Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...