Homeರಾಷ್ಟ್ರೀಯ‘ಉದಯಪುರ ಹತ್ಯೆಯಲ್ಲಿ ಬಿಜೆಪಿ ಸದಸ್ಯ; ಪ್ರಕರಣದ ದಾರಿ ತಪ್ಪಿಸಲು ಕೇಂದ್ರ ಹುನ್ನಾರ?’: ಕಾಂಗ್ರೆಸ್ ಪ್ರಶ್ನೆ

‘ಉದಯಪುರ ಹತ್ಯೆಯಲ್ಲಿ ಬಿಜೆಪಿ ಸದಸ್ಯ; ಪ್ರಕರಣದ ದಾರಿ ತಪ್ಪಿಸಲು ಕೇಂದ್ರ ಹುನ್ನಾರ?’: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್‌‌ ಹತ್ಯೆಯ ಆರೋಪಿಗಳಲ್ಲಿ ಒಬ್ಬ ಆರೋಪಿಯೂ ಬಿಜೆಪಿ ಜೊತೆಗೆ ಒಡನಾಟ ಇಟ್ಟುಕೊಂಡಿದ್ದನು ಮತ್ತು ಬಿಜೆಪಿ ಸೇರಲು ಬಯಸಿದ್ದನು ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಅಷ್ಟೆ ಅಲ್ಲದೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರೊಬ್ಬರು ಆರೋಪಿಯು ಬಿಜೆಪಿ ಸದಸ್ಯ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು. ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಟೈಲರ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ‘ಬಿಜೆಪಿ ಸದಸ್ಯ’ ಎಂದು ನೇರಾನೇರ ಆರೋಪಿಸಿದ್ದು, ಪ್ರಕರಣದ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೇ ಎಂದು ಪ್ರಶ್ನಿಸಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ.

“ಯಾವುದೇ ಆರೋಪಿಗಳೊಂದಿಗೆ, ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ರಾಜಸ್ಥಾನ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಸಾದಿಕ್ ಖಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಹತ್ಯೆಯು ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೈಲರ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ‘ಬಿಜೆಪಿ ಸದಸ್ಯ’ ಎಂದು ಕಾಂಗ್ರೆಸ್ ಆರೋಪಿಸಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಬೇಕಾಗಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮುಂದಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಉದಯಪುರ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳು ಹೊರ ಹಾಕಿರುವ ವರದಿಯನ್ನು ಉಲ್ಲೇಖಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು, “ಕನ್ಹಯ್ಯಾ ಲಾಲ್‌ನ ಹಂತಕ, ರಿಯಾಜ್ ಅತ್ತಾರಿ ಬಿಜೆಪಿಯ ಸದಸ್ಯ” ಎಂದು ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಬಿಜೆಪಿ ನಾಯಕರಾದ ಇರ್ಷಾದ್ ಚೈನ್‌ವಾಲಾ ಮತ್ತು ಮೊಹಮ್ಮದ್ ತಾಹಿರ್ ಅವರೊಂದಿಗೆ ಹತ್ಯೆಯ ಆರೋಪಿ ಅತ್ತಾರಿ ಇರುವ ಚಿತ್ರಗಳನ್ನು ಉಲ್ಲೇಖಿಸಿದ್ದಾರೆ.

“ಪ್ರಮುಖ ಆರೋಪಿ ರಿಯಾಜ್ ಅತ್ತಾರಿ ಆಗಾಗ್ಗೆ ರಾಜಸ್ಥಾನದ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಗುಲಾಬ್‌ಚಂದ್ ಕಟಾರಿಯಾ ಅವರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು ಎಂಬುದು ಬಹಿರಂಗಪಟ್ಟಿದೆ. ಇದಷ್ಟೇ ಅಲ್ಲ, ಬಿಜೆಪಿಯ ರಾಜಸ್ಥಾನ ಅಲ್ಪಸಂಖ್ಯಾತ ಘಟಕದ ಸಭೆಗಳಲ್ಲಿ ಪ್ರಮುಖ ಆರೋಪಿ ರಿಯಾಜ್ ಅತ್ತಾರಿ ಭಾಗವಹಿಸುತ್ತಿರುವ ಚಿತ್ರಗಳು ಸಹ ಪ್ರಪಂಚದ ಮುಂದೆ ಇವೆ” ಎಂದು ಪವನ್‌ ಖೇರಾ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

