Homeಕರ್ನಾಟಕ‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

- Advertisement -
- Advertisement -

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

‘ಭಾರತ ವಿಭಜನೆತೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ದೇಶ ವಿಭಜನೆಯ ಪರಂಪರೆಯಲ್ಲಿ ಬಂದವರಿಂದ ದೇಶ ಒಡೆಯುವವರನ್ನು ಬೆಂಬಲಿಸಿದವರಿಂದ ಭಾರತದ ಐಕ್ಯತೆ ಸಾಧ್ಯವೆ? ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ಬಿಜೆಪಿ ಜಾಹೀರಾತು ನೀಡಿದೆ.

ರಾಜಕೀಯ ಸೌಜನ್ಯವನ್ನು ಮೀರಿ ಅತಿರೇಕದ ಜಾಹೀರಾತನ್ನು ನೀಡಿರುವುದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜಯರಾಮ್ ರಮೇಶ್‌, “#BharatJodoYatra ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ. ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು” ಎಂದು ಸ್ಪಷ್ಟಪಡಿಸಿದ್ದಾರೆ.

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹಿರಿಯ ಪತ್ರಕರ್ತರಾದ ಸತನ್‌ ಕುಮಾರ್‌ ಬೆಳಗಲಿಯವರು, “ರಾಹುಲ್‌ ಗಾಂಧಿಯವರ ಭಾರತ ಜೋಡಿಸುವ ಯಾತ್ರೆಯಿಂದ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದಕ್ಕೆ ಈ ಜಾಹೀರಾತು ಉದಾಹರಣೆ. ಸ್ವಾತಂತ್ರ್ಯ ಹೋರಾಟದ ನೇತಾರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ತೇಜೋವಧೆಗೆ ಈ ನಿರ್ಲಜ್ಜ ಕೋಮುವಾದಿ ಪಕ್ಷ ಮುಂದಾಗಿದೆ” ಎಂದು ಟೀಕಿಸಿದ್ದಾರೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತ ಪ್ರಾಧ್ಯಾಪಕರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಕ್ರಿಯಿಸಿ, “ʼಸಂಸ್ಕೃತಿ ರಕ್ಷಕʼರೆಂದು ತಾವೇ ಘೋಷಿಸಿಕೊಂಡವರ ಅಸಂಸ್ಕೃತ ಭಾಷೆ ಗಮನಿಸಿ. ಇದನ್ನು ಬರೆದವನು ಮೊದಲು ವಿದ್ಯಾಧಿದೇವತೆಯಾದ ಸರಸ್ವತಿಯನ್ನು ಪೂಜಿಸಿ (ಸರಸ್ವತೀ ನಮಸ್ತುಭ್ಯಂ ವರದೇ ಕಾಮರೂಪಿಣೀ, ವಿದ್ಯಾರಂಭಂ ಕರಿಷ್ಯಾಮೀ ಸಿದ್ದಿರ್ಭವತು ಮೇ ಸದಾ) ಶಾಲೆಗೆ ಸೇರಬೇಕು. ವಯಸ್ಕರ ಶಿಕ್ಷಣಕ್ಕೂ ಆದೀತು. ಅಂದ ಹಾಗೆ ಕರ್ನಾಟಕದಲ್ಲಿ ಬಿಜೆಪಿಯ ಸ್ಥಿತಿ ಇಷ್ಟೊಂದು ಕರುಣಾಜನಕವಾಗಿದೆಯೇ? ಜಾಹೀರಾತು ನೋಡಿದರೆ 40-50 ಸೀಟು ಕೂಡಾ ಗ್ಯಾರಂಟಿ ಇದ್ದಂಗಿಲ್ಲ” ಎಂದಿದ್ದಾರೆ.

