Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...