Homeಮುಖಪುಟಚುನಾವಣೆ ಗೆಲ್ಲಲು ಬಿಜೆಪಿಯವರು 'ರಾಮ ಮಂದಿರದ ಮೇಲೆ ದಾಳಿ' ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

ಚುನಾವಣೆ ಗೆಲ್ಲಲು ಬಿಜೆಪಿಯವರು ‘ರಾಮ ಮಂದಿರದ ಮೇಲೆ ದಾಳಿ’ ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಂಬರು ಲೋಕಸಭಾ ಚುನಾವಣೆ ಗೆಲ್ಲಲು ದೇಶದಲ್ಲಿ ಗಂಭಿರವಾದ ಅನಾಹುತ ಮಾಡಬಹುದು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜಕೀಯ ಲಾಭ ಪಡೆಯಲು ಬಿಜೆಪಿ ನಾಯಕರು ಯಾವುದೇ ಹಂತಕ್ಕೂ ಹೋಗಬಹುದು ಎಂದು ಒತ್ತಿ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ”ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿಯಾಗಿದ್ದು, ರಾಜಕೀಯ ಲಾಭ ಪಡೆಯಲು ರಾಮ ಮಂದಿರದ ಮೇಲೆ ದಾಳಿ ನಡೆಸಲೂಬಹುದು ಅಥವಾ ಬಿಜೆಪಿಯ ಯಾವುದೇ ಪ್ರಭಾವಿ ನಾಯಕನನ್ನು ಕೊಲ್ಲಲೂಬಹುದು. ಅವರ ಅಂತಹ ಕೆಟ್ಟ ತಂತ್ರಗಳನ್ನು ಮಾಡುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನಿರ್ದಯ ಚುನಾವಣಾ ತಂತ್ರಗಳನ್ನು ಪ್ರತಿಪಾದಿಸಿದ ಮಲಿಕ್, ”2019ರ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ, ಇಂತಹ ಘಟನೆಗಳನ್ನು ಉಂಟುಮಾಡುವವರು ರಾಜಕೀಯ ಉದ್ದೇಶಗಳನ್ನು ಸಾಧಿಸಲು ಇನ್ನೂ ಏನು ಬೇಕಾದರೂ ಮಾಡಬಹುದು” ಎಂದರು.

”ಪ್ರಧಾನಿ ಮೋದಿಗೆ ಹೇಗೆ ಆಡಳಿತ ನಡೆಸಬೇಕು ಮತ್ತು ಹೇಗೆ ನಿರ್ದಯವಾಗಿ ಆಡಳಿತ ನಡೆಸಬೇಕು ಎಂದು ತಿಳಿದಿದೆ. ಆದರೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಯಶಸ್ವಿಯಾಗುವುದಿಲ್ಲ ಹಾಗಾಗಿ ಅವರು ಈಗಲೇ ರಾಜೀನಾಮೆ ನೀಡುವುದು ಒಳ್ಳೆಯದು” ಎಂದು ಅವರು ಹೇಳಿದರು.

ಈ ಹಿಂದೆ ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ಪುಲ್ವಾಮಾ ದಾಳಿಯ ಬಗ್ಗೆ ಪ್ರಧಾನಿ ಮೋದಿ ಅವರೇ ಮೌನವಾಗಿರಲು ಹೇಳಿದ್ದರು ಎಂದಿದ್ದರು. ಅಲ್ಲಿ ಅವರು ಸಿಆರ್‌ಪಿಎಫ್ ಬೆಂಗಾವಲು ಪಡೆಯನ್ನು ಸಾಗಿಸಲು ವಿಮಾನಗಳನ್ನು ಕೇಳಿದೆ ಆದರೆ ರಕ್ಷಣಾ ಸಚಿವಾಲಯ ನಿರಾಕರಿಸಿತ್ತು. ಅದರಿಂದಲೇ ಆ ಪುಲ್ವಾಮಾ ದುರಂತ ನಡೆಯಿತು ಎಂದು ಹೇಳಿದ್ದರು.

ಯೋಧರ ಪ್ರಾಣಹಾನಿಯಲ್ಲಿ ನಮ್ಮದೇ ತಪ್ಪು ಮತ್ತು ವಿಮಾನಗಳಿಗೆ ಅನುಮತಿ ನೀಡುವ ಮೂಲಕ ಆ ದಾಳಿಯನ್ನು ತಡೆಯಬಹುದಿತ್ತು ಎಂದು ಮೋದಿ ಅವರಿಗೆ ಹೇಳಿದ್ದೆ. ಆಗ ಪ್ರಧಾನಿ ಮೋದಿ ಅವರು, ದಾಳಿಗೆ ಕಾರಣವಾದ ಲೋಪಗಳ ಬಗ್ಗೆ ಮೌನವಾಗಿಸಿದರು. 2019ರಲ್ಲಿ ದಾಳಿ ನಡೆದಾಗ ಮಲಿಕ್ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಈ ಮಧ್ಯೆ ಮಲಿಕ್ ಅವರು ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸಿದರು, ಸರ್ಕಾರವು ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.

ಈ ಹೇಳಿಕೆಯ ಮೇಲೆ ಇಷ್ಟೊಂದು ವಿಶ್ವಾಸ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದಾಗ, ಅದಕ್ಕೆ ಉತ್ತರವಾಗಿ ಮಲಿಕ್, ಹಿಂಸಾಚಾರದಲ್ಲಿ ಬಳಸುತ್ತಿರುವ ಅಸ್ತ್ರಗಳು ಜನಸಾಮಾನ್ಯರಿಗೆ ಸುಲಭವಾಗಿ ಕೈಗೆಟುಕುವುದಿಲ್ಲ ಎಂದರು.

ಇನ್ಸಾಸ್ ರೈಫಲ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿಲ್ಲ ಆದರೆ ಸರ್ಕಾರದ ಪದಾತಿ ದಳದಲ್ಲಿ ಲಭ್ಯವಿವೆ ಎಂದು ಅವರು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮಣಿಪುರದಲ್ಲಿ ಜನಸಮೂಹವು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಎಂಬ ಹೇಳಿಕೆಗಳನ್ನು ಅವರು ತಳ್ಳಿಹಾಕಿದರು.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...