Homeನಿಜವೋ ಸುಳ್ಳೋಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

ಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

- Advertisement -
- Advertisement -

ಬಿಜೆಪಿಯ ಪ್ರಣಾಳಿಕೆಯಲ್ಲಿ ಹೊಸದೇನೂ ಇಲ್ಲ, ಅದು 2014ರ ಮುಂದುವರಿಕೆಯಾಗಿ ಕಾಣುತ್ತದೆ ಇತ್ಯಾದಿ ಮಾತುಗಳನ್ನು ಹಲವರು ಆಡುತ್ತಿದ್ದಾರೆ. ಇದು ಸಂಪೂರ್ಣ ನಿಜವಲ್ಲ. 2014ರ ಪ್ರಣಾಳಿಕೆಯನ್ನು ಬೆಲೆ ಏರಿಕೆ, ಅಭಿವೃದ್ಧಿ, ಭ್ರಷ್ಟಾಚಾರ ನಿಯಂತ್ರಣ ಇತ್ಯಾದಿಗಳ ಮುಖಾಂತರ ಶುರು ಮಾಡಲಾಗಿದ್ದರೆ, 2019ರಲ್ಲಿ ಅವಕ್ಕೆಲ್ಲಾ ಕಡೆಯ ಆದ್ಯತೆ. ಆಗ ಭಾವನಾತ್ಮಕ ವಿಚಾರಗಳಿಗೆ ಕಡೆಯ ಸ್ಥಾನ ಕಲ್ಪಿಸಿದ್ದರೆ, ಈ ಸಾರಿ ಪ್ರಣಾಳಿಕೆ ಶುರುವಾಗುವುದೇ ಅವುಗಳಿಂದ. ಅಂದರೆ, ತಾವು ಅಭಿವೃದ್ಧಿ ಸಾಧಿಸಲಾಗಲಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಆದರೆ, ಈ ಪ್ರಣಾಳಿಕೆಯಲ್ಲಿ ಎರಡು ಹಾಸ್ಯಾಸ್ಪದ ಸಂಗತಿಗಳು ಇವೆ.

ಅವೆಂದರೆ, ಭಾರತವನ್ನು ಪ್ರಪಂಚದ 3ನೇ ದೊಡ್ಡ ಆರ್ಥಿಕತೆ ಮಾಡುವ ನಿಟ್ಟಿನಲ್ಲಿ ಏನೇನು ಮಾಡುತ್ತೇವೆಂಬ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ 5ನೇ ಪಾಯಿಂಟ್, ಯೋಗವನ್ನು ಪ್ರಪಂಚದಾದ್ಯಂತ ಉತ್ತೇಜಿಸುವುದರ ಕುರಿತು ಹೇಳಲಾಗುತ್ತದೆ. ಅದರ ಮೂಲಕ ಭಾರತ 3ನೇ ದೊಡ್ಡ ಆರ್ಥಿಕತೆ ಮಾಡಲು ಹೇಗೆ ಸಾಧ್ಯ ಎಂಬುದನ್ನು, ಪ್ರಣಾಳಿಕೆ ಬಿಡುಗಡೆಯಾದ ನಂತರ ಅರುಣ್ ಜೇಟ್ಲಿಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನನ್ನೂ ಹೇಳಿಲ್ಲ. ಬಹುಶಃ ಅವರು ಚಕ್ರವರ್ತಿ ಸೂಲಿಬೆಲೆ, ಅರ್ಥತಜ್ಞ ಗುರುಮೂರ್ತಿ ಥರದವರಿಂದ ಇದನ್ನೂ ಹೇಗೆ ಸಮರ್ಥಿಸಿಕೊಳ್ಳಬಹುದೆಂದು ಕಲಿತುಕೊಂಡು ತಮ್ಮ ಬ್ಲಾಗ್‍ನಲ್ಲಿ ಬರೆಯಬಹುದು.

ಹಾಗೆಯೇ ಒಳ್ಳೆಯ ಆಡಳಿತದ 20ನೇ ಅಂಶದಲ್ಲಿ ಹೀಗೆ ಹೇಳಲಾಗುತ್ತದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಬೇಗ ಬೇಗನೇ ಮಂಜೂರಾತಿ ನೀಡುವಲ್ಲಿ ವೇಗವನ್ನು ಸಾಧಿಸಿದ್ದೇವೆ ಮತ್ತು ಅದರಿಂದ 9000 ಚ.ಕಿ.ಮೀಗಳಷ್ಟು ಅರಣ್ಯವನ್ನು ಹೆಚ್ಚಿಸಿದ್ದೇವೆ ಎನ್ನುತ್ತಾರೆ. ಯೋಜನೆಗಳಿಗೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಬೇಗ ಬೇಗನೇ ಮಂಜೂರಾತಿ ಕೊಟ್ಟರೆ ಅರಣ್ಯ ಬೇಗ ಬೇಗನೇ ಖಾಲಿಯಾಗುತ್ತದೆ. ಒಂದು ವೇಳೆ, ಅರಣ್ಯ ಕಡಿಯುವ ಯೋಜನೆಗಳಿಗೆ ಪರ್ಯಾಯವಾಗಿ ಅರಣ್ಯ ಬೆಳೆಸುವ ಯೋಜನೆಗಳಿಗೇ ಅನುಮತಿ ಕೊಟ್ಟಿದ್ದಾರೆಂದು ಭಾವಿಸೋಣ (ಇಲ್ಲದಿದ್ದರೆ ಅದನ್ನು ಗುರುಮೂರ್ತಿಗಳಂತಹ ತಜ್ಞರು ಹೇಳುವ ಅಪಾಯವಿದೆ). ಆಗಲೂ 3-5 ವರ್ಷಗಳಲ್ಲಿ 9,000 ಚ.ಕಿ.ಮೀ ‘ಅರಣ್ಯ’ ಬೆಳೆದುಬಿಡುತ್ತದಾ?

ಅಪಾಯ ನಂತರದ ವಾಕ್ಯದಲ್ಲಿದೆ. ನಾವು ಈ ವೇಗವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆಂದು ಹೇಳುತ್ತಾರೆ!

ಇದನ್ನು ಓದಿ: ಕೆಟ್ಟ ಪ್ರಣಾಳಿಕೆ ಕೊಟ್ಟ ಕೀರ್ತಿ ಬಿಜೆಪಿಯದು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...