Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...