Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತಡೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...