Homeನಿಜವೋ ಸುಳ್ಳೋಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

ಬಿಜೆಪಿ ಪ್ರಣಾಳಿಕೆಯ ಎರಡು ಹಾಸ್ಯಾಸ್ಪದ ಸಂಗತಿಗಳು

- Advertisement -
- Advertisement -

ಬಿಜೆಪಿಯ ಪ್ರಣಾಳಿಕೆಯಲ್ಲಿ ಹೊಸದೇನೂ ಇಲ್ಲ, ಅದು 2014ರ ಮುಂದುವರಿಕೆಯಾಗಿ ಕಾಣುತ್ತದೆ ಇತ್ಯಾದಿ ಮಾತುಗಳನ್ನು ಹಲವರು ಆಡುತ್ತಿದ್ದಾರೆ. ಇದು ಸಂಪೂರ್ಣ ನಿಜವಲ್ಲ. 2014ರ ಪ್ರಣಾಳಿಕೆಯನ್ನು ಬೆಲೆ ಏರಿಕೆ, ಅಭಿವೃದ್ಧಿ, ಭ್ರಷ್ಟಾಚಾರ ನಿಯಂತ್ರಣ ಇತ್ಯಾದಿಗಳ ಮುಖಾಂತರ ಶುರು ಮಾಡಲಾಗಿದ್ದರೆ, 2019ರಲ್ಲಿ ಅವಕ್ಕೆಲ್ಲಾ ಕಡೆಯ ಆದ್ಯತೆ. ಆಗ ಭಾವನಾತ್ಮಕ ವಿಚಾರಗಳಿಗೆ ಕಡೆಯ ಸ್ಥಾನ ಕಲ್ಪಿಸಿದ್ದರೆ, ಈ ಸಾರಿ ಪ್ರಣಾಳಿಕೆ ಶುರುವಾಗುವುದೇ ಅವುಗಳಿಂದ. ಅಂದರೆ, ತಾವು ಅಭಿವೃದ್ಧಿ ಸಾಧಿಸಲಾಗಲಿಲ್ಲ ಎಂದು ಬಿಜೆಪಿ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಆದರೆ, ಈ ಪ್ರಣಾಳಿಕೆಯಲ್ಲಿ ಎರಡು ಹಾಸ್ಯಾಸ್ಪದ ಸಂಗತಿಗಳು ಇವೆ.

ಅವೆಂದರೆ, ಭಾರತವನ್ನು ಪ್ರಪಂಚದ 3ನೇ ದೊಡ್ಡ ಆರ್ಥಿಕತೆ ಮಾಡುವ ನಿಟ್ಟಿನಲ್ಲಿ ಏನೇನು ಮಾಡುತ್ತೇವೆಂಬ ಪಟ್ಟಿಯನ್ನು ನೀಡಲಾಗಿದೆ. ಅದರಲ್ಲಿ 5ನೇ ಪಾಯಿಂಟ್, ಯೋಗವನ್ನು ಪ್ರಪಂಚದಾದ್ಯಂತ ಉತ್ತೇಜಿಸುವುದರ ಕುರಿತು ಹೇಳಲಾಗುತ್ತದೆ. ಅದರ ಮೂಲಕ ಭಾರತ 3ನೇ ದೊಡ್ಡ ಆರ್ಥಿಕತೆ ಮಾಡಲು ಹೇಗೆ ಸಾಧ್ಯ ಎಂಬುದನ್ನು, ಪ್ರಣಾಳಿಕೆ ಬಿಡುಗಡೆಯಾದ ನಂತರ ಅರುಣ್ ಜೇಟ್ಲಿಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಏನನ್ನೂ ಹೇಳಿಲ್ಲ. ಬಹುಶಃ ಅವರು ಚಕ್ರವರ್ತಿ ಸೂಲಿಬೆಲೆ, ಅರ್ಥತಜ್ಞ ಗುರುಮೂರ್ತಿ ಥರದವರಿಂದ ಇದನ್ನೂ ಹೇಗೆ ಸಮರ್ಥಿಸಿಕೊಳ್ಳಬಹುದೆಂದು ಕಲಿತುಕೊಂಡು ತಮ್ಮ ಬ್ಲಾಗ್‍ನಲ್ಲಿ ಬರೆಯಬಹುದು.

ಹಾಗೆಯೇ ಒಳ್ಳೆಯ ಆಡಳಿತದ 20ನೇ ಅಂಶದಲ್ಲಿ ಹೀಗೆ ಹೇಳಲಾಗುತ್ತದೆ. ಅರಣ್ಯ ಮತ್ತು ಪರಿಸರ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಬೇಗ ಬೇಗನೇ ಮಂಜೂರಾತಿ ನೀಡುವಲ್ಲಿ ವೇಗವನ್ನು ಸಾಧಿಸಿದ್ದೇವೆ ಮತ್ತು ಅದರಿಂದ 9000 ಚ.ಕಿ.ಮೀಗಳಷ್ಟು ಅರಣ್ಯವನ್ನು ಹೆಚ್ಚಿಸಿದ್ದೇವೆ ಎನ್ನುತ್ತಾರೆ. ಯೋಜನೆಗಳಿಗೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಬೇಗ ಬೇಗನೇ ಮಂಜೂರಾತಿ ಕೊಟ್ಟರೆ ಅರಣ್ಯ ಬೇಗ ಬೇಗನೇ ಖಾಲಿಯಾಗುತ್ತದೆ. ಒಂದು ವೇಳೆ, ಅರಣ್ಯ ಕಡಿಯುವ ಯೋಜನೆಗಳಿಗೆ ಪರ್ಯಾಯವಾಗಿ ಅರಣ್ಯ ಬೆಳೆಸುವ ಯೋಜನೆಗಳಿಗೇ ಅನುಮತಿ ಕೊಟ್ಟಿದ್ದಾರೆಂದು ಭಾವಿಸೋಣ (ಇಲ್ಲದಿದ್ದರೆ ಅದನ್ನು ಗುರುಮೂರ್ತಿಗಳಂತಹ ತಜ್ಞರು ಹೇಳುವ ಅಪಾಯವಿದೆ). ಆಗಲೂ 3-5 ವರ್ಷಗಳಲ್ಲಿ 9,000 ಚ.ಕಿ.ಮೀ ‘ಅರಣ್ಯ’ ಬೆಳೆದುಬಿಡುತ್ತದಾ?

ಅಪಾಯ ನಂತರದ ವಾಕ್ಯದಲ್ಲಿದೆ. ನಾವು ಈ ವೇಗವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆಂದು ಹೇಳುತ್ತಾರೆ!

ಇದನ್ನು ಓದಿ: ಕೆಟ್ಟ ಪ್ರಣಾಳಿಕೆ ಕೊಟ್ಟ ಕೀರ್ತಿ ಬಿಜೆಪಿಯದು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...