Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...