Homeಮುಖಪುಟಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಮತ್ತು ಇತರ ಐವರನ್ನು ಬಂಧಿಸಲಾಗಿದೆ.

ಭಾನುವಾರ ನಡೆದ ಪ್ರತಿಭಟನೆಯ ಸಂಘಟಕರಲ್ಲಿ ಒಬ್ಬರೆಂದು ಹೇಳಲಾಗಿರುವ ಅಶ್ವಿನಿ ಉಪಾಧ್ಯಾಯರನ್ನು ಸೋಮವಾರ ತಡರಾತ್ರಿಯವರೆಗೆ ಇತರ ಆರೋಪಿಗಳೊಂದಿಗೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

“ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಉಳಿಯಬೇಕಿದ್ದರೇ, ಜೈ ಶ್ರೀ ರಾಮ್ ಎಂದು ಹೇಳಬೇಕು)” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಸಂಸತ್ತಿನಿಂದ ಕೇವಲ ಒಂದು ಕಿಮೀ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜನರು ಇಂತಹ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು.

ಸುಪ್ರೀಂಕೋರ್ಟ್ ವಕೀಲ ಮತ್ತು ದೆಹಲಿ ಬಿಜೆಪಿ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ ಆಯೋಜಿಸಿದ್ದರು ಎಂದು ಹೇಳಲಾದ ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗಲಾಗಿತ್ತು. “ವೈರಲ್ ವಿಡಿಯೊಗಳ ಬಗ್ಗೆ ತಿಳಿದಿಲ್ಲ. ಕೇವಲ ಐದು ಅಥವಾ ಆರು ಜನರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅವರು ಅಂತಹ ಘೋಷಣೆಗಳನ್ನು ಕೂಗಬಾರದಿತ್ತು. ಈ ಘೋಷಣೆಗಳು ಕೂಗುತ್ತಿದ್ದಾ ನಾನು ಕೂಡ ಇರಲಿಲ್ಲ, ಘೋಷಣೆ ಕೂಗಿದವರನ್ನು ನಾನು ಆಹ್ವಾನಿಸಿರಲಿಲ್ಲ. ನಾನು ಪ್ರತಿಭಟನೆಯಿಂದ ಹೋದ ನಂತರ ಇದು ನಡೆದಿರಬೇಕು. ವಿಡಿಯೊಗಳಲ್ಲಿ ಕಾಣುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅಶ್ವಿನಿ ಉಪಾಧ್ಯಾಯ ಹೇಳಿದ್ದರು.

ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಮತ್ತೊಂದು ಹೇಳಿಕೆಯಲ್ಲಿ, ಈ ಪ್ರತಿಭಟನೆಯನ್ನು ಜಂತರ್ ಮಂತರ್‌ನಲ್ಲಿ ಸೇವ್ ಇಂಡಿಯಾ ಫೌಂಡೇಶನ್‌ನವರು ಆಯೋಜಿಸಿದ್ದರು ಎಂದು ಹೇಳಿದ್ದಾರೆ. “ಸೇವ್ ಇಂಡಿಯಾ ಫೌಂಡೇಶನ್ ಟ್ರಸ್ಟ್‌ನೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ. ನಾನು  ಆರ್‌ವಿಎಸ್ ಮಣಿ, ಫಿರೋಜ್ ಬಕ್ತ್ ಅಹ್ಮದ್, ಗಜೇಂದ್ರ ಚೌಹಾಣ್ ಅಲ್ಲಿ ಅತಿಥಿಗಳಾಗಿ ಹೋಗಿದ್ದೇವು” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊಗಳು ವೈರಲ್ ಆದ ಮೇಲೆ, ಅಶ್ವಿನಿ ಉಪಾಧ್ಯಾಯ ಮತ್ತು ವಿಡಿಯೊಗಳಲ್ಲಿ ಗೋಚರಿಸುವವರನ್ನು ಒಳಗೊಂಡಂತೆ ಕಾರ್ಯಕ್ರಮದ ಹಿಂದೆ ಇರುವವರನ್ನು ಪೋಲಿಸರು ಬಂಧಿಸದಿರುವ ಬಗ್ಗೆ ಪೊಲೀಸರ ಮೇಲೆ ಒತ್ತಡ ಹೇರಲಾಗಿತ್ತು. ಅಂತಿಮವಾಗಿ ಸೋಮವಾರ ತಡರಾತ್ರಿ ಕಾರ್ಯನಿರ್ವಹಿಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಳೆಯ ವಸಾಹತುಶಾಹಿ ಯುಗದ ಕಾನೂನುಗಳ ವಿರುದ್ಧವಾಗಿ ಆಯೋಜಿಸಲಾಗಿದ್ದ, “ವಸಾಹತು ಕಾನೂನುಗಳು ಮತ್ತು ಏಕರೂಪದ ಕಾನೂನುಗಳನ್ನು ಮಾಡಿ” ಎಂಬ ಮೆರವಣಿಗೆಯಲ್ಲಿ ಈ ಘೋಷಣೆಗಳನ್ನು ಕೂಗಲಾಗಿದೆ.

ಬಂಧಿತರಲ್ಲಿ ಅಶ್ವಿನಿ ಉಪಾಧ್ಯಾಯ, ಸೇವ್ ಇಂಡಿಯಾದ ನಿರ್ದೇಶಕ ಪ್ರೀತ್ ಸಿಂಗ್, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತಿ ಮತ್ತು ದೀಪಕ್ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....