Homeಕರ್ನಾಟಕಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ

- Advertisement -
- Advertisement -

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ.

ಕೆಲಸ ಕೇಳಿಕೊಂಡು ಬಂದಿರುವ ಯುವತಿಯ ಮೇಲೆ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಡಿಯೊ ಮತ್ತು ಆಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ನೆಟ್ಟಿಗರು ಸಚಿವ ಅಧಿಕಾರವನ್ನು ಬಳಸಿಕೊಂಡು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಿಡಿಕಾರಿದ್ದಾರೆ.

ಈ ಪ್ರಕರಣ ಕುರಿತು ತನಿಖೆ ನಡೆಸುವಂತೆ ನಾಗರೀಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷರಾದ ದಿನೇಶ ಕಲ್ಲಹಳ್ಳಿ ಅವರು ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದರಾದರೂ ಅವರ ದೂರನ್ನು ಪೊಲೀಸರು ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನನ್ನನ್ನು ಬಂಧಿಸಲು ಲಿಂಗಾಯತ IPS ಅಧಿಕಾರಿಗಳನ್ನು ಕಳುಹಿಸಿದ್ದರು: ಯತ್ನಾಳ್ ಆರೋಪ

ಈ ದೂರಿನ ಪತ್ರವು ನಾನುಗೌರಿ.ಕಾಮ್‌ಗೆ ಲಭ್ಯವಾಗಿದ್ದು, ದಿನೇಶ ಕಲ್ಲಹಳ್ಳಿ ಅವರು ಸಚಿವರು ಯುವತಿಗೆ ಕೆಲಸದ ಆಮೀಷ ಒಡ್ಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಲೈಂಗಿಕ ಕಿರುಕುಳ ಮಾತ್ರವಲ್ಲದೆ ಯುವತಿಗೆ ಜೀವ ಬೆದರಿಕೆಯನ್ನೂ ಹಾಕುತ್ತಿದ್ದಾರೆಂದು ದೂರಿನಲ್ಲಿ ತಿಳಿಸಿಲಾಗಿದೆ. ದೂರಿನೊಂದಿಗೆ ಲೈಂಗಿಕ ಕಿರುಕುಳದ ಆಡಿಯೊ, ವಿಡಿಯೋ ಸಿಡಿಯನ್ನೂ ಲಗತ್ತಿಸಲಾಗಿದೆ ಎಂದು ಬರೆದಿದ್ದಾರೆ.

 

ತಮ್ಮ ವಿರುದ್ದ ಲೈಂಗಿಕ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಚಿವ ರಮೇಶ್‌ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಪ್ರಕರಣದ ಬಗ್ಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು ಸಚಿವ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

“ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಹೇಯ ಕೃತ್ಯ. ಬಿಜೆಪಿ ಪಕ್ಷ ಎಂದರೆ ಕಾಮಲೀಲೆ ಪಕ್ಷ ಎಂದು ಮತ್ತೊಮ್ಮೆ ಸಾಬೀತಾಗಿದೆ. ಅಧಿಕಾರದಲ್ಲಿದ್ದಾಗ ಮುಗ್ಧ ಹೆಣ್ಣುಮಕ್ಕಳ ಬಗ್ಗೆ ನಡೆಯುವ ಇಂತಹ ಕಾಮಲೀಲೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಕೂಡಲೇ ಇವನನ್ನ ಪಕ್ಷದಿಂದ ಅಮಾನತುಗೊಳಿಸಿ ಸಚಿವ ಸಂಪುಟದಿಂದ ವಜಾಗೊಳಿಸದೇ ಹೋದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇವೆ” ಎಂದು ಕಾಂಗ್ರೆಸ್ ಪಕ್ಷವು ಎಚ್ಚರಿಕೆ ನೀಡಿದೆ.

ಕೂಡಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಿರಿ: ಆಮ್ ಆದ್ಮಿ ಪಕ್ಷ ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ ಆಗ್ರಹ

 

ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಹಾಗೂ ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ನಮ್ಮ ಕರ್ನಾಟಕದ ಘನತೆಗೆ ಕಪ್ಪು ಚುಕ್ಕೆ ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾ ಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಆಗ್ರಹಿಸಿದ್ದಾರೆ.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...