Homeಮುಖಪುಟಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

ಬಿಜೆಪಿಯ ಪ್ರಣಾಳಿಕೆ ಎಂಬ ಬೂಟಾಟಿಕೆ : ಮತ್ತದೇ ಕೊಳಕು ಕೇಸರಿ ಮಾಲಿಕೆ!

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |
ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಾಕಷ್ಟು ಹಿಂದೇಟು ಹಾಕಿದ ಪಾರ್ಟಿಯೀಗ ಅದನ್ನು ಇವತ್ತು ಬಿಡುಗಡೆ ಮಾಡಿದೆ. ಅದರ ಮುಖಪುಟವೇ ಅದೆಷ್ಟು ಜನದ್ರೋಹಿ ಎಂದು ಸಾರುವಂತಿದೆ! ಕೇವಲ ಮೋದಿಯ ದೊಡ್ಡ ಭಾವಚಿತ್ರ ಹಾಕಿ ಈಗಾಗಲೇ ಜೋರಾಗಿರುವ ವ್ಯಕ್ತಿ ಪೂಜೆಗೆ ಮತ್ತಷ್ಟು ಪುಷ್ಠಿ ನೀಡಲು ಮುಂದಾಗಿದೆ.

ಇದನ್ನು ಬರೀ ಬೂಟಾಟಿಕೆ ಎಂದು ಕೈ ಬಿಡುವಂತಿಲ್ಲ. 2014ರಲ್ಲಿ ಕೊಟ್ಟ ಭರವಸೆ ಏನಾದವು ಎಂದು ಈ ಕೂಡಲೇ ಧ್ವನಿ ಎತ್ತುವ ಅಗತ್ಯವಿದೆ. ಎಲ್ಲ ಪ್ರಣಾಳಿಕೆಗಳು ಎಲ್ಲ ವರ್ಗ ಕವರ್ ಮಾಡುವಂತೆ ಇದರಲ್ಲೂ ಇದೆ. ಆದರೆ ಇದು ದೊಡ್ಡ ಬೂಟಾಟಿಕೆ ಎಂಬುದಕ್ಕೆ ಸಾಕ್ಷಿಯಾಗಿ ಬಿಜೆಪಿ 1991ರಿಂದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡುತ್ತಲೇ ಇರುವ ಅಸಾಧ್ಯ ಸಂಗತಿಗಳು ಮತ್ತೆ ಇಲ್ಲಿ ರಿಪೀಟ್ ಆಗಿವೆ..

ಭಾರತ ಸುರಕ್ಷಿತವಾಗಿದೆ ಎನ್ನುತ್ತಲೇ ಬೊಂಬಡಾ ಹೊಡೆಯುವ ಇವರೆಲ್ಲ, ಪ್ರಣಾಳಿಕೆಯಲ್ಲಿ ಆದ್ಯತೆ ಕೊಟ್ಟಿರುವುದು ಸೈನ್ಯವನ್ನು ಗಟ್ಟಿಗೊಳಿಸಲು ವಿದೇಶದಿಂದ ಜಾಸ್ತಿ ಸೈನಿಕ ಸಲಕರಣೆಗಳನ್ನು ಖರೀದಿಸಲು!
ಈಗ ಮತ್ತೆ ಕಾಶ್ಮೀರದ ವಿಷಯವನ್ನು 111ನೇ ಬಾರಿಗೆ ಪ್ರಸ್ತಾಪಿಸಿದ್ದಾರೆ. 370 ಕಲಂ ತೆಗೆಯಲು ರೆಡಿಯಂತೆ! ಇಷ್ಟು ದಿನ ಅಂದರೆ 5 ವರ್ಷ ಕಾಲ ಮುಚ್ಚಿಕೊಂಡು ಕೂತದ್ದೇಕೆ?

