Homeಕರ್ನಾಟಕ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

- Advertisement -
- Advertisement -

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಬಿಜೆಪಿ ಜಾಹೀರಾತು ನೀಡಿದೆ.

ರಾಜಕೀಯ ಸೌಜನ್ಯವನ್ನು ಮೀರಿ ಅತಿರೇಕದ ಜಾಹೀರಾತನ್ನು ನೀಡಿರುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ಪತ್ರಕರ್ತರಾದ ಸತನ್‌ ಕುಮಾರ್‌ ಬೆಳಗಲಿಯವರು, “ರಾಹುಲ್‌ ಗಾಂಧಿಯವರ ಭಾರತ ಜೋಡಿಸುವ ಯಾತ್ರೆಯಿಂದ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದಕ್ಕೆ ಈ ಜಾಹೀರಾತು ಉದಾಹರಣೆ. ಸ್ವಾತಂತ್ರ್ಯ ಹೋರಾಟದ ನೇತಾರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ತೇಜೋವಧೆಗೆ ಈ ನಿರ್ಲಜ್ಜ ಕೋಮುವಾದಿ ಪಕ್ಷ ಮುಂದಾಗಿದೆ” ಎಂದು ಟೀಕಿಸಿದ್ದಾರೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತ ಪ್ರಾಧ್ಯಾಪಕರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ʼಸಂಸ್ಕೃತಿ ರಕ್ಷಕʼರೆಂದು ತಾವೇ ಘೋಷಿಸಿಕೊಂಡವರ ಅಸಂಸ್ಕೃತ ಭಾಷೆ ಗಮನಿಸಿ. ಇದನ್ನು ಬರೆದವನು ಮೊದಲು ವಿದ್ಯಾಧಿದೇವತೆಯಾದ ಸರಸ್ವತಿಯನ್ನು ಪೂಜಿಸಿ (ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣೀ, ವಿದ್ಯಾರಂಭಂ ಕರಿಷ್ಯಾಮೀ ಸಿದ್ದಿರ್ಭವತು ಮೇ ಸದಾ) ಶಾಲೆಗೆ ಸೇರಬೇಕು. ವಯಸ್ಕರ ಶಿಕ್ಷಣಕ್ಕೂ ಆದೀತು. ಅಂದ ಹಾಗೆ ಕರ್ನಾಟಕದಲ್ಲಿ ಬಿಜೆಪಿಯ ಸ್ಥಿತಿ ಇಷ್ಟೊಂದು ಕರುಣಾಜನಕವಾಗಿದೆಯೇ? ಜಾಹೀರಾತು ನೋಡಿದರೆ 40-50 ಸೀಟು ಕೂಡಾ ಗ್ಯಾರಂಟಿ ಇದ್ದಂಗಿಲ್ಲ” ಎಂದಿದ್ದಾರೆ.

ಕೊಪ್ಪಳದ ನಿವಾಸಿ ಚಾಮರಾಜ ಸವಡಿ ಪ್ರತಿಕ್ರಿಯಿಸಿ, “ಇಂದಿನ (1-10-2022) ಕನ್ನಡಪ್ರಭ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ ಈ ಜಾಹೀರಾತು ದ್ವೇಷ ರಾಜಕಾರಣದ ಪ್ರತೀಕ. ಪ್ರಜಾಸತ್ತಾತ್ಮಕ ವಿಧಾನದಲ್ಲಿ ತಮ್ಮ ಚಟುವಟಿಕೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ರಾಜಕೀಯ ಪಕ್ಷಗಳೂ ಅದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್‌ ಪಕ್ಷದ ಈ ಕಾರ್ಯಕ್ರಮಕ್ಕೆ ಬಿಜೆಪಿ ಸೈದ್ಧಾಂತಿಕವಾಗಿ ಪ್ರತಿಕ್ರಿಯಿಸಬಹುದಿತ್ತು. ಅದು ಬಿಟ್ಟು ಈ ರೀತಿಯ ದ್ವೇಷ ಪ್ರಚಾರ ನಡೆಸುವುದು ಬಿಜೆಪಿಗಷ್ಟೇ ಅಲ್ಲ, ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವ ಸಂಗತಿಯಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ತಾನು ತಳಮಳಗೊಂಡಿರುವುದನ್ನು ಬಿಜೆಪಿಯ ಈ ಜಾಹೀರಾತು ಬಿಂಬಿಸಿದೆ’’ ಎಂದು ತಿಳಿಸಿದ್ದಾರೆ.

ಚಿಂತಕ ಸುದರ್ಶನ್ ಜಯರಾಮು ಟ್ವೀಟ್ ಮಾಡಿ, “ಬಿಜೆಪಿ ಪಕ್ಷವೂ ಕೂಡ ಇದೀಗ #BharatJodoYatra ಗೆ ತನ್ನ ಬೆಂಬಲವನ್ನು ಕೊಡುತ್ತಿದೆ. ಈ ಮುಖಪುಟದ ಜಾಹೀರಾತು ಹಾಕಲು ಕನಿಷ್ಠ ಪಕ್ಷ 10 ಲಕ್ಷವಾದರೂ ಖರ್ಚಾಗುತ್ತದೆ” ಎಂದಿದ್ದಾರೆ. ಜೊತೆಗೆ ಗಾಂಧಿಯವರ ಮಾತನ್ನು ಉಲ್ಲೇಖಿಸಿದ್ದಾರೆ.

“ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂದು ಗಾಂಧೀಜಿ ಹೇಳಿದ್ದನ್ನು ಸ್ಮರಿಸಿದ್ದಾರೆ.

“ಕೇಂದ್ರ , ರಾಜ್ಯ ಎರಡರಲ್ಲೂ ಅಧಿಕಾರದಲ್ಲಿರುವ ಪಕ್ಷವೊಂದು ವಿರೋಧ ಪಕ್ಷದ ಜಾಥಾವೊಂದರ ವಿರುದ್ಧ‘ ಇಷ್ಟು ಕೊಳಕಾಗಿ ಪೂರ್ತಿ ಪುಟದ ಜಾಹೀರಾತು ನೀಡಬೇಕಾದರೆ ಅದು ಯಾವ ಮಟ್ಟಿನ ಹತಾಶ ಸ್ಥಿತಿ ತಲುಪಿರಬೇಕು? ಕರ್ನಾಟಕದ ಮಟ್ಟಿಗೆ ಬಿಜೆಪಿ ಸೋಲನ್ನು ಈಗಾಗಲೇ ಅರ್ಧ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಾಣುತ್ತಿದೆ” ಎಂದು ರಾಧಾ ಅವಿನಾಶ್ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನಡೆ ಸಾದಿಸುತ್ತಿರುವುದರಿಂದ, ಮನುವಾದಿಗಳು ಕಂಗೆಟ್ಟಿದ್ದಾರೆ. ಅದಕ್ಕೆ ಇಂತಹ ನೀಚತನದ ಜಾಹೀರಾತು ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕಾದ್ರಿ ಶಾಮಣ್ಣನಂತವರು ಸಂಪಾದಕರಾಗಿದ್ದ ಕನ್ನಡ ಪ್ರಬ, ಇಂದು ಇಂತಹ ಹೀನಾಯ ಸ್ತಿತಿಗೆ ಬಂದಿದೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...