Homeಮುಖಪುಟಚುನಾವಣೆ ಗೆಲ್ಲಲು ಬಿಜೆಪಿಯವರು 'ರಾಮ ಮಂದಿರದ ಮೇಲೆ ದಾಳಿ' ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

ಚುನಾವಣೆ ಗೆಲ್ಲಲು ಬಿಜೆಪಿಯವರು ‘ರಾಮ ಮಂದಿರದ ಮೇಲೆ ದಾಳಿ’ ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಂಬರು ಲೋಕಸಭಾ ಚುನಾವಣೆ ಗೆಲ್ಲಲು ದೇಶದಲ್ಲಿ ಗಂಭಿರವಾದ ಅನಾಹುತ ಮಾಡಬಹುದು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜಕೀಯ ಲಾಭ ಪಡೆಯಲು ಬಿಜೆಪಿ ನಾಯಕರು ಯಾವುದೇ ಹಂತಕ್ಕೂ ಹೋಗಬಹುದು ಎಂದು ಒತ್ತಿ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ”ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿಯಾಗಿದ್ದು, ರಾಜಕೀಯ ಲಾಭ ಪಡೆಯಲು ರಾಮ ಮಂದಿರದ ಮೇಲೆ ದಾಳಿ ನಡೆಸಲೂಬಹುದು ಅಥವಾ ಬಿಜೆಪಿಯ ಯಾವುದೇ ಪ್ರಭಾವಿ ನಾಯಕನನ್ನು ಕೊಲ್ಲಲೂಬಹುದು. ಅವರ ಅಂತಹ ಕೆಟ್ಟ ತಂತ್ರಗಳನ್ನು ಮಾಡುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನಿರ್ದಯ ಚುನಾವಣಾ ತಂತ್ರಗಳನ್ನು ಪ್ರತಿಪಾದಿಸಿದ ಮಲಿಕ್, ”2019ರ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ, ಇಂತಹ ಘಟನೆಗಳನ್ನು ಉಂಟುಮಾಡುವವರು ರಾಜಕೀಯ ಉದ್ದೇಶಗಳನ್ನು ಸಾಧಿಸಲು ಇನ್ನೂ ಏನು ಬೇಕಾದರೂ ಮಾಡಬಹುದು” ಎಂದರು.

”ಪ್ರಧಾನಿ ಮೋದಿಗೆ ಹೇಗೆ ಆಡಳಿತ ನಡೆಸಬೇಕು ಮತ್ತು ಹೇಗೆ ನಿರ್ದಯವಾಗಿ ಆಡಳಿತ ನಡೆಸಬೇಕು ಎಂದು ತಿಳಿದಿದೆ. ಆದರೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಯಶಸ್ವಿಯಾಗುವುದಿಲ್ಲ ಹಾಗಾಗಿ ಅವರು ಈಗಲೇ ರಾಜೀನಾಮೆ ನೀಡುವುದು ಒಳ್ಳೆಯದು” ಎಂದು ಅವರು ಹೇಳಿದರು.

ಈ ಹಿಂದೆ ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ಪುಲ್ವಾಮಾ ದಾಳಿಯ ಬಗ್ಗೆ ಪ್ರಧಾನಿ ಮೋದಿ ಅವರೇ ಮೌನವಾಗಿರಲು ಹೇಳಿದ್ದರು ಎಂದಿದ್ದರು. ಅಲ್ಲಿ ಅವರು ಸಿಆರ್‌ಪಿಎಫ್ ಬೆಂಗಾವಲು ಪಡೆಯನ್ನು ಸಾಗಿಸಲು ವಿಮಾನಗಳನ್ನು ಕೇಳಿದೆ ಆದರೆ ರಕ್ಷಣಾ ಸಚಿವಾಲಯ ನಿರಾಕರಿಸಿತ್ತು. ಅದರಿಂದಲೇ ಆ ಪುಲ್ವಾಮಾ ದುರಂತ ನಡೆಯಿತು ಎಂದು ಹೇಳಿದ್ದರು.

ಯೋಧರ ಪ್ರಾಣಹಾನಿಯಲ್ಲಿ ನಮ್ಮದೇ ತಪ್ಪು ಮತ್ತು ವಿಮಾನಗಳಿಗೆ ಅನುಮತಿ ನೀಡುವ ಮೂಲಕ ಆ ದಾಳಿಯನ್ನು ತಡೆಯಬಹುದಿತ್ತು ಎಂದು ಮೋದಿ ಅವರಿಗೆ ಹೇಳಿದ್ದೆ. ಆಗ ಪ್ರಧಾನಿ ಮೋದಿ ಅವರು, ದಾಳಿಗೆ ಕಾರಣವಾದ ಲೋಪಗಳ ಬಗ್ಗೆ ಮೌನವಾಗಿಸಿದರು. 2019ರಲ್ಲಿ ದಾಳಿ ನಡೆದಾಗ ಮಲಿಕ್ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಈ ಮಧ್ಯೆ ಮಲಿಕ್ ಅವರು ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸಿದರು, ಸರ್ಕಾರವು ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.

ಈ ಹೇಳಿಕೆಯ ಮೇಲೆ ಇಷ್ಟೊಂದು ವಿಶ್ವಾಸ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದಾಗ, ಅದಕ್ಕೆ ಉತ್ತರವಾಗಿ ಮಲಿಕ್, ಹಿಂಸಾಚಾರದಲ್ಲಿ ಬಳಸುತ್ತಿರುವ ಅಸ್ತ್ರಗಳು ಜನಸಾಮಾನ್ಯರಿಗೆ ಸುಲಭವಾಗಿ ಕೈಗೆಟುಕುವುದಿಲ್ಲ ಎಂದರು.

ಇನ್ಸಾಸ್ ರೈಫಲ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿಲ್ಲ ಆದರೆ ಸರ್ಕಾರದ ಪದಾತಿ ದಳದಲ್ಲಿ ಲಭ್ಯವಿವೆ ಎಂದು ಅವರು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮಣಿಪುರದಲ್ಲಿ ಜನಸಮೂಹವು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಎಂಬ ಹೇಳಿಕೆಗಳನ್ನು ಅವರು ತಳ್ಳಿಹಾಕಿದರು.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...