Homeನಿಜವೋ ಸುಳ್ಳೋಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

ಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

- Advertisement -
- Advertisement -

ಬಿಜೆಪಿಯ ಪ್ರಣಾಳಿಕೆಯಲ್ಲಿ ಹೊಸದೇನೂ ಇಲ್ಲ, ಅದು 2014ರ ಮುಂದುವರಿಕೆಯಾಗಿ ಕಾಣುತ್ತದೆ ಇತ್ಯಾದಿ ಮಾತುಗಳನ್ನು ಹಲವರು ಆಡುತ್ತಿದ್ದಾರೆ. ಇದು ಸಂಪೂರ್ಣ ನಿಜವಲ್ಲ. 2014ರ ಪ್ರಣಾಳಿಕೆಯನ್ನು ಬೆಲೆ ಏರಿಕೆ, ಅಭಿವೃದ್ಧಿ, ಭ್ರಷ್ಟಾಚಾರ ನಿಯಂತ್ರಣ ಇತ್ಯಾದಿಗಳ ಮುಖಾಂತರ ಶುರು ಮಾಡಲಾಗಿದ್ದರೆ, 2019ರಲ್ಲಿ ಅವಕ್ಕೆಲ್ಲಾ ಕಡೆಯ ಆದ್ಯತೆ. ಆಗ ಭಾವನಾತ್ಮಕ ವಿಚಾರಗಳಿಗೆ ಕಡೆಯ ಸ್ಥಾನ ಕಲ್ಪಿಸಿದ್ದರೆ, ಈ ಸಾರಿ ಪ್ರಣಾಳಿಕೆ ಶುರುವಾಗುವುದೇ ಅವುಗಳಿಂದ. ಅಂದರೆ, ತಾವು ಅಭಿವೃದ್ಧಿ ಸಾಧಿಸಲಾಗಲಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಆದರೆ, ಈ ಪ್ರಣಾಳಿಕೆಯಲ್ಲಿ ಎರಡು ಹಾಸ್ಯಾಸ್ಪದ ಸಂಗತಿಗಳು ಇವೆ.

ಅವೆಂದರೆ, ಭಾರತವನ್ನು ಪ್ರಪಂಚದ 3ನೇ ದೊಡ್ಡ ಆರ್ಥಿಕತೆ ಮಾಡುವ ನಿಟ್ಟಿನಲ್ಲಿ ಏನೇನು ಮಾಡುತ್ತೇವೆಂಬ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ 5ನೇ ಪಾಯಿಂಟ್, ಯೋಗವನ್ನು ಪ್ರಪಂಚದಾದ್ಯಂತ ಉತ್ತೇಜಿಸುವುದರ ಕುರಿತು ಹೇಳಲಾಗುತ್ತದೆ. ಅದರ ಮೂಲಕ ಭಾರತ 3ನೇ ದೊಡ್ಡ ಆರ್ಥಿಕತೆ ಮಾಡಲು ಹೇಗೆ ಸಾಧ್ಯ ಎಂಬುದನ್ನು, ಪ್ರಣಾಳಿಕೆ ಬಿಡುಗಡೆಯಾದ ನಂತರ ಅರುಣ್ ಜೇಟ್ಲಿಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನನ್ನೂ ಹೇಳಿಲ್ಲ. ಬಹುಶಃ ಅವರು ಚಕ್ರವರ್ತಿ ಸೂಲಿಬೆಲೆ, ಅರ್ಥತಜ್ಞ ಗುರುಮೂರ್ತಿ ಥರದವರಿಂದ ಇದನ್ನೂ ಹೇಗೆ ಸಮರ್ಥಿಸಿಕೊಳ್ಳಬಹುದೆಂದು ಕಲಿತುಕೊಂಡು ತಮ್ಮ ಬ್ಲಾಗ್‍ನಲ್ಲಿ ಬರೆಯಬಹುದು.

ಹಾಗೆಯೇ ಒಳ್ಳೆಯ ಆಡಳಿತದ 20ನೇ ಅಂಶದಲ್ಲಿ ಹೀಗೆ ಹೇಳಲಾಗುತ್ತದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಬೇಗ ಬೇಗನೇ ಮಂಜೂರಾತಿ ನೀಡುವಲ್ಲಿ ವೇಗವನ್ನು ಸಾಧಿಸಿದ್ದೇವೆ ಮತ್ತು ಅದರಿಂದ 9000 ಚ.ಕಿ.ಮೀಗಳಷ್ಟು ಅರಣ್ಯವನ್ನು ಹೆಚ್ಚಿಸಿದ್ದೇವೆ ಎನ್ನುತ್ತಾರೆ. ಯೋಜನೆಗಳಿಗೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಬೇಗ ಬೇಗನೇ ಮಂಜೂರಾತಿ ಕೊಟ್ಟರೆ ಅರಣ್ಯ ಬೇಗ ಬೇಗನೇ ಖಾಲಿಯಾಗುತ್ತದೆ. ಒಂದು ವೇಳೆ, ಅರಣ್ಯ ಕಡಿಯುವ ಯೋಜನೆಗಳಿಗೆ ಪರ್ಯಾಯವಾಗಿ ಅರಣ್ಯ ಬೆಳೆಸುವ ಯೋಜನೆಗಳಿಗೇ ಅನುಮತಿ ಕೊಟ್ಟಿದ್ದಾರೆಂದು ಭಾವಿಸೋಣ (ಇಲ್ಲದಿದ್ದರೆ ಅದನ್ನು ಗುರುಮೂರ್ತಿಗಳಂತಹ ತಜ್ಞರು ಹೇಳುವ ಅಪಾಯವಿದೆ). ಆಗಲೂ 3-5 ವರ್ಷಗಳಲ್ಲಿ 9,000 ಚ.ಕಿ.ಮೀ ‘ಅರಣ್ಯ’ ಬೆಳೆದುಬಿಡುತ್ತದಾ?

ಅಪಾಯ ನಂತರದ ವಾಕ್ಯದಲ್ಲಿದೆ. ನಾವು ಈ ವೇಗವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆಂದು ಹೇಳುತ್ತಾರೆ!

ಇದನ್ನು ಓದಿ: ಕೆಟ್ಟ ಪ್ರಣಾಳಿಕೆ ಕೊಟ್ಟ ಕೀರ್ತಿ ಬಿಜೆಪಿಯದು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...