗಿ ಪ್ರತಿಕ್ರಿಯಿಸಬಹುದಿತ್ತು. ಅದು ಬಿಟ್ಟು ಈ ರೀತಿಯ ದ್ವೇಷ ಪ್ರಚಾರ ನಡೆಸುವುದು ಬಿಜೆಪಿಗಷ್ಟೇ ಅಲ್ಲ, ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವ ಸಂಗತಿಯಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ತಾನು ತಳಮಳಗೊಂಡಿರುವುದನ್ನು ಬಿಜೆಪಿಯ ಈ ಜಾಹೀರಾತು ಬಿಂಬಿಸಿದೆ’’ ಎಂದು ತಿಳಿಸಿದ್ದಾರೆ.

ಚಿಂತಕ ಸುದರ್ಶನ್ ಜಯರಾಮು ಟ್ವೀಟ್ ಮಾಡಿ, “ಬಿಜೆಪಿ ಪಕ್ಷವೂ ಕೂಡ ಇದೀಗ #BharatJodoYatra ಗೆ ತನ್ನ ಬೆಂಬಲವನ್ನು ಕೊಡುತ್ತಿದೆ. ಈ ಮುಖಪುಟದ ಜಾಹೀರಾತು ಹಾಕಲು ಕನಿಷ್ಠ ಪಕ್ಷ 10 ಲಕ್ಷವಾದರೂ ಖರ್ಚಾಗುತ್ತದೆ” ಎಂದಿದ್ದಾರೆ. ಜೊತೆಗೆ ಗಾಂಧಿಯವರ ಮಾತನ್ನು ಉಲ್ಲೇಖಿಸಿದ್ದಾರೆ.

“ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂದು ಗಾಂಧೀಜಿ ಹೇಳಿದ್ದನ್ನು ಸ್ಮರಿಸಿದ್ದಾರೆ.

“ಕೇಂದ್ರ , ರಾಜ್ಯ ಎರಡರಲ್ಲೂ ಅಧಿಕಾರದಲ್ಲಿರುವ ಪಕ್ಷವೊಂದು ವಿರೋಧ ಪಕ್ಷದ ಜಾಥಾವೊಂದರ ವಿರುದ್ಧ‘ ಇಷ್ಟು ಕೊಳಕಾಗಿ ಪೂರ್ತಿ ಪುಟದ ಜಾಹೀರಾತು ನೀಡಬೇಕಾದರೆ ಅದು ಯಾವ ಮಟ್ಟಿನ ಹತಾಶ ಸ್ಥಿತಿ ತಲುಪಿರಬೇಕು? ಕರ್ನಾಟಕದ ಮಟ್ಟಿಗೆ ಬಿಜೆಪಿ ಸೋಲನ್ನು ಈಗಾಗಲೇ ಅರ್ಧ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಾಣುತ್ತಿದೆ” ಎಂದು ರಾಧಾ ಅವಿನಾಶ್ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನಡೆ ಸಾದಿಸುತ್ತಿರುವುದರಿಂದ, ಮನುವಾದಿಗಳು ಕಂಗೆಟ್ಟಿದ್ದಾರೆ. ಅದಕ್ಕೆ ಇಂತಹ ನೀಚತನದ ಜಾಹೀರಾತು ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕಾದ್ರಿ ಶಾಮಣ್ಣನಂತವರು ಸಂಪಾದಕರಾಗಿದ್ದ ಕನ್ನಡ ಪ್ರಬ, ಇಂದು ಇಂತಹ ಹೀನಾಯ ಸ್ತಿತಿಗೆ ಬಂದಿದೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...