Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...