Homeಕರ್ನಾಟಕಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು 10 ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?

- Advertisement -
- Advertisement -

ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್‌‌
ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ವಿರುದ್ಧ ಅನಗತ್ಯವಾದ ಆರೋಪಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ” ಎಂದು ದೂರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ತಿರುಗೇಟು ನೀಡಿದ್ದಾರೆ.

“ನಳಿನ್ ಕುಮಾರ್ ಕಟೀಲ್ ಅವರೇ, 2013-18 ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

“2013-18 ರ ಅವಧಿಯಲ್ಲಿ ಕೋಮುಸಂಘರ್ಷಕ್ಕೆ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ಬಿಜೆಪಿಯವರು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ನಳಿನ್ ಕುಮಾರ್ ಅವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ? ಎಂದು ಆಗ್ರಹಿಸಿದ್ದಾರೆ.

ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಎಂದು ಕೇಳಿದ್ದಾರೆ.

ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ? ಎಂದು ಪ್ರಶ್ನೆಗಳ ಸುರಿಮಳೆ ಹಾಕಿದ್ದಾರೆ.


ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...