ಬಿಜೆಪಿ ನಾಯಕ ಇರ್ಷಾದ್ ಚೈನ್‌ವಾಲಾ ಅವರ ನವೆಂಬರ್ 30, 2018ರ ಫೇಸ್‌ಬುಕ್‌ನಲ್ಲಿ ಮತ್ತು ಮೊಹಮ್ಮದ್ ತಾಹಿರ್ ಅವರ ಫೆಬ್ರವರಿ 3, 2019, ಅಕ್ಟೋಬರ್ 27, 2019, ಆಗಸ್ಟ್ 10, 2021, ನವೆಂಬರ್ 28, 2019ರ ಇತರ ಪೋಸ್ಟ್‌ಗಳಲ್ಲಿ ಅತ್ತಾರಿ ‘ಬಿಜೆಪಿ ನಾಯಕರಿಗೆ ಹತ್ತಿರದವರಾಗಿದ್ದರು’ ಮಾತ್ರವಲ್ಲ, ಬಿಜೆಪಿಯ ಸಕ್ರಿಯ ಸದಸ್ಯರಾಗಿದ್ದರು ಎಂಬುದು ಸ್ಪಷ್ಟವಾಗಿದೆ” ಎಂದು ಪವನ್‌ ಖೇರಾ ಆರೋಪಿಸಿದ್ದಾರೆ.

ಇತರ ಕಾಂಗ್ರೆಸ್ ನಾಯಕರು ಕೂಡಾ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.

ಆದರೆ ಬಿಜೆಪಿಯ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸುದ್ದಿಯನ್ನು, “ನಕಲಿ” ಎಂದು ತಳ್ಳಿಹಾಕಿದ್ದಾರೆ.

“ನೀವು ನಕಲಿ ಸುದ್ದಿಯನ್ನು ಪ್ರಚಾರ ಮಾಡುತ್ತಿದ್ದೀರಿ ಎಂಬುವುದು ನನಗೆ ಆಶ್ಚರ್ಯವಿಲ್ಲ. ಉದಯಪುರದ ಕೊಲೆಗಾರರು ಬಿಜೆಪಿಯ ಸದಸ್ಯರಲ್ಲ. ಪಕ್ಷಕ್ಕೆ ಒಳನುಸುಳಲು ಅವರು ಪ್ರಯತ್ನಿಸಿದ್ದು, ರಾಜೀವ್ ಗಾಂಧಿಯನ್ನು ಕೊಲ್ಲಲು ಬೇಕಾಗಿ ಕಾಂಗ್ರೆಸ್‌ಗೆ ಪ್ರವೇಶಿಸಿದ ಎಲ್‌ಟಿಟಿಇ ಹಂತಕನ ಪ್ರಯತ್ನದಂತಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಭೀಕರ ಹತ್ಯೆ; ಆರೋಪಿಗಳ ಬಂಧನ

ಹತ್ಯೆಗೀಡಾದ ಕನ್ಹಯ್ಯಾ ಲಾಲ್ ಅವರನ್ನು ಮಂಗಳವಾರದಂದು ಇಬ್ಬರು ದುಷ್ಕರ್ಮಿಗಳು ಅವರ ಅಂಗಡಿಯಲ್ಲೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದರು. ಅದರ ನಂತರ ಹಂತಕರು ಕೊಲೆಯನ್ನು ಸಮರ್ಥಿಸಿ, ಅದರ ಹೊಣೆಯನ್ನು ಹೊತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದಾರೆ.

ಪೊಲೀಸರು ಇಬ್ಬರು ಆರೋಪಿಗಳಾದ ರಿಯಾಜ್ ಅಖ್ತರಿ ಮತ್ತು ಗೌಸ್ ಮೊಹಮ್ಮದ್ ಅವರನ್ನು ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...