Homeಕರ್ನಾಟಕಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

- Advertisement -
- Advertisement -

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ.

ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ನೆಟ್ಟಿಗರು ಸಚಿವ ಅಧಿಕಾರವನ್ನು ಬಳಸಿಕೊಂಡು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಿಡಿಕಾರಿದ್ದಾರೆ.

ಈ ಪ್ರಕರಣ ಕುರಿತು ತನಿಖೆ ನಡೆಸುವಂತೆ ನಾಗರೀಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷರಾದ ದಿನೇಶ ಕಲ್ಲಹಳ್ಳಿ ಅವರು ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದರಾದರೂ ಅವರ ದೂರನ್ನು ಪೊಲೀಸರು ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ಈ ದೂರಿನ ಪತ್ರವು ನಾನುಗೌರಿ.ಕಾಮ್‌ಗೆ ಲಭ್ಯವಾಗಿದ್ದು, ದಿನೇಶ ಕಲ್ಲಹಳ್ಳಿ ಅವರು ಸಚಿವರು ಯುವತಿಗೆ ಕೆಲಸದ ಆಮೀಷ ಒಡ್ಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಲೈಂಗಿಕ ಕಿರುಕುಳ ಮಾತ್ರವಲ್ಲದೆ ಯುವತಿಗೆ ಜೀವ ಬೆದರಿಕೆಯನ್ನೂ ಹಾಕುತ್ತಿದ್ದಾರೆಂದು ದೂರಿನಲ್ಲಿ ತಿಳಿಸಿಲಾಗಿದೆ. ದೂರಿನೊಂದಿಗೆ ಲೈಂಗಿಕ ಕಿರುಕುಳದ ಆಡಿಯೊ, ವಿಡಿಯೋ ಸಿಡಿಯನ್ನೂ ಲಗತ್ತಿಸಲಾಗಿದೆ ಎಂದು ಬರೆದಿದ್ದಾರೆ.

 

ತಮ್ಮ ವಿರುದ್ದ ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ರಮೇಶ್‌ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಪ್ರಕರಣದ ಬಗ್ಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು ಸಚಿವ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

“ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಹೇಯ ಕೃತ್ಯ. ಬಿಜೆಪಿ ಪಕ್ಷ ಎಂದರೆ ಕಾಮಲೀಲೆ ಪಕ್ಷ ಎಂದು ಮತ್ತೊಮ್ಮೆ ಸಾಬೀತಾಗಿದೆ. ಅಧಿಕಾರದಲ್ಲಿದ್ದಾಗ ಮುಗ್ಧ ಹೆಣ್ಣುಮಕ್ಕಳ ಬಗ್ಗೆ ನಡೆಯುವ ಇಂತಹ ಕಾಮಲೀಲೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಕೂಡಲೇ ಇವನನ್ನ ಪಕ್ಷದಿಂದ ಅಮಾನತುಗೊಳಿಸಿ ಸಚಿವ ಸಂಪುಟದಿಂದ ವಜಾಗೊಳಿಸದೇ ಹೋದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇವೆ” ಎಂದು ಕಾಂಗ್ರೆಸ್ ಪಕ್ಷವು ಎಚ್ಚರಿಕೆ ನೀಡಿದೆ.

ಕೂಡಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ: ಆಮ್ ಆದ್ಮಿ ಪಕ್ಷ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಆಗ್ರಹ

 

ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಹಾಗೂ ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ನಮ್ಮ ಕರ್ನಾಟಕದ ಘನತೆಗೆ ಕಪ್ಪು ಚುಕ್ಕೆ ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾ ಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಆಗ್ರಹಿಸಿದ್ದಾರೆ.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...