Homeಕರ್ನಾಟಕಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು 10 ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?

- Advertisement -
- Advertisement -

ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್‌‌
ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

“ಬಿಜೆಪಿ ವಿರುದ್ಧ ಅನಗತ್ಯವಾದ ಆರೋಪಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ” ಎಂದು ದೂರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ತಿರುಗೇಟು ನೀಡಿದ್ದಾರೆ.

“ನಳಿನ್ ಕುಮಾರ್ ಕಟೀಲ್ ಅವರೇ, 2013-18 ರ ಅವಧಿಯಲ್ಲಿ 24 ಹಿಂದುಗಳ ಹತ್ಯೆಯಾಗಿದೆ ಎಂದು ಹೇಳಿದ್ದೀರಿ. ಕೋಮುಸಂಘರ್ಷದಲ್ಲಿ ಹತ್ಯೆಗೀಡಾದವರು 24 ಅಲ್ಲ, ಹಿಂದು-ಮುಸ್ಲಿಮ್ ಸೇರಿ ಒಟ್ಟು 45. ಈ ಪ್ರಕರಣಗಳನ್ನು ದಾಖಲೆ ಸಮೇತ ವಿವರಿಸಿ ನಮ್ಮ ಪಕ್ಷ ಪ್ರಕಟಿಸಿದ ಪುಸ್ತಕವನ್ನು ಓದಿ ನಿಮ್ಮ ಮನಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

“2013-18 ರ ಅವಧಿಯಲ್ಲಿ ಕೋಮುಸಂಘರ್ಷಕ್ಕೆ ಹತ್ಯೆಗೀಡಾಗಿದ್ದ 10 ಹಿಂದುಗಳ ಹತ್ಯೆಯ ಆರೋಪಿಗಳು ಎಸ್‌ಡಿಪಿಐ, ಪಿಎಫ್ಐ ಸಂಘಟನೆಯವರಾದರೆ, 11 ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಯವರು. ಈಗ ಹೇಳಿ ಯಾವುದನ್ನು ನಿಷೇಧಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ಬಿಜೆಪಿಯವರು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ನಳಿನ್ ಕುಮಾರ್ ಅವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದು ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ? ಎಂದು ಆಗ್ರಹಿಸಿದ್ದಾರೆ.

ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಎಂದು ಕೇಳಿದ್ದಾರೆ.

ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯ ಕೊಡಿಸುತ್ತೀರಿ? ಎಂದು ಪ್ರಶ್ನೆಗಳ ಸುರಿಮಳೆ ಹಾಕಿದ್ದಾರೆ.


ಓದಿ: ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...