Homeಕರ್ನಾಟಕಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು 10 ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?

- Advertisement -
- Advertisement -

ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್‌‌
ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ವಿರುದ್ಧ ಅನಗತ್ಯವಾದ ಆರೋಪಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ” ಎಂದು ದೂರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ತಿರುಗೇಟು ನೀಡಿದ್ದಾರೆ.

“ನಳಿನ್ ಕುಮಾರ್ ಕಟೀಲ್ ಅವರೇ, 2013-18 ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

“2013-18 ರ ಅವಧಿಯಲ್ಲಿ ಕೋಮುಸಂಘರ್ಷಕ್ಕೆ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ಬಿಜೆಪಿಯವರು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ನಳಿನ್ ಕುಮಾರ್ ಅವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ? ಎಂದು ಆಗ್ರಹಿಸಿದ್ದಾರೆ.

ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಎಂದು ಕೇಳಿದ್ದಾರೆ.

ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ? ಎಂದು ಪ್ರಶ್ನೆಗಳ ಸುರಿಮಳೆ ಹಾಕಿದ್ದಾರೆ.


ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...