ಕೊಪ್ಪಳದ ನಿವಾಸಿ ಚಾಮರಾಜ ಸವಡಿ ಪ್ರತಿಕ್ರಿಯಿಸಿ, “ಇಂದಿನ (1-10-2022) ಕನ್ನಡಪ್ರಭ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ ಈ ಜಾಹೀರಾತು ದ್ವೇಷ ರಾಜಕಾರಣದ ಪ್ರತೀಕ. ಪ್ರಜಾಸತ್ತಾತ್ಮಕ ವಿಧಾನದಲ್ಲಿ ತಮ್ಮ ಚಟುವಟಿಕೆ ನಡೆಸುವ ಹಕ್ಕು ದೇಶದ ಪ್ರತಿಯೊಬ್ಬರಿಗೂ ಇದೆ. ರಾಜಕೀಯ ಪಕ್ಷಗಳೂ ಅದಕ್ಕೆ ಹೊರತಾಗಿಲ್ಲ. ಕಾಂಗ್ರೆಸ್‌ ಪಕ್ಷದ ಈ ಕಾರ್ಯಕ್ರಮಕ್ಕೆ ಬಿಜೆಪಿ ಸೈದ್ಧಾಂತಿಕವಾಗಿ ಪ್ರತಿಕ್ರಿಯಿಸಬಹುದಿತ್ತು. ಅದು ಬಿಟ್ಟು ಈ ರೀತಿಯ ದ್ವೇಷ ಪ್ರಚಾರ ನಡೆಸುವುದು ಬಿಜೆಪಿಗಷ್ಟೇ ಅಲ್ಲ, ಯಾವ ರಾಜಕೀಯ ಪಕ್ಷಕ್ಕೂ ಶೋಭೆ ತರುವ ಸಂಗತಿಯಲ್ಲ. ಭಾರತ್‌ ಜೋಡೋ ಯಾತ್ರೆಯಿಂದ ತಾನು ತಳಮಳಗೊಂಡಿರುವುದನ್ನು ಬಿಜೆಪಿಯ ಈ ಜಾಹೀರಾತು ಬಿಂಬಿಸಿದೆ’’ ಎಂದು ತಿಳಿಸಿದ್ದಾರೆ.

ಚಿಂತಕ ಸುದರ್ಶನ್ ಜಯರಾಮು ಟ್ವೀಟ್ ಮಾಡಿ, “ಬಿಜೆಪಿ ಪಕ್ಷವೂ ಕೂಡ ಇದೀಗ #BharatJodoYatra ಗೆ ತನ್ನ ಬೆಂಬಲವನ್ನು ಕೊಡುತ್ತಿದೆ. ಈ ಮುಖಪುಟದ ಜಾಹೀರಾತು ಹಾಕಲು ಕನಿಷ್ಠ ಪಕ್ಷ 10 ಲಕ್ಷವಾದರೂ ಖರ್ಚಾಗುತ್ತದೆ” ಎಂದಿದ್ದಾರೆ. ಜೊತೆಗೆ ಗಾಂಧಿಯವರ ಮಾತನ್ನು ಉಲ್ಲೇಖಿಸಿದ್ದಾರೆ.

“ಮೊದಲು ಅವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ನಂತರ ಅವರು ನಿಮ್ಮನ್ನು ನೋಡಿ ನಗುತ್ತಾರೆ, ನಂತರ ಅವರು ನಿಮ್ಮೊಂದಿಗೆ ಹೋರಾಡುತ್ತಾರೆ, ನಂತರ ನೀವು ಗೆಲ್ಲುತ್ತೀರಿ” ಎಂದು ಗಾಂಧೀಜಿ ಹೇಳಿದ್ದನ್ನು ಸ್ಮರಿಸಿದ್ದಾರೆ.

“ಕೇಂದ್ರ , ರಾಜ್ಯ ಎರಡರಲ್ಲೂ ಅಧಿಕಾರದಲ್ಲಿರುವ ಪಕ್ಷವೊಂದು ವಿರೋಧ ಪಕ್ಷದ ಜಾಥಾವೊಂದರ ವಿರುದ್ಧ‘ ಇಷ್ಟು ಕೊಳಕಾಗಿ ಪೂರ್ತಿ ಪುಟದ ಜಾಹೀರಾತು ನೀಡಬೇಕಾದರೆ ಅದು ಯಾವ ಮಟ್ಟಿನ ಹತಾಶ ಸ್ಥಿತಿ ತಲುಪಿರಬೇಕು? ಕರ್ನಾಟಕದ ಮಟ್ಟಿಗೆ ಬಿಜೆಪಿ ಸೋಲನ್ನು ಈಗಾಗಲೇ ಅರ್ಧ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಾಣುತ್ತಿದೆ” ಎಂದು ರಾಧಾ ಅವಿನಾಶ್ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನಡೆ ಸಾದಿಸುತ್ತಿರುವುದರಿಂದ, ಮನುವಾದಿಗಳು ಕಂಗೆಟ್ಟಿದ್ದಾರೆ. ಅದಕ್ಕೆ ಇಂತಹ ನೀಚತನದ ಜಾಹೀರಾತು ಕೊಟ್ಟಿದ್ದಾರೆ. ಒಂದು ಕಾಲದಲ್ಲಿ ಕಾದ್ರಿ ಶಾಮಣ್ಣನಂತವರು ಸಂಪಾದಕರಾಗಿದ್ದ ಕನ್ನಡ ಪ್ರಬ, ಇಂದು ಇಂತಹ ಹೀನಾಯ ಸ್ತಿತಿಗೆ ಬಂದಿದೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...