ರಾಮ ಮಂದಿರ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುತ್ತಾರಂತೆ! ಬಹುಷ: ಅವರ ಹಿಂದಿನೆಲ್ಲ ಪ್ರಣಾಳಿಕೆ ನೋಡಿದರೆ ಈ ಸಲ ಅವರು 9ನೇ ರಾಮಮಂದಿರ ನಿರ್ಮಿಸಲು ಹೊರಟಿದ್ದಾರೆ! ಇವೆಲ್ಲವನ್ನೂ ಸುಮ್ಮನೇ ನೆಗ್ಲೆಕ್ಟ್ ಮಾಡಲಾಗಲ್ಲ. ಏಕೆಂದರೆ ಇವೆಲ್ಲ ಚುನಾವಣಾ ಅಫೀಮುಗಳೇ ಆಗಿವೆಯಲ್ಲ?
‘ರಾಷ್ಟ್ರೀಯ ನಾಗರಿಕ ನೋಂದಣಿ’ (ಎನ್‍ಆರ್‍ಸಿ)ಯನ್ನು ದೇಶಾದ್ಯಂತ ವಿಸ್ತರಿಸುತ್ತಾರಂತೆ! ಈಗ ಈ ಎನ್‍ಆರಸಿ ಕಾರಣಕ್ಕಾಗಿಯೇ ಈಶಾನ್ಯ ಭಾರತದಲ್ಲಿ ಭಾಷಾ ಅಲ್ಪಸಂಖ್ಯಾತರು ಜೀವನ್ಮರಣದ ಪ್ರಶ್ನೆ ಎದುರಿಸುತ್ತಿದ್ದಾರೆ. ಇದರ ವಿಸ್ತರಣೆ ಎಂದರೆ, ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ದಮನಿಸುವ ಕ್ರೂರ ಆಳ್ವಿಕೆ.. ಅದರ ಪ್ರಯೋಗವನ್ನು ಈಗಾಗಲೇ ಅನಧಿಕೃತವಾಗಿ ಉತ್ತರ ಪ್ರದೇಶದಲ್ಲಿ ಆರಂಭಿಸಲಾಗಿದೆ.

ರೈತರ ಆದಾಯ ದುಪ್ಪಟ್ಟು ಮಾಡುವ ಆಶ್ವಾಸನೆ ಮತ್ತೆ ಪುನರಾವರ್ತನೆಯಾಗಿದೆ. ಕೃಷಿ ರಂಗವನ್ನೇ ಬರ್ಬಾದ್ ಮಾಡಿದ ಮೋದಿ ಸರ್ಕಾರ ಪ್ರಣಾಳಿಕೆಯಲ್ಲಿ ರೈತರ ಬಗ್ಗೆ ಮಾತಾಡುವುದೇ ಹಾಸ್ಯಾಸ್ಪದ ಅಲ್ಲವೇ?
ಇಡೀ ಪ್ರಣಾಳಿಕೆಯನ್ನು ತಿರುವಿ ಹಾಕಿದರೆ ಅಲ್ಲಿ ಯಾವ ಪ್ರಾಮಾಣಿಕ ಆಶಯವೂ ಕಾಣದು. ಆದರೆ ಮತ್ತೆ ಎಂದಿನಂತೆ ಜನರನ್ನು ಮರಳು ಮಾಡುವ ಮಂದಿರ, ಸೈನ್ಯದ ವಿಚಾರಗಳಿಗೇ ಆದ್ಯತೆ ನೀಡಲಾಗಿದೆ. ಯುವಜನರ ಬಗ್ಗೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತಾಡುವ ಹಕ್ಕನ್ನೇ ಕಳೆದುಕೊಂಡಿರುವ ಮೋದಿ ಟೀಮ್, ಕಪ್ಪು ಹಣದ ಬಗ್ಗೆಯೂ ಮೌನವಾಗಿದೆ!

ಕಪ್ಪುಹಣದಲ್ಲೇ ಮುಳುಗಿ, ತೇಲುತ್ತಿರುವ ಪಾರ್ಟಿ ಕಾಟಾಚಾರಕ್ಕೆ ಒಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಎಂದಿನಂತೆ ಅದರಲ್ಲಿ ನಂಜಿನ ವಾಸನೆ ಎದ್ದು ಹೊಡೆಯುವುದರ ಜೊತೆಗೆ, ಬಿಜೆಪಿ ಹಿಪಾಕ್ರಸಿಯೂ ಅಂತರ್ಗತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...